Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೆಯ ಪಾವಿತ್ರ್ಯಕ್ಕೆ ಸಾಟಿಯೆಲ್ಲಿ! : ಸಾಲುಸಾಲುಗಳು ಶವಗಳು ತೇಲಿಬಂದಿದ್ದರೂ ನದಿಯಲ್ಲಿ ಇಲ್ಲ ಕೊರೊನಾ ಸೋಂಕಿನ ಅಂಶ

ಲಖನೌದ ಬೀರ್ಬಲ್​ ಸಾಹ್ನಿ ಇನ್​ಸ್ಟಿಟ್ಯೂಟ್ ಆಫ್​ ಪ್ಯಾಲಿಯೋಸೈನ್ಸ್​ ವಿಜ್ಞಾನಿಗಳು ಇತ್ತೀಚೆಗೆ ಲಖನೌನಲ್ಲಿ ಗೋಮತಿ ನದಿ ನೀರಿನ ಪರಿಶೀಲನೆ ನಡೆಸಿದಾಗ ಅದರಲ್ಲಿ ಕೊರೊನಾ ವೈರಸ್​ನ ಕುರುಹು ಕಾಣಿಸಿಕೊಂಡಿತ್ತು.

ಗಂಗೆಯ ಪಾವಿತ್ರ್ಯಕ್ಕೆ ಸಾಟಿಯೆಲ್ಲಿ! : ಸಾಲುಸಾಲುಗಳು ಶವಗಳು ತೇಲಿಬಂದಿದ್ದರೂ ನದಿಯಲ್ಲಿ ಇಲ್ಲ ಕೊರೊನಾ ಸೋಂಕಿನ ಅಂಶ
ಗಂಗಾ ನದಿ
Follow us
TV9 Web
| Updated By: Lakshmi Hegde

Updated on: Jul 08, 2021 | 6:58 PM

ಕೊವಿಡ್​ 19 ಎರಡನೇ ಅಲೆ ಉಲ್ಬಣದ ಹೊತ್ತಲ್ಲಿ ಗಂಗಾನದಿಯಲ್ಲಿ ಸಾಲುಸಾಲು ಹೆಣಗಳು ತೇಲಿಬಂದು ಆತಂಕ ಸೃಷ್ಟಿಸಿತ್ತು. ಹೀಗೆ ಕೊವಿಡ್​ 19 ಸೋಂಕಿತರ ಶವಗಳು ಗಂಗಾನದಿಯಲ್ಲಿ ತೇಲಿಬರುವುದು ಜಾಸ್ತಿಯಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕೂಡ ಸ್ಥಳೀಯ ಆಡಳಿತಕ್ಕೆ ಖಡಕ್​ ಎಚ್ಚರಿಕೆ ಕೊಟ್ಟಿತ್ತು. ಈ ಮಧ್ಯೆಯೂ ಒಂದು ಒಳ್ಳೆ ಸುದ್ದಿ ಏನೆಂದರೆ, ಹೀಗೆ ರಾಶಿರಾಶಿ ಕೊವಿಡ್​ 19 ಸೋಂಕಿತ ಹೆಣಗಳು ತೇಲಿಬಂದ ನಂತರವೂ ಗಂಗೆ ತನ್ನ ಪಾವಿತ್ರ್ಯತೆ ಉಳಿಸಿಕೊಂಡಿದೆ. ಅದರ ನೀರಿನಲ್ಲಿ ಕೊರೊನಾ ಸೋಂಕಿನ ಚೂರೇಚೂರು ಅಂಶವೂ ಉಳಿದಿಲ್ಲ.

ಲಖನೌದ ಬೀರ್ಬಲ್​ ಸಾಹ್ನಿ ಇನ್​ಸ್ಟಿಟ್ಯೂಟ್ ಆಫ್​ ಪ್ಯಾಲಿಯೋಸೈನ್ಸ್​ ವಿಜ್ಞಾನಿಗಳು ಇತ್ತೀಚೆಗೆ ಲಖನೌನಲ್ಲಿ ಗೋಮತಿ ನದಿ ನೀರಿನ ಪರಿಶೀಲನೆ ನಡೆಸಿದಾಗ ಅದರಲ್ಲಿ ಕೊರೊನಾ ವೈರಸ್​ನ ಕುರುಹು ಕಾಣಿಸಿಕೊಂಡಿತ್ತು. ಅದರ ಬೆನ್ನಲ್ಲೇ ಲಕ್ನೋದ ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‌ಯು), ವಾರಾಣಸಿ ಮತ್ತು ಬಿರ್ಬಲ್ ಸಾಹ್ನಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾಲಿಯೊ ಸೈನ್ಸಸ್ (ಬಿಎಸ್‌ಐಪಿ) ಯ ವೈದ್ಯಕೀಯ ಮತ್ತು ಆನುವಂಶಿಕ ತಜ್ಞರ ತಂಡ ಸತತ ಎರಡು ತಿಂಗಳ ಕಾಲ ಗಂಗಾ ನದಿ ನೀರಿನ ಮೇಲೆ ಸಂಶೋಧನೆ ನಡೆಸಿತ್ತು. ಆದರೆ ಗಂಗಾ ನದಿಯಲ್ಲಿ ಕೊರೊನಾ ಸೋಂಕಿನ ಲವಲೇಶವೂ ಕಾಣಿಸಿಲ್ಲ ಎಂದು ವರದಿ ನೀಡಿದ್ದಾರೆ.

ಗೋಮತಿ ನದಿ ನೀರಿನಲ್ಲಿ ಕಳೆದ ಬಾರಿಯೂ ಕೊರೊನಾ ಕುರುಹು ಕಾಣಿಸಿಕೊಂಡಿತ್ತು. ಈ ಬಾರಿ ಮೇ ತಿಂಗಳಲ್ಲಿ ನದಿ ನೀರಿನ ಮಾದರಿ ಪರಿಶೀಲನೆ ಮಾಡಿದಾಗಲೂ ಪಾಸಿಟಿವ್​ ವರದಿ ಬಂದಿತ್ತು. ಆದರೆ ಗಂಗಾನದಿ ನೀರಿನಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿಲ್ಲ. ಇದು ನಿಜಕ್ಕೂ ಅಚ್ಚರಿಯ ವಿಚಾರ ಎಂದು ಬಿಎಸ್​​ಐಪಿ ವಿಜ್ಞಾನಿ ನೀರಜ್​ ರೈ ತಿಳಿಸಿದ್ದಾರೆ.

ಇದನ್ನೂ ಓದಿ: Modi Cabinet Reshuffle: ನೂತನ ಕ್ರೀಡಾ ಸಚಿವರಾಗಿ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅಧಿಕಾರ ಸ್ವೀಕಾರ

Ganga River is Covid 19 Free Declared By Scientists

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ