AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ
ಪೊಲೀಸ್​ Image Credit source: India Today
ನಯನಾ ರಾಜೀವ್
|

Updated on: Nov 10, 2024 | 9:13 AM

Share

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಗಿ ಗ್ಯಾಂಗ್‌ನ ಸದಸ್ಯ ಅಮಿತ್ ಲಾಕ್ರಾ, ಪ್ರತಿಸ್ಪರ್ಧಿ ಟಿಲ್ಲು ತಾಜ್‌ಪುರಿಯಾ ಗ್ಯಾಂಗ್‌ನಿಂದ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸುಮಾರು ಆರು ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಲಾಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳನ್ನು ಗುರುತಿಸಲು ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಶೂಟೌಟ್​ಗಳ ಪ್ರಮಾಣ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ ಒಂಬತ್ತನ್ನು ತಲುಪಿದೆ.

ಸೆಪ್ಟೆಂಬರ್ 13: ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಜಿಮ್ ಮಾಲೀಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೈವಾಡವಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಸೆಪ್ಟೆಂಬರ್ 27: ದೆಹಲಿಯ ನಾರಾಯಣದಲ್ಲಿರುವ ಕಾರ್ ಶೋ ರೂಂನಲ್ಲಿ ಗುಂಡಿನ ಚಕಮಕಿ ನಡೆದಿದೆ. ಸೆಪ್ಟೆಂಬರ್ 28: ಸುಲಿಗೆಗೆ ಒತ್ತಾಯಿಸಿ ಗುಂಡು ಹಾರಿಸಿದ ದುಷ್ಕರ್ಮಿಗಳು ನಂಗ್ಲೋಯ್‌ನಲ್ಲಿ ಸಿಹಿತಿಂಡಿ ಅಂಗಡಿಯ ಮೇಲೆ ದಾಳಿ ಮಾಡಿದ್ದಾರೆ.

ಅಕ್ಟೋಬರ್ 26: ದೆಹಲಿಯ ರಾಣಿ ಬಾಗ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಇದೇ ರೀತಿಯ ಗುಂಡಿನ ದಾಳಿ ನಡೆದಿದೆ. ನವೆಂಬರ್ 4: ನಂಗ್ಲೋಯ್‌ನಲ್ಲಿರುವ ಪ್ಲೈವುಡ್ ಶೋರೂಮ್ ಅನ್ನು ಗೋಗಿ ಗ್ಯಾಂಗ್ ಗುರಿಯಾಗಿರಿಸಿಕೊಂಡಿದೆ. ಶೂಟರ್‌ಗಳು 10 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದರು.

ನವೆಂಬರ್ 4: ಅದೇ ದಿನ ಅಲಿಪುರದ ಪ್ರಾಪರ್ಟಿ ಡೀಲರ್ ಕಚೇರಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ನವೆಂಬರ್ 6: ಎರಡು ಪ್ರತ್ಯೇಕ ಘಟನೆಗಳು ಸಂಭವಿಸಿವೆ, ಪಶ್ಚಿಮ ವಿಹಾರ್‌ನಲ್ಲಿ ಏಳರಿಂದ ಎಂಟು ಸುತ್ತುಗಳ ಗುಂಡಿನ ದಾಳಿ ಮತ್ತು ದ್ವಾರಕಾದಲ್ಲಿ ಮತ್ತೊಂದು ಗುಂಡಿನ ದಾಳಿ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ