AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ
ಪೊಲೀಸ್​ Image Credit source: India Today
Follow us
ನಯನಾ ರಾಜೀವ್
|

Updated on: Nov 10, 2024 | 9:13 AM

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಗಿ ಗ್ಯಾಂಗ್‌ನ ಸದಸ್ಯ ಅಮಿತ್ ಲಾಕ್ರಾ, ಪ್ರತಿಸ್ಪರ್ಧಿ ಟಿಲ್ಲು ತಾಜ್‌ಪುರಿಯಾ ಗ್ಯಾಂಗ್‌ನಿಂದ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸುಮಾರು ಆರು ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಲಾಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳನ್ನು ಗುರುತಿಸಲು ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಶೂಟೌಟ್​ಗಳ ಪ್ರಮಾಣ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ ಒಂಬತ್ತನ್ನು ತಲುಪಿದೆ.

ಸೆಪ್ಟೆಂಬರ್ 13: ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಜಿಮ್ ಮಾಲೀಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೈವಾಡವಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಸೆಪ್ಟೆಂಬರ್ 27: ದೆಹಲಿಯ ನಾರಾಯಣದಲ್ಲಿರುವ ಕಾರ್ ಶೋ ರೂಂನಲ್ಲಿ ಗುಂಡಿನ ಚಕಮಕಿ ನಡೆದಿದೆ. ಸೆಪ್ಟೆಂಬರ್ 28: ಸುಲಿಗೆಗೆ ಒತ್ತಾಯಿಸಿ ಗುಂಡು ಹಾರಿಸಿದ ದುಷ್ಕರ್ಮಿಗಳು ನಂಗ್ಲೋಯ್‌ನಲ್ಲಿ ಸಿಹಿತಿಂಡಿ ಅಂಗಡಿಯ ಮೇಲೆ ದಾಳಿ ಮಾಡಿದ್ದಾರೆ.

ಅಕ್ಟೋಬರ್ 26: ದೆಹಲಿಯ ರಾಣಿ ಬಾಗ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಇದೇ ರೀತಿಯ ಗುಂಡಿನ ದಾಳಿ ನಡೆದಿದೆ. ನವೆಂಬರ್ 4: ನಂಗ್ಲೋಯ್‌ನಲ್ಲಿರುವ ಪ್ಲೈವುಡ್ ಶೋರೂಮ್ ಅನ್ನು ಗೋಗಿ ಗ್ಯಾಂಗ್ ಗುರಿಯಾಗಿರಿಸಿಕೊಂಡಿದೆ. ಶೂಟರ್‌ಗಳು 10 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದರು.

ನವೆಂಬರ್ 4: ಅದೇ ದಿನ ಅಲಿಪುರದ ಪ್ರಾಪರ್ಟಿ ಡೀಲರ್ ಕಚೇರಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ನವೆಂಬರ್ 6: ಎರಡು ಪ್ರತ್ಯೇಕ ಘಟನೆಗಳು ಸಂಭವಿಸಿವೆ, ಪಶ್ಚಿಮ ವಿಹಾರ್‌ನಲ್ಲಿ ಏಳರಿಂದ ಎಂಟು ಸುತ್ತುಗಳ ಗುಂಡಿನ ದಾಳಿ ಮತ್ತು ದ್ವಾರಕಾದಲ್ಲಿ ಮತ್ತೊಂದು ಗುಂಡಿನ ದಾಳಿ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್