AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಗದ್ದರ್ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ -ಯಾರು, ಎಲ್ಲಿಂದ ಸ್ಪರ್ಧಿಸಲಿದ್ದಾರೆ ಗೊತ್ತಾ?

Gaddar: ಆಂಧ್ರ ನಾಯಕರೆಲ್ಲರೂ ಗದ್ದರ್ ಕುಟುಂಬಸ್ಥರ ಬೆಂಬಲಕ್ಕೆ ಕೊನೆಯವರೆಗೂ ನಿಂತಿದ್ದರು. ಆದರೆ ಕಾಂಗ್ರೆಸ್ ಪಕ್ಷ ಗದ್ದರ್ ಬಗ್ಗೆ ಯಾಕೆ ಇಷ್ಟೊಂದು ಆಸಕ್ತಿ ತೋರಿಸುತ್ತಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಏಕೆಂದರೆ ಗದ್ದರ್ ಕಾಂಗ್ರೆಸ್ಸಿಗರಲ್ಲ.

Telangana: ಗದ್ದರ್ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ -ಯಾರು, ಎಲ್ಲಿಂದ ಸ್ಪರ್ಧಿಸಲಿದ್ದಾರೆ ಗೊತ್ತಾ?
ಗದ್ದರ್ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್
ಸಾಧು ಶ್ರೀನಾಥ್​
|

Updated on: Aug 09, 2023 | 2:31 PM

Share

ಜನಪ್ರಿಯ ಗಾಯಕ ಗದ್ದರ್ ಅಂತ್ಯಕ್ರಿಯೆ ಮುಗಿದಿದೆ. ರಾಜಕೀಯ, ಸಿದ್ಧಾಂತ, ಪಕ್ಷ ಭೇದವಿಲ್ಲದೆ ಎಲ್ಲರೂ ಗದ್ದರ್ ಅವರ (Gaddar) ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು ಶ್ರದ್ಧಾಂಜಲಿ ಸಲ್ಲಿಸಿದರು. ಆದರೆ ಎಲ್ಲಾ ಪಕ್ಷಗಳಿಗೆ ಹೋಲಿಸಿದರೆ ಗದ್ದರ್ ಅವರ (Gummadi Vittal Rao 1949 – 6 August 2023) ಕೊನೆಯ ದಿನಗಳಲ್ಲಿ ಕಾಂಗ್ರೆಸ್ ಎಲ್ಲವನ್ನೂ ತಾನೇ ಮಾಡಲು ಪ್ರಯತ್ನಿಸಿತು. ತೆಲಂಗಾಣ ಪಿಸಿಸಿ ಮುಖ್ಯಸ್ಥ ರೇವಂತ್‌, ಸಿಎಲ್‌ಪಿ ನಾಯಕ ಬತ್ತಿ ವಿಕ್ರಮಾರ್ಕ, ಸೀತಕ್ಕ, ವಿಎಚ್‌, ಮಲ್ಲಂ ರವಿ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಗದ್ದರ್‌ ಅವರ ಸಾವಿನ ಸುದ್ದಿ ತಿಳಿದಾಗಿನಿಂದ ಅಂತ್ಯಕ್ರಿಯೆ ಮುಗಿಯುವವರೆಗೂ ಅವರ ಕುಟುಂಬ ಸದಸ್ಯರ ಜತೆಗಿದ್ದರು. ಕಾಂಗ್ರೆಸ್ ನಾಯಕರಾದ (Congress Party) ಸೋನಿಯಾ ಗಾಂಧಿ, ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ಸಂತಾಪ ಸೂಚಿಸಿದರು.

ಆಂಧ್ರ ನಾಯಕರೆಲ್ಲರೂ ಗದ್ದರ್ ಕುಟುಂಬಸ್ಥರ ಬೆಂಬಲಕ್ಕೆ ಕೊನೆಯವರೆಗೂ ನಿಂತಿದ್ದರು. ಆದರೆ ಕಾಂಗ್ರೆಸ್ ಪಕ್ಷ ಗದ್ದರ್ ಬಗ್ಗೆ ಯಾಕೆ ಇಷ್ಟೊಂದು ಆಸಕ್ತಿ ತೋರಿಸುತ್ತಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಏಕೆಂದರೆ ಗದ್ದರ್ ಕಾಂಗ್ರೆಸ್ಸಿಗರಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ ಸಿದ್ಧಾಂತ ಅವರದಲ್ಲ. ಗದ್ದರ್ ಗೆ ಅವರದೇ ಆದ ರಾಜಕೀಯ ಪಕ್ಷವಿದೆ. ಗದ್ದರ್ ಈ ಹಿಂದೆಯೂ ಕಾಂಗ್ರೆಸ್ ಅನ್ನು ಟೀಕಿಸಿ ಹಲವು ಹಾಡುಗಳನ್ನು ಹಾಡಿದ್ದಾರೆ. ಆದರೆ, ಕಾಂಗ್ರೆಸ್ ಈಗ ಗದ್ದರ್ ಅವರನ್ನು ತಮ್ಮದೇ ಪಕ್ಷದ ನಾಯಕನಂತೆ ನಡೆಸಿಕೊಂಡಿದ್ದು ಏಕೆ ಎಂಬ ಚರ್ಚೆ ನಡೆಯುತ್ತಿದೆ. ಇದು ಕಾಂಗ್ರೆಸ್ ನ ರಾಜಕೀಯ ನಡೆ ಎಂಬುದಾಗಿಯೂ ಹೇಳಲಾಗುತ್ತಿದೆ.

ತೆಲಂಗಾಣದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಮುಂದುವರಿದಾಗ ಗದ್ದರ್ ಭಾಗವಹಿಸಿದ ಸಂದರ್ಭಗಳಿವೆ. ಪ್ರತಿ ಬಾರಿ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ತೆಲಂಗಾಣಕ್ಕೆ ಭೇಟಿ ನೀಡಿದಾಗ ಗದ್ದರ್ ಸಭೆಗಳಲ್ಲಿ ಭಾಗವಹಿಸಿದ್ದರು. ಅವರು ಕಾಂಗ್ರೆಸ್ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು. ಜನರ ಮೇಲೆ ಸವಾರಿ ಮಾಡುತ್ತಿರುವ ಬಿಜೆಪಿ, ಬಿಆರ್ ಎಸ್ ಸರಕಾರಗಳಿಗೆ ಸೋಲುಣಿಸುವುದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಗದ್ದರ್ ಬಲವಾಗಿ ನಂಬಿದ್ದರು.

ಹಾಗಾಗಿಯೇ ಕಾಂಗ್ರೆಸ್ ಸಭೆ ನಡೆದಲ್ಲೆಲ್ಲಾ ಗದ್ದರ್ ಹಾಜರಿ ಇರುತ್ತಿತ್ತು. ಗದ್ದರ್ ಅವರು ಸಿಎಲ್‌ಪಿ ನಾಯಕ ಬಟ್ಟಿ ಪಾದಯಾತ್ರೆಯಲ್ಲಿ ಹಲವು ದಿನ ಭಾಗವಹಿಸಿದ್ದರು. ಇನ್ನೊಂದೆಡೆ ಗದ್ದರ್ ಪುತ್ರ ಸೂರ್ಯ ಕಳೆದ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ್ದರು. ಸೂರ್ಯಗೆ ಅದಿಲಾಬಾದ್ ಜಿಲ್ಲೆಯ ವಿಧಾನಸಭಾ ಸ್ಥಾನದ ಟಿಕೆಟ್ ಬಹುತೇಕ ಅಂತಿಮವಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅದು ಬದಲಾಯಿತು. ಮುಂದೆ ಅವರು ಪೆಡಪದಳ್ಳಿ ಕ್ಷೇತ್ರದಿಂದ ಸಂಸದರಾಗಿ ಟಿಕೆಟ್‌ಗೆ ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಇದಲ್ಲದೇ ಗದ್ದರ್ ಗೆ ಯಾವುದೇ ರೀತಿಯ ಸಹಾಯವೊಂದನ್ನು ಮಾಡಬೇಕೆಂದು ಕಾಂಗ್ರೆಸ್ ಬಯಸಿದೆ. ಹಾಗಾಗಿ ಗದ್ದರ್ ಮತ್ತು ಕಾಂಗ್ರೆಸ್ ನಡುವೆ ಸಂಪರ್ಕ ಏರ್ಪಟ್ಟಿದೆ. ಮುಂಬರುವ ಚುನಾವಣೆಯಲ್ಲೂ ಗದ್ದರ್ ಪುತ್ರ ಸೂರ್ಯ ಅವರಿಗೆ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರ ಹಾಗೂ ಪೆದ್ದಪಲ್ಲಿ ಸಂಸತ್ ಕ್ಷೇತ್ರವನ್ನು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆಯಂತೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ