AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್
ಛೋಟಾ ರಾಜನ್
TV9 Web
| Updated By: ganapathi bhat|

Updated on:Aug 23, 2021 | 12:35 PM

Share

ದೆಹಲಿ: ಕೊರೊನಾ ಸೋಂಕಿನ ಕಾರಣದಿಂದ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಪಾತಕಿ ಛೋಟಾ ರಾಜನ್ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತ್ತೆ ತಿಹಾರ್ ಜೈಲಿಗೆ ಮರಳಿದ್ದಾನೆ. ಏಪ್ರಿಲ್ 24ರಂದು ಕೊವಿಡ್-19 ಸೋಂಕು ದೃಢಪಟ್ಟ ನಂತರ ಛೋಟಾ ರಾಜನ್​ನನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ. 2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಬಂಧಿತನಾದ ಬಳಿಕ ರಾಜನ್, ತಿಹಾರ್ ಜೈಲಿನಲ್ಲಿದ್ದಾನೆ.

ಒಂದು ಕಾಲದಲ್ಲಿ ದಾವುದ್ ಇಬ್ರಾಹಿಂ ಸಹಚರನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ಮೇ 7ರಂದು ವರದಿಯಾಗಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಏಮ್ಸ್ ತಿಳಿಸಿತ್ತು.  2015ರಲ್ಲಿ ಛೋಟಾ ರಾಜನ್​ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ 20,500 ಕೈದಿಗಳ ಪೈಕಿ ಕನಿಷ್ಠ 170 ಕೈದಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಅಲ್ಲದೇ ಸುಮಾರು ತಿಹಾರ್ ಜೈಲಿನ ಸುಮಾರು 70 ಅಧಿಕಾರಿಗಳಿಗೂ ಸೋಂಕು ತಗುಲಿದೆ.

ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ  ಛೋಟಾ ರಾಜನ್ ಅಪರಾಧಿ  ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಇದನ್ನೂ ಓದಿ: Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್

Published On - 9:29 pm, Tue, 11 May 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ