AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದೆ ಇಂಡಿಯಾ ಬದಲು ಭಾರತ್ ನಾಮಫಲಕ

ಶುಕ್ರವಾರ, ವಿಶ್ವಸಂಸ್ಥೆಯು ದಾಖಲೆಗಳಲ್ಲಿ ಇಂಡಿಯಾ ಹೆಸರನ್ನು ಭಾರತ್ ಎಂದು ಬದಲಾಯಿಸುವುದಾಗಿ ಹೇಳಿದೆ. ಭಾರತ ಸರ್ಕಾರ ಇದಕ್ಕೆ ಸಂಬಂಧಿಸಿದ ಎಲ್ಲಾ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಈ ಕೆಲಸ ಮಾಡುತ್ತೇವೆ ಎಂದು ವಿಶ್ವಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಇಂಡಿಯಾ ಹೆಸರನ್ನು ಬದಲಾಯಿಸುವ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದಾಗ, ಅವರು ನಮಗೆ ತಿಳಿಸುತ್ತಾರೆ. ನಾವು ಯುಎನ್ ದಾಖಲೆಗಳಲ್ಲಿ ಹೆಸರನ್ನು ಬದಲಾಯಿಸುತ್ತೇವೆ ಎಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ಮುಖ್ಯ ವಕ್ತಾರ

G20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದೆ ಇಂಡಿಯಾ ಬದಲು ಭಾರತ್ ನಾಮಫಲಕ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 09, 2023 | 12:50 PM

Share

ದೆಹಲಿ ಸೆಪ್ಟೆಂಬರ್ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ (G20 Summit) ಉದ್ಘಾಟನಾ ಭಾಷಣ ಮಾಡಿದ್ದಾರೆ.ಅಲ್ಲಿನ ವಿಡಿಯೊ ನೋಡಿದರೆ ಪ್ರಧಾನಿಯ ಮುಂದೆ ಇಡಲಾದ ನಾಮಫಲಕದಲ್ಲಿ ಇಂಡಿಯಾ ಬದಲಿಗೆ ಭಾರತ್  (Bharat)ಎಂದು ಬರೆಯಲಾಗಿದೆ. ಈ ವಾರಾಂತ್ಯದಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶಿ ನಾಯಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿ ನೀಡಿದ ಭೋಜನಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲು ಪ್ರೆಸಿಡೆಂಟ್ ಆಫ್ ಭಾರತ್ ಎಂದ ಬರೆದಿದ್ದು, ಇದು ಭಾರೀ ಚರ್ಚೆಗೀಡಾಗಿತ್ತು.

ಶುಕ್ರವಾರ, ವಿಶ್ವಸಂಸ್ಥೆಯು ದಾಖಲೆಗಳಲ್ಲಿ ಇಂಡಿಯಾ ಹೆಸರನ್ನು ಭಾರತ್ ಎಂದು ಬದಲಾಯಿಸುವುದಾಗಿ ಹೇಳಿದೆ. ಭಾರತ ಸರ್ಕಾರ ಇದಕ್ಕೆ ಸಂಬಂಧಿಸಿದ ಎಲ್ಲಾ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಈ ಕೆಲಸ ಮಾಡುತ್ತೇವೆ ಎಂದು ವಿಶ್ವಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಇಂಡಿಯಾ ಹೆಸರನ್ನು ಬದಲಾಯಿಸುವ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದಾಗ, ಅವರು ನಮಗೆ ತಿಳಿಸುತ್ತಾರೆ. ನಾವು ಯುಎನ್ ದಾಖಲೆಗಳಲ್ಲಿ ಹೆಸರನ್ನು ಬದಲಾಯಿಸುತ್ತೇವೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ಮುಖ್ಯ ವಕ್ತಾರ ಸ್ಟೀಫನ್ ಡುಜಾರಿಕ್ ಎನ್​​​ಡಿಟಿವಿಗೆ ತಿಳಿಸಿದ್ದಾರೆ.

ಮುಂಬರುವ ಸಂಸತ್ ವಿಶೇಷ ಅಧಿವೇಶನಕ್ಕೆ ಮುಂಚಿತವಾಗಿ ಇಂಡಿಯಾ- ಭಾರತ್ ಚರ್ಚೆ ನಡೆದಿದೆ. ಅಂದಹಾಗೆ ಅಧಿವೇಶನದ ರ ಕಾರ್ಯಸೂಚಿಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಹಾಗಾಗಿ ಅಧಿವೇಶನದಲ್ಲಿ ಹೆಸರು ಬದಲಾವಣೆ ಮಸೂದೆ ಇಲ್ಲಿ ಅಂಗೀಕರಿಸಬಹುದು ಎಂಬ ವದಂತಿ ಹರಡಿದ. ಆಡಳಿತಾರೂಢ ಬಿಜೆಪಿಯ ಸದಸ್ಯರು ಭಾರತ್ ಎಂಬ ಹೆಸರಿಗೆ ಇಂಡಿಯಾಗಿಂತ ಪ್ರಾಮುಖ್ಯತೆ ನೀಡಬೇಕು ಎಂದು ಸೂಚಿಸಿದರೆ, ವಿರೋಧ ಪಕ್ಷದ ನಾಯಕರು ಇದನ್ನು ಸಂವಿಧಾನದಲ್ಲಿ ‘ಭಾರತ್’ ಎಂದು ಈಗಾಗಲೇ ಉಲ್ಲೇಖಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:  G20 Summit 2023: ಇದು ಜನರ ಜಿ20 ಎಂದ ಪ್ರಧಾನಿ ಮೋದಿ, ಆಫ್ರಿಕನ್ ಯೂನಿಯನ್​ಗೆ ಸದಸ್ಯತ್ವ ಘೋಷಣೆ

‘ಭಾರತ್’ ವಿಚಾರದಲ್ಲಿ ರಾಜಕೀಯ ಗಲಾಟೆ ತಪ್ಪಿಸುವಂತೆ ಸಚಿವರಿಗೆ ಮೋದಿ ಸೂಚನೆ

ಮೋದಿ ಅವರು ಬುಧವಾರ ತಮ್ಮ ಸಚಿವ ಸಹೋದ್ಯೋಗಿಗಳಿಗೆ ‘ಭಾರತ್’ ವಿಷಯದ ಸುತ್ತಲಿನ ರಾಜಕೀಯ ಗದ್ದಲವನ್ನು ತಪ್ಪಿಸಲು ಹೇಳಿದ್ದು, ಇದು ದೇಶದ ಪ್ರಾಚೀನ ಹೆಸರಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಇಂಗ್ಲಿಷ್ ಆವೃತ್ತಿಯ ಪೀಠಿಕೆಯು ” We, the people of India… ಎಂಬ ಪದಗಳೊಂದಿಗೆ ಪ್ರಾರಂಭವಾಗುತ್ತದೆ. ಸಂವಿಧಾನದಲ್ಲಿ “India, that is Bharat, shall be a Union of States” ಎಂದು ಹೇಳುತ್ತದೆ.

ಸಂವಿಧಾನ ಹಿಂದಿಯಲ್ಲಿ ಇಂಡಿಯಾ ಇರುವಲ್ಲೆಲ್ಲ ಭಾರತ್ ಎಂದು ಇದೆ. ದೇಶದ ಹೆಸರುಗಳನ್ನು ವ್ಯಾಖ್ಯಾನಿಸುವ ಭಾಗವನ್ನು ಹೊರತುಪಡಿಸಿ, ಹಿಂದಿಯಲ್ಲಿ Bharat, that is India, shall be a Union of States ಎಂದು ಇದರಲ್ಲಿ ಇದೆ. ಇಂಡಿಯಾ ಹೆಸರನ್ನು ಭಾರತ್ ಎಂದು ಬದಲಾಯಿಸಲು ಸಂವಿಧಾನದ ತಿದ್ದುಪಡಿಯ ಅಗತ್ಯವಿರುತ್ತದೆ, ಇದನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!