AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮದಲ್ಲಿ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ

ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ. ಗುರುಗ್ರಾಮದಲ್ಲಿರುವ ವಿವಿಧ ಕಾರ್ಪೊರೇಟ್ ಕಚೇರಿಗಳು ವಾರಾಂತ್ಯದಲ್ಲಿ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆಯನ್ನು ಕಲ್ಪಿಸಿದೆ. G20 ಶೃಂಗಸಭೆಯಲ್ಲಿ 29 ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ರಾಷ್ಟ್ರಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಜಿ20 ಶೃಂಗಸಭೆ: ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮದಲ್ಲಿ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ
ವರ್ಕ್​ ಫ್ರಂ ಹೋಂ
ನಯನಾ ರಾಜೀವ್
|

Updated on: Sep 06, 2023 | 2:27 PM

Share

ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ. ಗುರುಗ್ರಾಮದಲ್ಲಿರುವ ವಿವಿಧ ಕಾರ್ಪೊರೇಟ್ ಕಚೇರಿಗಳು ವಾರಾಂತ್ಯದಲ್ಲಿ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆಯನ್ನು ಕಲ್ಪಿಸಿದೆ. G20 ಶೃಂಗಸಭೆಯಲ್ಲಿ 29 ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ರಾಷ್ಟ್ರಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ದೆಹಲಿ ಸರ್ಕಾರವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಬ್ಯಾಂಕುಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಸೆಪ್ಟೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ನಗರದಲ್ಲಿ ಮುಚ್ಚುವಂತೆ ಆದೇಶಿಸಿದೆ. ನಿರ್ಬಂಧಗಳು ಮತ್ತು ಭದ್ರತಾ ವ್ಯವಸ್ಥೆಗಳ ಹಿನ್ನೆಲೆಯಲ್ಲಿ, ದೆಹಲಿಯ ಖಾಸಗಿ ಮತ್ತು ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 8-10ರವರೆಗೆ ಮುಚ್ಚಿರಲಿದೆ.

ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರು ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ವ್ಯವಸ್ಥಾಪಕ ನಿರ್ದೇಶಕ ವಿಕಾಸ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8, 9 ಮತ್ತು 10 ರಂದು ಬೆಳಿಗ್ಗೆ 4 ಗಂಟೆಗೆ ರಾಷ್ಟ್ರ ರಾಜಧಾನಿಯಲ್ಲಿ ಮೆಟ್ರೋ ಸೇವೆಗಳನ್ನು ಪ್ರಾರಂಭಿಸುವಂತೆ ಮನವಿ ಮಾಡಿದ್ದಾರೆ. G20 ಶೃಂಗಸಭೆಯ ಸಮಯದಲ್ಲಿ ಭದ್ರತಾ ವ್ಯವಸ್ಥೆಗಳಲ್ಲಿ ತೊಡಗಿರುವ ಪೊಲೀಸ್ ಸಿಬ್ಬಂದಿಯ ಪ್ರಯಾಣಕ್ಕೆ ಅನುಕೂಲವಾಗುತ್ತದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ಮೆಟ್ರೋವನ್ನು ಬೆಳಗ್ಗೆ ಬೇಗ ಪ್ರಾರಂಭಿಸುವಂತೆ ಡಿಎಂಆರ್​ಸಿಗೆ ದೆಹಲಿ ಪೊಲೀಸ್ ಆಯುಕ್ತರ ಪತ್ರ

ನಿರ್ಬಂಧಗಳ ದೃಷ್ಟಿಯಿಂದ ಸೆಪ್ಟೆಂಬರ್ 8, 9 ಮತ್ತು 10 ರಂದು ಮೆಟ್ರೋ ಸೇವೆಗಳನ್ನು ಬೆಳಗ್ಗೆ 4 ಗಂಟೆಗೆ ಪುನರಾರಂಭಿಸಬಹುದೇ ಎಂದು ವಿನಂತಿಸಿದ್ದಾರೆ. ಶೃಂಗಸಭೆಯ ಕಾರಣ ಸಂಚಾರವನ್ನು ನಿರ್ಬಂಧಿಸಿರುವ ಪ್ರದೇಶಗಳಲ್ಲಿ ಮೆಟ್ರೋ ಸೇವೆಗಳು ಬೇಗನೆ ಪ್ರಾರಂಭವಾದರೆ, ಇದು ನಗರದಾದ್ಯಂತ ಪೊಲೀಸ್ ಮತ್ತು ಇತರ ಸಹಾಯಕ ಸಿಬ್ಬಂದಿ ತೊಂದರೆಯಿಲ್ಲ ಸಂಚರಿಸಬಹುದು ಎಂದು ಹೇಳಿದೆ.

ಭದ್ರತಾ ಸಿಬ್ಬಂದಿಗಳು ಐಇಸಿಸಿ, ಐಟಿಪಿಒ ಮತ್ತು ರಾಜ್‌ಘಾಟ್‌ನಂತಹ ಸ್ಥಳಗಳಿಗೆ ಬೆಳಿಗ್ಗೆ 5 ಗಂಟೆಗೆ ತಲುಪಬೇಕು ಎಂದು ಆಯುಕ್ತರು ಹೇಳಿದರು. ದೆಹಲಿಯಲ್ಲಿನ ಟ್ರಾಫಿಕ್ ನಿರ್ಬಂಧಗಳ ದೃಷ್ಟಿಯಿಂದ, ಪ್ರಾಥಮಿಕವಾಗಿ NDMC ಮತ್ತು ನೈಋತ್ಯ ಜಿಲ್ಲೆಗಳಲ್ಲಿ, ಸೆಪ್ಟೆಂಬರ್ 8,9 ಮತ್ತು 10 ರಂದು ಮೆಟ್ರೋ ಸೇವೆಗಳು ಬೆಳಿಗ್ಗೆ 4 ಗಂಟೆಯಿಂದ ಪ್ರಾರಂಭವಾದರೆ ಪೊಲೀಸ್ ಮತ್ತು ಇತರ ಸಹಾಯಕ ಸಿಬ್ಬಂದಿಗೆ ಹೆಚ್ಚಿನ ಅನುಕೂಲವಾಗಲಿದೆ.

ಭಾರತವು ಈ ವರ್ಷ ಜಿ20ಯ ಅಧ್ಯಕ್ಷತೆವಹಿಸಲಿರುವ ಕಾರಣ ದೆಹಲಿಯಲ್ಲಿಯೇ ಶೃಂಗಸಭೆ ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದ ಉನ್ನತ ನಾಯಕರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ