AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿ ಚಿಕಿತ್ಸೆಗಾಗಿ ಹಣಕ್ಕಾಗಿ ಅಲೆದಾಡ್ತಿದ್ದ ಮಹಿಳೆ ಮೇಲೆ 12 ಮಂದಿಯಿಂದ ಗ್ಯಾಂಗ್‌ರೇಪ್‌!

ಹೈದರಾಬಾದ್: ತೆಲಂಗಾಣದಲ್ಲಿ ಕಳೆದ ವರ್ಷ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ಆರೋಪಿಗಳನ್ನ ಎನ್​ಕೌಂಟರ್ ಮಾಡಲಾಗಿತ್ತು. ಇದಾದ ಬಳಿಕ ತೆಲಂಗಾಣದಲ್ಲಿ ಅತ್ಯಾಚಾರಗಳನ್ನ ತಡೆಯಲು ವಿಶೇಷ ಮಹಿಳಾ ಪೊಲೀಸ್ ತಂಡಗಳನ್ನ ರಚಿಸಲಾಗಿದೆ. ಇಷ್ಟಾದ್ರೂ, ಸೋಮವಾರ ರಾತ್ರಿ ನಿಜಾಮಾಬಾದ್​ನಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಆಗಿದೆ. ಹಣ ಹೊಂದಿಸೋದಾಗಿ ನಂಬಿಸಿ ಸಾಮೂಹಿಕ ಅತ್ಯಾಚಾರ! ತೆಲಂಗಾಣದ ನಿಜಾಮಾಬಾದ್‌ನಲ್ಲಿ ವಿಲಕ್ಷಣ ಗ್ಯಾಂಗ್‌ ರೇಪ್‌ ಪ್ರಕರಣವೊಂದು ನಡೆದಿದೆ. ಅಸಹಾಯಕ ಮಹಿಳೆಗೆ ಹಣದಾಸೆ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರೋ ಆಘಾತಕಾರಿ ಘಟನೆ ನಡೆದಿದೆ. 12 ಮಂದಿಯಿಂದ ಗ್ಯಾಂಗ್‌ರೇಪ್‌: […]

ಸಹೋದರಿ ಚಿಕಿತ್ಸೆಗಾಗಿ ಹಣಕ್ಕಾಗಿ ಅಲೆದಾಡ್ತಿದ್ದ ಮಹಿಳೆ ಮೇಲೆ 12 ಮಂದಿಯಿಂದ ಗ್ಯಾಂಗ್‌ರೇಪ್‌!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Aug 27, 2020 | 7:04 AM

Share

ಹೈದರಾಬಾದ್: ತೆಲಂಗಾಣದಲ್ಲಿ ಕಳೆದ ವರ್ಷ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ಆರೋಪಿಗಳನ್ನ ಎನ್​ಕೌಂಟರ್ ಮಾಡಲಾಗಿತ್ತು. ಇದಾದ ಬಳಿಕ ತೆಲಂಗಾಣದಲ್ಲಿ ಅತ್ಯಾಚಾರಗಳನ್ನ ತಡೆಯಲು ವಿಶೇಷ ಮಹಿಳಾ ಪೊಲೀಸ್ ತಂಡಗಳನ್ನ ರಚಿಸಲಾಗಿದೆ. ಇಷ್ಟಾದ್ರೂ, ಸೋಮವಾರ ರಾತ್ರಿ ನಿಜಾಮಾಬಾದ್​ನಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಆಗಿದೆ.

ಹಣ ಹೊಂದಿಸೋದಾಗಿ ನಂಬಿಸಿ ಸಾಮೂಹಿಕ ಅತ್ಯಾಚಾರ! ತೆಲಂಗಾಣದ ನಿಜಾಮಾಬಾದ್‌ನಲ್ಲಿ ವಿಲಕ್ಷಣ ಗ್ಯಾಂಗ್‌ ರೇಪ್‌ ಪ್ರಕರಣವೊಂದು ನಡೆದಿದೆ. ಅಸಹಾಯಕ ಮಹಿಳೆಗೆ ಹಣದಾಸೆ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರೋ ಆಘಾತಕಾರಿ ಘಟನೆ ನಡೆದಿದೆ.

12 ಮಂದಿಯಿಂದ ಗ್ಯಾಂಗ್‌ರೇಪ್‌: ನಿಜಾಮಬಾದ್​ನ ಎಡಪಲ್ಲಿ ಎಂಬಲ್ಲಿ ಮಹಿಳೆಯೊಬ್ಬರಿಗೆ ಅಪಘಾತವಾಗಿತ್ತು. ಆಕೆಯನ್ನ ಆಸ್ಪತ್ರೆಗೆ ದಾಖಲಿಸಲು ಸಹೋದರಿ ಬಂದಿದ್ದರು. ಚಿಕಿತ್ಸೆಗೆ ಹೆಚ್ಚಿನ ಹಣ ಬೇಕು ಅಂತ ಆಸ್ಪತ್ರೆಯವರು ಹೇಳಿದ್ದಾರೆ. ಹೀಗಾಗಿ, ದಿಕ್ಕು ತೋಚದಂತಾದ ಮಹಿಳೆ ತನ್ನ ಸಹೋದರಿಯನ್ನ ಉಳಿಸಿಕೊಳ್ಳಲು ಹಣ ಹೊಂದಿಸಲು ನಿಜಾಮಾಬಾದ್ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಳು.

ಈಕೆಯನ್ನ ಗಮನಿಸಿದ್ದ ವಿಕ್ಕಿ ಅನ್ನೋ ಯುವಕ ಹಣಕ್ಕೆ ನೆರವಾಗೋದಾಗಿ ಆಕೆಯನ್ನ ನಂಬಿಸಿ ಕರೆದೊಯ್ದ. ರೆವಿನ್ಯೂ ಭವನದ ಬಳಿ ಖಾಲಿ ಇದ್ದ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈತ ಅತ್ಯಾಚಾರ ಎಸಗುತ್ತಿದ್ದ ವೇಳೆಗೆ ಆತನ 11 ಸ್ನೇಹಿತರನ್ನ ಅಲ್ಲಿಗೆ ಕರೆಸಿಕೊಂಡ. ಇವರು ಸಹ ಒಬ್ಬರಾದ ನಂತರ ಒಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದೆಲ್ಲಾ ಆಗುವ ವೇಳೆಗೆ ಅಲ್ಲಿಗೆ ಪೊಲೀಸರ ಗಸ್ತು ವಾಹನ ಬಂದಿದೆ. ಯಾವಾಗ ಗಸ್ತು ವಾಹನ ಬಂತೋ, ಆರೋಪಿಗಳು ಅಲ್ಲಿಂದ ಓಡಿಹೋದ್ರು. ಆರೋಪಿಗಳು ಪರಾರಿಯಾಗುತ್ತಿದ್ದುದನ್ನ ಗಮನಿಸಿದ ಪೊಲೀಸರು, ಘಟನಾ ಸ್ಥಳಕ್ಕೆ ಬಂದ್ರು. ಈ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನ ಗಮನಿಸಿ, ಆಸ್ಪತ್ರೆಗೆ ದಾಖಲಿಸಿದ್ರು.

ಮಹಿಳೆಗೆ ಪ್ರಜ್ಞೆ ಬಂದ ಮೇಲೆ ಆಕೆ ನೀಡಿದ ದೂರಿನನ್ವಯ, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ನಿಜಾಮಾಬಾದ್ ಒನ್‌ ಟೌನ್‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪೊಲೀಸರು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?