AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ G20 ಶೃಂಗಸಭೆ: ರಿಷಿ ಸುನಕ್​​​ ಸೇರಿದಂತೆ ಇತರೆ ರಾಷ್ಟ್ರ ನಾಯಕರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದೆ. ಜಿ20 ರಾಷ್ಟ್ರಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಬ್ರಿಟನ್ ಪ್ರಧಾನಿ ರಿಷಿ ಸುನಕ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಪ್ರಧಾನಿ ಮೋದಿ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ.

ದೆಹಲಿಯಲ್ಲಿ G20 ಶೃಂಗಸಭೆ: ರಿಷಿ ಸುನಕ್​​​ ಸೇರಿದಂತೆ ಇತರೆ ರಾಷ್ಟ್ರ ನಾಯಕರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ರಾಷ್ಟ್ರ ನಾಯಕರೊಂದಿಗೆ ಪ್ರಧಾನಿ ಮೋದಿ
ಗಂಗಾಧರ​ ಬ. ಸಾಬೋಜಿ
|

Updated on:Sep 09, 2023 | 10:10 PM

Share

ದೆಹಲಿ ಸೆಪ್ಟೆಂಬರ್ 09: ಜಿ20 ಶೃಂಗಸಭೆಗಾಗಿ (G20 Summit) ಭಾರತಕ್ಕೆ ಆಗಮಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್​​ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಅಕ್ಟೋಬರ್ 2022 ರಲ್ಲಿ ಪ್ರಧಾನಿಯಾದ ಬಳಿಕ ರಿಷಿ ಸುನಕ್ ಅವರು ಮೊದಲ ಭಾರೀಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ವಿವಿಧ G20 ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಉನ್ನತ ಮಟ್ಟದಲ್ಲಿ ಭಾಗವಹಿಸುವುದರೊಂದಿಗೆ ಗುರುತಿಸಲ್ಪಟ್ಟ ಭಾರತದ ಜಿ 20 ಅಧ್ಯಕ್ಷತೆಯಲ್ಲಿ ಯುಕೆಯ ಬೆಂಬಲಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ವ್ಯಾಪಾರ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಸಲು ಮತ್ತು ಹೂಡಿಕೆಯನ್ನು ಉತ್ತೇಜಿಸುವ ಕುರಿತಾಗಿ ನಾವು ಚರ್ಚಿಸಿದ್ದೇವೆ. ಭಾರತ ಮತ್ತು ಯುಕೆ ಸಮೃದ್ಧ ಮತ್ತು ಜಾಗತಿಕ ಸುಸ್ಥಿರ ಅಭವೃದ್ಧಿ ಕೆಲಸ ಮಾಡುತ್ತಲೇ ಇರುತ್ತವೆ. ಪ್ರಧಾನಿ ರಿಷಿ ಸುನಕ್​ ಅವರನ್ನು ಭೇಟಿ ಮಾಡಿ ಖುಷಿ ಆಗಿದೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಆರ್ಥಿಕತೆ, ರಕ್ಷಣೆ ಮತ್ತು ಭದ್ರತೆ, ತಂತ್ರಜ್ಞಾನ, ಹಸಿರು ತಂತ್ರಜ್ಞಾನ ಮತ್ತು ಹವಾಮಾನ ಬದಲಾವಣೆ, ಆರೋಗ್ಯ ಕ್ಷೇತ್ರಗಳ ಬಗ್ಗೆ ಇಬ್ಬರೂ ನಾಯಕರು ಪ್ರಾಮುಖ್ಯತೆ ಮತ್ತು ಪರಸ್ಪರ ಹಿತಾಸಕ್ತಿಯ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಇದು ಮೋದಿ ಗ್ಯಾರಂಟಿ: ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಕಾಯಂ ಸದಸ್ಯತ್ವ ಬಗ್ಗೆ ಎಸ್ ಜೈಶಂಕರ್

ಅದೇ ರೀತಿಯಾಗಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ಮಾಡಿದ್ದಾರೆ. ಮಾರ್ಚ್ 2023 ರಲ್ಲಿ ಅಧಿಕೃತ ಭೇಟಿಯ ಬಳಿಕ ಪ್ರಧಾನಿ ಮೆಲೋನಿ ಅವರ ಎರಡನೇ ಭಾರತ ಭೇಟಿ ಇದಾಗಿದೆ. ಈ ಸಮಯದಲ್ಲಿ ದ್ವಿಪಕ್ಷೀಯ ಸಂಬಂಧಗಳ ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟವನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಭಾರತದ ಜಿ 20 ಅಧ್ಯಕ್ಷತೆಗೆ ಬೆಂಬಲ ಮತ್ತು ಜಾಗತಿಕ ಜೈವಿಕ ಇಂಧನ ಒಕ್ಕೂಟ ಮತ್ತು ಭಾರತ – ಮಧ್ಯಪ್ರಾಚ್ಯ – ಯುರೋಪ್ ಆರ್ಥಿಕ ಕಾರಿಡಾತ್​ಗೆ ಇಟಲಿಯ ಬೆಂಬಲವನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ವ್ಯಾಪಾರ, ವಾಣಿಜ್ಯ, ರಕ್ಷಣೆ, ಹೊಸ ಬಗೆಯ ತಂತ್ರಜ್ಞಾನಗಳು ಮತ್ತು ಜಾಗತಿಕ ಏಳಿಗೆಗಾಗಿ ಭಾರತ ಮತ್ತು ಇಟಲಿ ಒಟ್ಟಾಗಿ ಕೆಲಸ ಮಾಡಲಿವೆ. ಜಾರ್ಜಿಯಾ ಮೆಲೋನಿ ಅವರೊಂದಿಗೆ ಉತ್ತಮ ಮಾತುಕತೆ ನಡೆಸಿರುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ಅಂಗೀಕರಿಸಲಿರುವ ‘ನವದೆಹಲಿ ಘೋಷಣೆ’ಗೆ ಒಮ್ಮತ; ನಾಯಕರು ಏನು ಹೇಳಿದರು?

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಪ್ರಧಾನಿ ನರೇಂದ್ರ ಇಂದು ದ್ವಿಪಕ್ಷೀಯ ಸಭೆ ಮಾಡಿದ್ದಾರೆ. ಸಭೆಯಲ್ಲಿ, ಉಭಯ ದೇಶಗಳು ತಮ್ಮ ತಮ್ಮ ಜಿ -20 ಮತ್ತು ಜಿ -7 ಪ್ರೆಸಿಡೆನ್ಸಿ ಆದ್ಯತೆಗಳ ಬಗ್ಗೆ, ವಿಶೇಷವಾಗಿ ಜಾಗತಿಕ ದಕ್ಷಿಣದ ಕಾಳಜಿ ಮತ್ತು ಆಕಾಂಕ್ಷೆಗಳನ್ನು ಮುನ್ನೆಲೆಗೆ ತರುವಲ್ಲಿ ವರ್ಷವಿಡೀ ರಚನಾತ್ಮಕ ಕಾರ್ಯವಿಧಾನಕ್ಕೆ ನಾಯಕರು ಒಪ್ಪಿಕೊಂಡಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿ, ತಾಂತ್ರಿಕ ಸಹಯೋಗ, ಹೂಡಿಕೆ ಮತ್ತು ಇಂಧನ ಸೇರಿದಂತೆ ಭಾರತ-ಜಪಾನ್ ದ್ವಿಪಕ್ಷೀಯ ಪಾಲುದಾರಿಕೆಯ ವಿವಿಧ ಅಂಶಗಳ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ. ಜೊತೆಗೆ ಭಾರತ-ಜಪಾನ್ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಸಂಕಲ್ಪ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:09 pm, Sat, 9 September 23

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್