AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ ಹಿನ್ನೆಲೆ ದೆಹಲಿಯಲ್ಲಿ ಸೆ.8ರಿಂದ 10ರವರೆಗೆ ಸ್ವಿಗ್ಗಿ, ಅಮೆಜಾನ್​ ಸೇರಿದಂತೆ ಆನ್​ಲೈನ್ ಡೆಲಿವರಿಗೆ ನಿಷೇಧ

ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಿಂದ 10ರವರೆಗೆ ಆನ್​ಲೈನ್ ಆಹಾರ ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ, ದೆಹಲಿ ಜನ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಲು ಸಾಧ್ಯವಾಗುವುದಿಲ್ಲ.

ಜಿ20 ಶೃಂಗಸಭೆ ಹಿನ್ನೆಲೆ ದೆಹಲಿಯಲ್ಲಿ ಸೆ.8ರಿಂದ 10ರವರೆಗೆ ಸ್ವಿಗ್ಗಿ, ಅಮೆಜಾನ್​ ಸೇರಿದಂತೆ ಆನ್​ಲೈನ್ ಡೆಲಿವರಿಗೆ ನಿಷೇಧ
ಸ್ವಿಗ್ಗಿImage Credit source: NDTV
ನಯನಾ ರಾಜೀವ್
| Updated By: Digi Tech Desk|

Updated on:Sep 05, 2023 | 10:48 AM

Share

ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಿಂದ 10ರವರೆಗೆ ಆನ್​ಲೈನ್ ಆಹಾರ ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ, ದೆಹಲಿ ಜನ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಲು ಸಾಧ್ಯವಾಗುವುದಿಲ್ಲ. ಸ್ವಿಗ್ಗಿ, ಅಮೆಜಾನ್​ ಸೇರಿದಂತೆ ಇತರೆ ಆನ್​ಲೈನ್ ವಿತರಣೆಯನ್ನು ತಡೆಹಿಡಿಯಲಾಗಿದೆ. ಇದರಿಂದಾಗಿ ಆನ್‌ಲೈನ್ ಆಹಾರ ಸೇವೆಗಳು ಲಭ್ಯವಿರುವುದಿಲ್ಲ. ಯಾವುದೇ ಆನ್‌ಲೈನ್ ವಿತರಣೆಯನ್ನು ಅನುಮತಿಸಲಾಗುವುದಿಲ್ಲ ಎಂದು ವಿಶೇಷ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಹೇಳಿದ್ದಾರೆ.

ಅದು ಆಹಾರವಾಗಲಿ ಅಥವಾ ಇತರ ಸರಕುಗಳ ವಿತರಣೆಯಾಗಲಿ, ಅದರ ಮೇಲೆ ನಿಷೇಧವಿರುತ್ತದೆ. ಸೆಪ್ಟೆಂಬರ್ 7 ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಯಲ್ಲಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರ ನಿರ್ಬಂಧಗಳು ಮುಖ್ಯವಾಗಿ ಧೌಲಾ ಕುವಾನ್ ಮಾರ್ಗದ ಮೇಲೆ ಪರಿಣಾಮ ಬೀರುತ್ತವೆ. ಸೆಪ್ಟೆಂಬರ್ 8 ರಂದು ಮನೆಯಿಂದ ಕೆಲಸ ನೀತಿಯನ್ನು ಜಾರಿಗೆ ತರಲು ಗುರುಗ್ರಾಮದ ಕಂಪನಿಗಳಿಗೆ ಪೊಲೀಸರು ಸಲಹೆ ನೀಡಿದ್ದಾರೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ದೆಹಲಿಯ ಈ ಪ್ರಸಿದ್ಧ ಹೋಟೆಲ್​ಗಳಲ್ಲಿ ಉಳಿಯಲಿದ್ದಾರೆ ಜೋ ಬೈಡನ್ ಸೇರಿದಂತೆ ಇತರೆ ವಿಶ್ವ ನಾಯಕರು

ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 8 ರಿಂದ 10 ರವರೆಗೆ ಸಾರ್ವಜನಿಕ ರಜೆ ಘೋಷಿಸಿದೆ. ಸೆಪ್ಟೆಂಬರ್ 8, 9 ಮತ್ತು 10 ರಂದು ತಮ್ಮ ನೌಕರರು ಮತ್ತು ಕಾರ್ಮಿಕರಿಗೆ ವೇತನದೊಂದಿಗೆ ರಜೆ ನೀಡುವಂತೆ ಸರ್ಕಾರವು ನಗರದ ಅಂಗಡಿಗಳು, ವ್ಯಾಪಾರಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೂಚಿಸಿದೆ.

ಶೃಂಗಸಭೆಯ ಸಮಯದಲ್ಲಿ ದೆಹಲಿಯು ಹೈ ಅಲರ್ಟ್ ಆಗಿರುತ್ತದೆ. ದೆಹಲಿಯು ವಿಶ್ವ ನಾಯಕರಿಗೆ ಆತಿಥ್ಯ ನೀಡುತ್ತಿದೆ, ಆದ್ದರಿಂದ ನಗರದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಈ ಸಮಯದಲ್ಲಿ, ಔಷಧಗಳನ್ನು ಹೊರತುಪಡಿಸಿ ಎಲ್ಲಾ ಆನ್‌ಲೈನ್ ಆಹಾರ ವಿತರಣಾ ಸೇವೆಗಳನ್ನು ನವದೆಹಲಿ ಜಿಲ್ಲೆಯಲ್ಲಿ ನಿಷೇಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:59 am, Tue, 5 September 23

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು