AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್
ಛೋಟಾ ರಾಜನ್
TV9 Web
| Edited By: |

Updated on:Aug 23, 2021 | 12:35 PM

Share

ದೆಹಲಿ: ಕೊರೊನಾ ಸೋಂಕಿನ ಕಾರಣದಿಂದ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಪಾತಕಿ ಛೋಟಾ ರಾಜನ್ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತ್ತೆ ತಿಹಾರ್ ಜೈಲಿಗೆ ಮರಳಿದ್ದಾನೆ. ಏಪ್ರಿಲ್ 24ರಂದು ಕೊವಿಡ್-19 ಸೋಂಕು ದೃಢಪಟ್ಟ ನಂತರ ಛೋಟಾ ರಾಜನ್​ನನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ. 2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಬಂಧಿತನಾದ ಬಳಿಕ ರಾಜನ್, ತಿಹಾರ್ ಜೈಲಿನಲ್ಲಿದ್ದಾನೆ.

ಒಂದು ಕಾಲದಲ್ಲಿ ದಾವುದ್ ಇಬ್ರಾಹಿಂ ಸಹಚರನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ಮೇ 7ರಂದು ವರದಿಯಾಗಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಏಮ್ಸ್ ತಿಳಿಸಿತ್ತು.  2015ರಲ್ಲಿ ಛೋಟಾ ರಾಜನ್​ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ 20,500 ಕೈದಿಗಳ ಪೈಕಿ ಕನಿಷ್ಠ 170 ಕೈದಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಅಲ್ಲದೇ ಸುಮಾರು ತಿಹಾರ್ ಜೈಲಿನ ಸುಮಾರು 70 ಅಧಿಕಾರಿಗಳಿಗೂ ಸೋಂಕು ತಗುಲಿದೆ.

ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ  ಛೋಟಾ ರಾಜನ್ ಅಪರಾಧಿ  ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಇದನ್ನೂ ಓದಿ: Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್

Published On - 9:29 pm, Tue, 11 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!