Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್
ಛೋಟಾ ರಾಜನ್
Follow us
TV9 Web
| Updated By: ganapathi bhat

Updated on:Aug 23, 2021 | 12:35 PM

ದೆಹಲಿ: ಕೊರೊನಾ ಸೋಂಕಿನ ಕಾರಣದಿಂದ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಪಾತಕಿ ಛೋಟಾ ರಾಜನ್ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತ್ತೆ ತಿಹಾರ್ ಜೈಲಿಗೆ ಮರಳಿದ್ದಾನೆ. ಏಪ್ರಿಲ್ 24ರಂದು ಕೊವಿಡ್-19 ಸೋಂಕು ದೃಢಪಟ್ಟ ನಂತರ ಛೋಟಾ ರಾಜನ್​ನನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ. 2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಬಂಧಿತನಾದ ಬಳಿಕ ರಾಜನ್, ತಿಹಾರ್ ಜೈಲಿನಲ್ಲಿದ್ದಾನೆ.

ಒಂದು ಕಾಲದಲ್ಲಿ ದಾವುದ್ ಇಬ್ರಾಹಿಂ ಸಹಚರನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ಮೇ 7ರಂದು ವರದಿಯಾಗಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಏಮ್ಸ್ ತಿಳಿಸಿತ್ತು.  2015ರಲ್ಲಿ ಛೋಟಾ ರಾಜನ್​ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ 20,500 ಕೈದಿಗಳ ಪೈಕಿ ಕನಿಷ್ಠ 170 ಕೈದಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಅಲ್ಲದೇ ಸುಮಾರು ತಿಹಾರ್ ಜೈಲಿನ ಸುಮಾರು 70 ಅಧಿಕಾರಿಗಳಿಗೂ ಸೋಂಕು ತಗುಲಿದೆ.

ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ  ಛೋಟಾ ರಾಜನ್ ಅಪರಾಧಿ  ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಇದನ್ನೂ ಓದಿ: Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್

Published On - 9:29 pm, Tue, 11 May 21

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ