AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗಾಂಧಿಗಳ ಈ ನಕಲಿ ಸತ್ಯಾಗ್ರಹವನ್ನು ನೋಡಿದರೆ ಗಾಂಧೀಜಿ ನಾಚಿಕೆಪಡುತ್ತಾರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಜಾಮೀನಿನ ಮೇಲೆ ಇದ್ದಾರೆ. ರಾಹುಲ್ ಗಾಂಧಿ ನಾಳೆ ಇಡಿ ಮುಂದೆ ಹಾಜರಾಗಬೇಕು. ಆದರೆ ಕಾಂಗ್ರೆಸ್ ದೊಡ್ಡ ನಾಟಕ ಮಾಡುತ್ತಿದೆ. ಅವರು ತಮ್ಮ ನಾಯಕರನ್ನೆಲ್ಲ ದೆಹಲಿಗೆ ಕರೆಸುತ್ತಿದ್ದಾರೆ.

ನಕಲಿ ಗಾಂಧಿಗಳ ಈ ನಕಲಿ ಸತ್ಯಾಗ್ರಹವನ್ನು ನೋಡಿದರೆ ಗಾಂಧೀಜಿ ನಾಚಿಕೆಪಡುತ್ತಾರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ರಾಹುಲ್ ಗಾಂಧಿ- ಸಂಬಿತ್ ಪಾತ್ರಾ
TV9 Web
| Edited By: |

Updated on:Jun 12, 2022 | 4:04 PM

Share

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald case) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಜಾರಿ ನಿರ್ದೇಶನಾಲಯದ (Enforcement directorate) ಮುಂದೆ ನಾಳೆ ಹಾಜರಾಗಲಿದ್ದು, ಕಾಂಗ್ರೆಸ್ ನಾಯಕರು ಭಾನುವಾರ ದೇಶಾದ್ಯಂತ ಸುದ್ದಿಗೋಷ್ಠಿ ನಡೆಸುತ್ತಿದ್ದಂತೆ ಬಿಜೆಪಿ ವಾಗ್ದಾಳಿ ಆರಂಭಿಸಿದೆ. “ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಜಾಮೀನಿನ ಮೇಲೆ ಇದ್ದಾರೆ. ರಾಹುಲ್ ಗಾಂಧಿ ನಾಳೆ ಇಡಿ ಮುಂದೆ ಹಾಜರಾಗಬೇಕು. ಆದರೆ ಕಾಂಗ್ರೆಸ್ ದೊಡ್ಡ ನಾಟಕ ಮಾಡುತ್ತಿದೆ. ಅವರು ತಮ್ಮ ನಾಯಕರನ್ನೆಲ್ಲ ದೆಹಲಿಗೆ ಕರೆಸುತ್ತಿದ್ದಾರೆ. ಇದರಿಂದ ಏನು ಪ್ರಯೋಜನ? ದಿಗ್ವಿಜಯ ಸಿಂಗ್ ಅವರಂತಹ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರೆ ಏನಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ (Sambit Patra) ಹೇಳಿದ್ದಾರೆ.  ಯಾಕೆ ಈ ಪತ್ರಿಕಾಗೋಷ್ಠಿಯ ನಾಟಕ? ಇಡಿ ಮುಂದೆ ನಿಮ್ಮನ್ನು ಹಾಜರುಪಡಿಸಿ ಮತ್ತು ತಪ್ಪನ್ನು ಒಪ್ಪಿಕೊಳ್ಳಿ. ಇದೇನು ಸತ್ಯಾಗ್ರಹ? ನಕಲಿ ಗಾಂಧಿಗಳ ಈ ನಕಲಿ ಸತ್ಯಾಗ್ರಹವನ್ನು ನೋಡಿದರೆ ಗಾಂಧೀಜಿ ನಾಚಿಕೆಪಡುತ್ತಾರೆ. ರಾಹುಲ್ ಜೀ, ನಿಯಮದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ. ಇದು ಕಾನೂನು ಸಮಸ್ಯೆಯೇ ಹೊರತು ರಾಜಕೀಯ ವಿಚಾರವಲ್ಲ ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.  ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ವಿರುದ್ಧ ದೆಹಲಿಯ ಇಡಿ ಕೇಂದ್ರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸತ್ಯಾಗ್ರಹ ನಡೆಸುವಂತೆ ಕಾಂಗ್ರೆಸ್ ತನ್ನ ಎಲ್ಲಾ ಉನ್ನತ ನಾಯಕರು ಮತ್ತು ಸಂಸದರನ್ನು ಕೇಳಿಕೊಂಡಿದೆ.

ಜೂನ್ 2 ರಂದು ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿತ್ತು, ಆದರೆ ಆ ಸಮಯದಲ್ಲಿ ಅವರು ದೇಶದಲ್ಲಿ ಇಲ್ಲದ ಕಾರಣ ಕಾಂಗ್ರೆಸ್ ನಾಯಕರು ಹೊಸ ದಿನಾಂಕವನ್ನು ಕೋರಿದರು. ಕೊವಿಡ್‌ನಿಂದಾಗಿ ಜೂನ್ 8 ರ ಹಿಂದಿನ ದಿನಾಂಕಕ್ಕೆ ಹಾಜರಾಗದೇ ಇದ್ದ ಕಾರಣ ಸೋನಿಯಾ ಗಾಂಧಿ ಅವರಿಗೆ ಜೂನ್ 23 ರಂದು ಹೊಸ ಸಮನ್ಸ್ ನೀಡಲಾಗಿದೆ.

ಗುಜರಾತ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ‘ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನಷ್ಟವಾಗುತ್ತಿದ್ದಂತೆ ಕಾಂಗ್ರೆಸ್ ಹಲವು ಕಂತುಗಳಲ್ಲಿ ₹90 ಕೋಟಿ ಸಾಲ ನೀಡಿದೆ, ರಾಜಕೀಯ ಪಕ್ಷ ಪತ್ರಿಕೆಗೆ ಸಾಲ ಕೊಡಬಾರದು ಎಂಬ ಕಾನೂನು ಈ ದೇಶದಲ್ಲಿ ಇಲ್ಲ. ಸಾಲವನ್ನು ನಂತರ ಈಕ್ವಿಟಿ ಷೇರುಗಳಾಗಿ ಪರಿವರ್ತಿಸಲಾಯಿತು ಮತ್ತು ಲಾಭರಹಿತ ಕಂಪನಿ ‘ಯಂಗ್ ಇಂಡಿಯಾ’ ಅನ್ನು ರಚಿಸಲಾಯಿತ. ಅದರ ಮಂಡಳಿಯ ಸದಸ್ಯರಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇದ್ದಾರೆ ಎಂದು ಖೇರಾ ಹೇಳಿದರು. ಆದರೆ ಪ್ರಧಾನಿ ಮೋದಿ ಅವರು ಶೀರ್ಷಿಕೆಯಲ್ಲಿ ರಾರಾಜಿಸುವುದಕ್ಕಾಗಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗೆ ಇಡಿ ನೋಟಿಸ್ ಕಳುಹಿಸಲಾಗಿದೆ.

ಇದನ್ನೂ ಓದಿ
Image
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು; ಆರೋಗ್ಯದ ಸ್ಥಿತಿ ಸ್ಥಿರ ರಣದೀಪ್ ಸುರ್ಜೆವಾಲಾ ಹೇಳಿಕೆ
Image
ಡೀಲ್ ರಾಮಯ್ಯ ಹೇಳೋದು ಆಚಾರ ತಿನ್ನೋದು ಬದನೆಕಾಯಿ: ಸಿದ್ದರಾಮಯ್ಯ ವಿರುದ್ಧ ಪರಿಷತ್ ಸದಸ್ಯ ಟಿ.ಎ.ಶರವಣ ಆರೋಪ
Image
ಕೆ ಬಿ ಹೆಡ್ಗೆವಾರ್ ಭಾಷಣ ಯಥಾವತ್ ಹಾಕಬೇಕು. ರಾಷ್ಟ್ರಧ್ವಜದ ಬಗ್ಗೆ ಅವರಿಗೆ ಏನು ಅನಿಸಿಕೆ ಇತ್ತು? ಅಂತಾನೂ ಪಠ್ಯದಲ್ಲಿ ತಿಳಿಸಿ: ಪ್ರಿಯಾಂಕ್ ಖರ್ಗೆ ಆಗ್ರಹ
Image
ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಜಿ ಪರಮೇಶ್ವರ್ ಮಾನವೀಯತೆ ಮೆರೆದರು

ಕಾನೂನುಬಾಹಿರ ಚಟುವಟಿಕೆ ಅಲ್ಲವೇ ಅಲ್ಲ. ಇದರ ಹೊರತಾಗಿಯೂ, ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಿತು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:03 pm, Sun, 12 June 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್