AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಢ್​​ಚಿರೌಲಿ ಸ್ಫೋಟ ಪ್ರಕರಣ: ಮಾವೋವಾದಿ ನಾಯಕನಿಗೆ ಬಾಂಬೆ ಹೈಕೋರ್ಟ್ ಜಾಮೀನು

Gadchiroli Blast Case ಸತ್ಯನಾರಾಯಣ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಅವರ ಪತ್ನಿ ದಿವಂಗತ ನಿರ್ಮಲಾ ಉಪ್ಪುಗಂಟಿ ಅವರೂ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಗಢ್​​ಚಿರೌಲಿ ಸ್ಫೋಟ ಪ್ರಕರಣ: ಮಾವೋವಾದಿ ನಾಯಕನಿಗೆ ಬಾಂಬೆ ಹೈಕೋರ್ಟ್ ಜಾಮೀನು
ಬಾಂಬೆ ಹೈಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 15, 2022 | 4:43 PM

Share

ಮುಂಬೈ: 2019ರ ಗಢ್​​ಚಿರೌಲಿ ಸ್ಫೋಟ (Gadchiroli Blast Case) ಪ್ರಕರಣದಲ್ಲಿ 72ರ ಹರೆಯದ ಆರೋಪಿ ಮಾವೋವಾದಿ ಸತ್ಯನಾರಾಯಣ ರಾಣಿಗೆ ಬಾಂಬೆ ಹೈಕೋರ್ಟ್ (Bombay High Court) ಶುಕ್ರವಾರ ಜಾಮೀನು ನೀಡಿದೆ. 2019 ಮೇ 1ರಂದು ಮಹಾರಾಷ್ಟ್ರದ ವಿದರ್ಭಾ ಪ್ರದೇಶದಲ್ಲಿರುವ ಗಢ್​​ಚಿರೌಲಿಯಲ್ಲಿ ನಡೆಸಿದ ಸ್ಫೋಟದಲ್ಲಿ ತ್ವರಿತ ಪ್ರತಿಕ್ರಿಯೆ ತಂಡ (QRT)ದ 15 ಸೆಕ್ಯುರಿಟಿ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಬಲಿಯಾಗಿದ್ದರು. ಈ ಪ್ರಕರಣ ಬಗ್ಗೆ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ನ್ಯಾಯಮೂರ್ತಿ ರೇವತಿ ಮೊಹಿತೆ ದೇರೆ ಮತ್ತು ವಿಜಿ ಬಿಶ್ತ್, ಸತ್ಯನಾರಾಯಣ ಅವರಿಗೆ ಜಾಮೀನು ನೀಡಿದೆ. ಸತ್ಯನಾರಾಯಣ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಅವರ ಪತ್ನಿ ದಿವಂಗತ ನಿರ್ಮಲಾ ಉಪ್ಪುಗಂಟಿ ಅವರೂ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಇವರಿಬ್ಬರನ್ನು 2019ರಲ್ಲಿ ಬಂಧಿಸಲಾಗಿತ್ತು. ಉಪ್ಪುಗಂಟಿ ಏಪ್ರಿಲ್ ತಿಂಗಳಲ್ಲಿ ಕ್ಯಾನ್ಸರ್ ನಿಂದ ಸಾವಿಗೀಡಾಗಿದ್ದರು. ವಕೀಲರಾದ ಯುಗ್ ಚೌಧರಿ ಮತ್ತು ಪಯೋಶಿ ರಾಯ್ ಮೂಲಕ ಸತ್ಯನಾರಾಯಣ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು ತನ್ನ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ, ಈಗಾಗಲೇ ಮೂರು ವರ್ಷ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದರಿಂದ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಮೊದಲಿಗೆ ಈ ಪ್ರಕರಣವನ್ನು ಗಢ್​​ಚಿರೌಲಿ ಪೊಲೀಸರು ವಿಚಾರಣೆ ನಡೆಸಿದ್ದು ನಂತರ ಅದನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲಾಗಿತ್ತು. ರಾಣಿ ಅವರು ಈ ಸ್ಫೋಟಕ್ಕೆ ಸಂಚುರೂಪಿಸಿದ ಸಭೆಯ ಭಾಗವಾಗಿದ್ದರು. ಸ್ಫೋಟ ನಡೆಸುವುದಕ್ಕಿಂತ ಒಂದು ವರ್ಷ ಮೊದಲು ಸಂಚು ರೂಪಿಸಿದ್ದು ಈ ಸಭೆಯಲ್ಲಿ ಸರಿಸುಮಾರು 300 ನಕ್ಸಲ್ ಸದಸ್ಯರು ಭಾಗಿಯಾಗಿದ್ದರು. 20189ರಲ್ಲಿ ರಕ್ಷಣಾ ಸಿಬ್ಬಂದಿ 40 ನಕ್ಸಲರನ್ನು ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಈ ಸ್ಫೋಟ ನಡೆಸಲಾಗಿತ್ತು.

ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಮತ್ತು ಹತ್ಯೆ ಮತ್ತು ಅಪರಾಧ ಸಂಚು ಮಾಡಿದ್ದಕ್ಕೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?