AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ7 ಶೃಂಗಸಭೆ: ಮೂರನೇ ಬಾರಿಗೆ ಮೋದಿ ಪ್ರಧಾನಿಯಾದ ಬಳಿಕ ಇಟಲಿಗೆ ಮೊದಲ ಭೇಟಿ

G7 Summit in Italy: ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸಕ್ಕೆ ತೆರಳಿದ್ದಾರೆ, ಅಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೂನ್ 14ರ ಸಂಜೆ ಭಾರತಕ್ಕೆ ಹಿಂದಿರುಗಲಿದ್ದಾರೆ. ಜಿ7 ಶೃಂಗಸಭೆಗೂ ಮುನ್ನ ಇಟಲಿಯಲ್ಲಿ ಖಲಿಸ್ತಾನಿ ಉಗ್ರರು ನೀಚ ಕೃತ್ಯವೆಸಗಿದ್ದಾರೆ, ಮಹಾತ್ಮಗಾಂಧಿ ಪ್ರತಿಮೆಯನ್ನು ಒಡೆದು, ಖಲಿಸ್ತಾನಿ ಪರ ಘೋಷಣೆಯ ಬರಹಗಳನ್ನೂ ಬರೆದಿದ್ದಾರೆ.

ಜಿ7 ಶೃಂಗಸಭೆ: ಮೂರನೇ ಬಾರಿಗೆ ಮೋದಿ ಪ್ರಧಾನಿಯಾದ ಬಳಿಕ ಇಟಲಿಗೆ ಮೊದಲ ಭೇಟಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 13, 2024 | 10:46 AM

Share

ಮೂರನೇ ಬಾರಿಗೆ ನರೇಂದ್ರ ಮೋದಿ(Narendra Modi) ಪ್ರಧಾನಿಯಾದ ಬಳಿಕ ಇಟಲಿಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದೆ. ಪ್ರಧಾನಿ ಮೋದಿ ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕ ಹೋಗುತ್ತಿರುವ ಮೊದಲ ವಿದೇಶ ಪ್ರವಾಸವೂ ಇದಾಗಿದೆ.

ಉನ್ನತ ಮಟ್ಟದ ನಿಯೋಗದೊಂದಿಗೆ ಜೂನ್ 14 ರಂದು ನಡೆಯಲಿರುವ ಶೃಂಗಸಭೆಯ ಸಂಪರ್ಕ ಅಧಿವೇಶನದಲ್ಲಿ ಪಾಲ್ಗೊಳ್ಳಲು ಮೋದಿ ಗುರುವಾರ ಇಟಲಿಗೆ ತೆರಳಿದರು. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಗಾಜಾದಲ್ಲಿನ ಸಂಘರ್ಷವು ಜೂನ್ 13 ರಿಂದ 15 ರವರೆಗೆ ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿದೆ.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮೋದಿ ದ್ವಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಕ್ವಾತ್ರಾ ಹೇಳಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ಯಾವುದೇ ದ್ವಿಪಕ್ಷೀಯ ಸಭೆ ನಡೆಸುತ್ತಾರೆಯೇ ಎಂಬ ಪ್ರಶ್ನೆಗೆ, ಕ್ವಾತ್ರಾ ನೇರ ಉತ್ತರವನ್ನು ನೀಡಲಿಲ್ಲ ಮತ್ತು ಮೋದಿ ಅವರ ವೇಳಾಪಟ್ಟಿಯನ್ನು ಇನ್ನೂ ನಿರ್ಧರಿಸಲಾಗುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಜೂ. 18ಕ್ಕೆ ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ; ರೈತರ ಸಮಾವೇಶದಲ್ಲಿ ಕಿಸಾನ್ ಸಮ್ಮಾನ್ ನಿಧಿ ಕಂತು ಬಿಡುಗಡೆ

ಜಿ7 ಶೃಂಗಸಭೆಗೂ ಮುನ್ನ ಇಟಲಿಯಲ್ಲಿ ಖಲಿಸ್ತಾನಿ ಉಗ್ರರು ನೀಚ ಕೃತ್ಯವೆಸಗಿದ್ದಾರೆ, ಮಹಾತ್ಮಗಾಂಧಿ ಪ್ರತಿಮೆಯನ್ನು ಒಡೆದು, ಖಲಿಸ್ತಾನಿ ಪರ ಘೋಷಣೆಯ ಬರಹಗಳನ್ನೂ ಬರೆದಿದ್ದಾರೆ. ಪ್ರತಿಮೆಯನ್ನು ದುರಸ್ತಿ ಮಾಡಲಾಗಿದೆ. ಮೋದಿ ಜೂನ್ 14ರ ಸಂಜೆ ಭಾರತಕ್ಕೆ ಮರಳಲಿದ್ದಾರೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಹಿರೋಷಿಮಾದಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದರು, ಅವರು ಶೃಂಗಸಭೆಯ ಸಮಯದಲ್ಲಿ ಝೆಲೆನ್ಸ್ಕಿ ಹಾಗೂ ವಿಶ್ವ ನಾಯಕರ ಜತೆ ಸಂವಾದ ನಡೆಸಿದ್ದರು. ಜಿ7 ಅಮೆರಿಕ, ಬ್ರಿಟನ್, ಫ್ರಾನ್ಸ್​, ಇಟಲಿ, ಜರ್ಮನಿ, ಕೆನಡಾ ಹಾಗೂ ಜಪಾನ್​ನ್ನು ಒಳಗೊಂಡಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್, ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾ ಆಕ್ರಮಣದ ಕುರಿತು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ