AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Statue: ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜನೆ, ಧಾರ್ಮಿಕ ಘೋಷಣೆ ಕೂಗುತ್ತಾ ವ್ಯಕ್ತಿಯ ಮೆರವಣಿಗೆ

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸ್ವ ಕ್ಷೇತ್ರವಾದ ಗಜ್ವೇಲ್​ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗಜ್ವೇಲ್‌ನ ಛತ್ರಪತಿ ಶಿವಾಜಿ ಪ್ರತಿಮೆ(Shivaji Statue)ಗೆ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಗಜ್ವೇಲ್ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ

Shivaji Statue: ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜನೆ, ಧಾರ್ಮಿಕ ಘೋಷಣೆ ಕೂಗುತ್ತಾ ವ್ಯಕ್ತಿಯ ಮೆರವಣಿಗೆ
ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜಿಸಿದ ವ್ಯಕ್ತಿImage Credit source: NDTV
ನಯನಾ ರಾಜೀವ್
|

Updated on: Jul 04, 2023 | 2:17 PM

Share

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸ್ವ ಕ್ಷೇತ್ರವಾದ ಗಜ್ವೇಲ್​ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗಜ್ವೇಲ್‌ನ ಛತ್ರಪತಿ ಶಿವಾಜಿ ಪ್ರತಿಮೆ(Shivaji Statue)ಗೆ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಗಜ್ವೇಲ್ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.  ಆತನನ್ನು ಶಿವಾಜಿ ಮೂರ್ತಿ ಸಮಿತಿಯವರು ಬಂಧಿಸಿ ಭಗತ್ ಯೂತ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಸಿಐಗೆ ದೂರು ನೀಡಿದ್ದರು. ಆದರೆ, ಪೊಲೀಸ್ ಠಾಣೆಯಿಂದ ಶಿವಾಜಿ ಪ್ರತಿಮೆ ಬಳಿಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಸಂದೀಪ್ ಎಂಬ ಯುವಕನ ತಲೆಗೆ ಗಂಭೀರ ಗಾಯಗಳಾಗಿವೆ. ಇದರೊಂದಿಗೆ ಹಿಂದೂಗಳೆಲ್ಲ ಮತ್ತೆ ಅಂಬೇಡ್ಕರ್ ಚೌಕಕ್ಕೆ ಆಗಮಿಸಿ ರಾಸ್ತಾರೋಕೋ ಜೊತೆಗೆ ಧರಣಿ ನಡೆಸಿದರು.

ಮತ್ತಷ್ಟು ಓದಿ: ಬೆಳಗಾವಿ: ಕಾಂಗ್ರೆಸ್​-ಬಿಜೆಪಿಯಿಂದ ಶಿವಾಜಿ ಪ್ರತಿಮೆ ಉದ್ಘಾಟನೆ, ಪ್ರತಿಮೆಯ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್

ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಹತೋಟಿಗೆ ಬರದ ಕಾರಣ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂಗಳು ಇಂದು ಗಜ್ವೇಲ್ ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ.

ಈ ಘಟನೆಗಳಿಂದ ಕೋಮು ಘರ್ಷಣೆ ನಡೆಯುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ತಪ್ಪು ಮಾಡಿದವರನ್ನು 24 ಗಂಟೆಯೊಳಗೆ ಬಂಧಿಸುವುದಾಗಿ ಸಿದ್ದಿಪೇಟೆ ಪೊಲೀಸ್ ಆಯುಕ್ತೆ ಎನ್.ಶ್ವೇತಾ ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ