AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ಪ್ರವಾಸಿ ಸ್ಮಾರ್ಟ್​ ಕಾರ್ಡ್​ ಬಿಡುಗಡೆ ಮಾಡಿದ ದೆಹಲಿ ಮೆಟ್ರೋ

ದೆಹಲಿ ಮೆಟ್ರೋ ಕೂಡ ಜಿ20ಗೆ ಸಂಬಂಧಿಸಿದ ಸಿದ್ಧತೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಭಾರತವು ಸೆಪ್ಟೆಂಬರ್ 9 ಹಾಗೂ 10ರಂದು ದೆಹಲಿಯಲ್ಲಿ ಜಿ20 ಶೃಂಗಸಭೆಯನ್ನು ಆಯೋಜಿಸುತ್ತಿದೆ. ಭದ್ರತೆಯ ದೃಷ್ಟಿಯಿಂದ ದೆಹಲಿಯನ್ನು ಅಜೇಯ ಕೋಟೆಯಾಗಿ ಪರಿವರ್ತಿಸಲಾಗುತ್ತಿದೆ ಮತ್ತೊಂದೆಡೆ, ವಿಶ್ವದ ಅತಿದೊಡ್ಡ ಮೆಟ್ರೋ ನೆಟ್‌ವರ್ಕ್‌ಗಳಲ್ಲಿ ಒಂದಾದ ದೆಹಲಿ ಮೆಟ್ರೋ, G-20 ಪ್ರತಿನಿಧಿಗಳು, ಅಂತಾರಾರಾಷ್ಟ್ರೀಯ ಅತಿಥಿಗಳು ಮತ್ತು ಸಾಮಾನ್ಯ ಪ್ರಯಾಣಿಕರಿಗೆ ಅತ್ಯುತ್ತಮ ಪ್ರವಾಸಿ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡುತ್ತಿದೆ.

ಜಿ20 ಶೃಂಗಸಭೆ: ಪ್ರವಾಸಿ ಸ್ಮಾರ್ಟ್​ ಕಾರ್ಡ್​ ಬಿಡುಗಡೆ ಮಾಡಿದ ದೆಹಲಿ ಮೆಟ್ರೋ
ದೆಹಲಿ ಮೆಟ್ರೋ
ನಯನಾ ರಾಜೀವ್
|

Updated on: Sep 07, 2023 | 2:36 PM

Share

ದೆಹಲಿ ಮೆಟ್ರೋ ಕೂಡ ಜಿ20ಗೆ ಸಂಬಂಧಿಸಿದ ಸಿದ್ಧತೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಭಾರತವು ಸೆಪ್ಟೆಂಬರ್ 9 ಹಾಗೂ 10ರಂದು ದೆಹಲಿಯಲ್ಲಿ ಜಿ20 ಶೃಂಗಸಭೆಯನ್ನು ಆಯೋಜಿಸುತ್ತಿದೆ. ಭದ್ರತೆಯ ದೃಷ್ಟಿಯಿಂದ ದೆಹಲಿಯನ್ನು ಅಜೇಯ ಕೋಟೆಯಾಗಿ ಪರಿವರ್ತಿಸಲಾಗುತ್ತಿದೆ ಮತ್ತೊಂದೆಡೆ, ವಿಶ್ವದ ಅತಿದೊಡ್ಡ ಮೆಟ್ರೋ ನೆಟ್‌ವರ್ಕ್‌ಗಳಲ್ಲಿ ಒಂದಾದ ದೆಹಲಿ ಮೆಟ್ರೋ, G-20 ಪ್ರತಿನಿಧಿಗಳು, ಅಂತಾರಾರಾಷ್ಟ್ರೀಯ ಅತಿಥಿಗಳು ಮತ್ತು ಸಾಮಾನ್ಯ ಪ್ರಯಾಣಿಕರಿಗೆ ಅತ್ಯುತ್ತಮ ಪ್ರವಾಸಿ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡುತ್ತಿದೆ.

ಈ ಕಾರ್ಡ್ ಮೂಲಕ ಪ್ರಯಾಣಿಕರು ದೆಹಲಿಯಾದ್ಯಂತ ಅನಿಯಮಿತವಾಗಿ ಪ್ರಯಾಣಿಸಬಹುದು. ಪ್ರವಾಸಿಗರು ಈ ಕಾರ್ಡ್ ಅನ್ನು ರಾಜಧಾನಿಯ ವಿವಿಧ ಮೆಟ್ರೋ ನಿಲ್ದಾಣಗಳಿಂದ 10 ದಿನಗಳವರೆಗೆ ಖರೀದಿಸಬಹುದು ಮತ್ತು ಕಡಿಮೆ ಹಣದಲ್ಲಿ ಮೆಟ್ರೋದಲ್ಲಿ ಇಡೀ ದೆಹಲಿಯನ್ನು ಸುತ್ತಾಡಬಹುದು.

ಸ್ಮಾರ್ಟ್​ ಕಾರ್ಡ್​ಗಳಲ್ಲಿ ಎರಡು ವಿಧ, ಒಂದು ದಿನದ ಮಾನ್ಯತೆ ಮತ್ತು ಮೂರು ದಿನಗಳ ಮಾನ್ಯತೆ ಹೊಂದಿರುವ ಪ್ರವಾಸಿ ಸ್ಮಾರ್ಟ್ ಕಾರ್ಡ್‌ಗಳಿವೆ. ಒಂದು ದಿನದ ವ್ಯಾಲಿಡಿಟಿಯ ಟೂರಿಸ್ಟ್ ಸ್ಮಾರ್ಟ್ ಕಾರ್ಡ್ ಬೆಲೆ 200 ರೂಪಾಯಿ ಆಗಿದ್ದರೆ, ಮೂರು ದಿನಗಳ ವ್ಯಾಲಿಡಿಟಿಯ ಟೂರಿಸ್ಟ್ ಸ್ಮಾರ್ಟ್ ಕಾರ್ಡ್ 500 ರೂಪಾಯಿಗೆ ಲಭ್ಯವಿರುತ್ತದೆ. ಇದು 50 ರೂ ಮರುಪಾವತಿಸಬಹುದಾದ ಭದ್ರತಾ ಠೇವಣಿ ಒಳಗೊಂಡಿದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ಮೆಟ್ರೋವನ್ನು ಬೆಳಗ್ಗೆ ಬೇಗ ಪ್ರಾರಂಭಿಸುವಂತೆ ಡಿಎಂಆರ್​ಸಿಗೆ ದೆಹಲಿ ಪೊಲೀಸ್ ಆಯುಕ್ತರ ಪತ್ರ

ಈ ಮೆಟ್ರೋ ನಿಲ್ದಾಣಗಳಲ್ಲಿ ಸ್ಮಾರ್ಟ್ ಕಾರ್ಡ್‌ಗಳು ಲಭ್ಯವಿರುತ್ತವೆ ಪ್ರವಾಸಿ ಸ್ಮಾರ್ಟ್ ಕಾರ್ಡ್ ಪಟೇಲ್ ಚೌಕ್, ಕೇಂದ್ರ ಸಚಿವಾಲಯ, ಉದ್ಯೋಗ ಭವನ, ಲೋಕ ಕಲ್ಯಾಣ ಮಾರ್ಗ, ಜೋರ್ ಬಾಗ್, ದೆಹಲಿ ಹಾತ್ INA, ಕಾಶ್ಮೀರ ಗೇಟ್, ಚಾಂದಿನಿ ಚೌಕ್, ಚಾವ್ರಿ ಬಜಾರ್, ನವದೆಹಲಿ, ರಾಜೀವ್ ಚೌಕ್, ಕೆಂಪು ಕೋಟೆ, ಜಾಮಾ ಮಸೀದಿ, ದೆಹಲಿ ಗೇಟ್, ಐಟಿ, ಮಂಡಿ ಹೌಸ್, ಜನಪಥ್, ಖಾನ್ ಮಾರ್ಕೆಟ್, JLN ಸ್ಟೇಡಿಯಂ, ಜಂಗ್‌ಪುರ, ಲಜಪತ್ ನಗರ, ಬರಖಾಂಬ ರಸ್ತೆ, ರಾಮಕೃಷ್ಣ ಆಶ್ರಮ ಮಾರ್ಗ, ಝಂಡೆವಾಲನ್, ಸುಪ್ರೀಂ ಕೋರ್ಟ್, ಇಂದ್ರಪ್ರಸ್ಥ, ಅಕ್ಷರಧಾಮ, ಟರ್ಮಿನಲ್ 1 IGI ವಿಮಾನ ನಿಲ್ದಾಣ, ಕರೋಲ್ ಬಾಗ್ , ಸರೋಜಿನಿ ನಗರ, ಛತ್ತರ್‌ಪುರ, ಕುತುಬ್ ಮಿನಾರ್, ಟಿಕೆಟ್‌ಗಳು ಹೌಜ್ ಖಾಸ್, ನೆಹರು ಪ್ಲೇಸ್, ಕಲ್ಕಾಜಿ ದೇವಸ್ಥಾನದ ಕೌಂಟರ್​ನಲ್ಲಿ ಲಭ್ಯವಿರಲಿದೆ.

ಮೆಟ್ರೋ ಸ್ಮಾರ್ಟ್ ಕಾರ್ಡ್‌ನ ಪ್ರಯೋಜನಗಳು ಮೊದಲ ಮೆಟ್ರೋ ನಿಲ್ದಾಣದಿಂದ ಕೊನೆಯ ಮೆಟ್ರೋ ಸೇವೆಯವರೆಗೆ ಪ್ರಯಾಣಿಕರು ಯಾವುದೇ ಅಡೆತಡೆಯಿಲ್ಲದೆ ಪ್ರಯಾಣಿಸಲು ಸಾಧ್ಯವಾಗುವುದು ಈ ಟೂರಿಸ್ಟ್ ಕಾರ್ಡ್‌ನ ಪ್ರಯೋಜನವಾಗಿದೆ.

ಯಾವುದೇ ನಿಲ್ದಾಣದಲ್ಲಿ ಪ್ರವೇಶ/ನಿರ್ಗಮನ, ವ್ಯವಸ್ಥೆಯಲ್ಲಿ ವಿಸ್ತೃತ ತಂಗುವಿಕೆ, ದೂರದ ಪ್ರಯಾಣ ಇತ್ಯಾದಿಗಳಿಗಾಗಿ ಪ್ರವಾಸಿ ಸ್ಮಾರ್ಟ್ ಕಾರ್ಡ್‌ಗೆ ಯಾವುದೇ ದಂಡ ಅಥವಾ ಹೆಚ್ಚುವರಿ ಶುಲ್ಕಗಳನ್ನು ವಿಧಿಸಲಾಗುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ