AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA

ಪಂಜಾಬ್​​​ನಲ್ಲಿ ದರೋಡೆಕೋರರು ವ್ಯಾಪರಿಗಳಿಂದ ಮತ್ತು ಜನರಿಂದ ಸುಲಿಗೆ ಮಾಡಿದ ಹಣವನ್ನು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ( NIA) ಚಾರ್ಜ್ ಶೀಟ್​​ನಲ್ಲಿ ಈ ಅಂಶ ಹೊರಬಿದ್ದಿದೆ. ಇತ್ತೀಚೆಗೆ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಖಲಿಸ್ತಾನ್ ಬೆಂಬಲಿಗರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಹಾಯದಿಂದ ಪಂಜಾಬ್​​​ನಲ್ಲಿರುವ ದರೋಡೆಕೋರರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದಾರೆ.

ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA
ಸಾಂದರ್ಭಿಕ ಚಿತ್ರ Image Credit source: tv9punjabi
ಅಕ್ಷಯ್​ ಪಲ್ಲಮಜಲು​​
|

Updated on:Oct 03, 2023 | 4:07 PM

Share

ಪಂಜಾಬ್​​​ನಲ್ಲಿ ದರೋಡೆಕೋರರು ವ್ಯಾಪರಿಗಳಿಂದ ಮತ್ತು ಜನರಿಂದ ಸುಲಿಗೆ ಮಾಡಿದ ಹಣವನ್ನು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ( NIA) ಚಾರ್ಜ್ ಶೀಟ್​​ನಲ್ಲಿ ಈ ಅಂಶ ಹೊರಬಿದ್ದಿದೆ. ಇತ್ತೀಚೆಗೆ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಖಲಿಸ್ತಾನ್ ಬೆಂಬಲಿಗರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಹಾಯದಿಂದ ಪಂಜಾಬ್​​​ನಲ್ಲಿರುವ ದರೋಡೆಕೋರರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಇನ್ನು ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಬಿಗಿಭದ್ರತೆ ಇರುವ ಕಾರಣ ನೇಪಾಳದ ಮೂಲಕ ಈ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂದು ಎನ್​​ಐಎ ವರದಿಯಲ್ಲಿ ತಿಳಿಸಿದೆ.

ಈ ಶಸ್ತ್ರಾಸ್ತ್ರಗಳನ್ನು ಪಂಜಾಬ್​​​​ ದರೋಡೆಕೋರರಿಗೆ ಕಳುಹಿಸಲು ವಿದೇಶದಲ್ಲಿ ಕುಳಿತಿರುವ ಖಲಿಸ್ತಾನಿ ಉಗ್ರರು ಆದೇಶ ನೀಡುತ್ತಿದ್ದಾರೆ. ಇನ್ನು ಈ ಕೃತ್ಯಕ್ಕಾಗಿ ಇಂಟರ್ನೆಟ್ ಮಾಧ್ಯಮ, ಸಿಗ್ನಲ್ ಅಪ್ಲಿಕೇಶನ್ ಮತ್ತು ವಾಟ್ಸಾಪ್​​ಗಳನ್ನು ಬಳಸಲಾಗುತ್ತದೆ. ಈ ದರೋಡೆಕೋರರು ವಿದೇಶದಲ್ಲಿ ಕುಳಿತಿರುವ ಖಲಿಸ್ತಾನಿ ಉಗ್ರರು ಆದೇಶದಂತೆ ಕೆಲಸ ಮಾಡುತ್ತಾರೆ. ಜತೆಗೆ ಭಾರತದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಖಲಿಸ್ತಾನಿ ಉಗ್ರರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು NIA ವರದಿಯಲ್ಲಿ ಹೇಳಿದೆ.

ಈ ಕೃತ್ಯಕ್ಕೆ ಖಲಿಸ್ತಾನಿನ ಭಯೋತ್ಪಾದಕರು ಜೈಲಿನಲ್ಲಿರುವ ದರೋಡೆಕೋರರು ಹಾಗೂ ಗೂಂಡಾಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಭಯೋತ್ಪಾದಕ ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ, ದರೋಡೆಕೋರ ಗೋಲ್ಡಿ ಬ್ರಾರ್, ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಅನೇಕ ಗುಂಪುಗಳು ಇವರ ಜತೆಗೆ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: NIA ಪೊಲೀಸರ ಕಾರ್ಯಚರಣೆ; ಕರ್ನಾಟಕದ ಭಯೋತ್ಪಾದನಾ ಚಟುವಟಿಕೆಯ ಕಿಂಗ್ ಪಿನ್ ಅರಾಫತ್ ಅಲಿ ಬಂಧನ

ಎನ್​​ಐಎ 2020ರಲ್ಲಿ ಸಲ್ಲಿಸಿದ ಚಾರ್ಜ್ ಶೀಟ್​​ನಲ್ಲಿ ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ ಇಂತಹ ಕೃತ್ಯಗಳಲ್ಲಿ ತೋಡಗಿಕೊಂಡಿದ್ದಾನೆ ಎಂದು ಹೇಳಲಾಗಿತ್ತು. ಈ ದರೋಡೆಕೋರರ ಗುಂಪುಗಳು ಭಯೋತ್ಪಾದಕ ನಿಧಿ, ಭಯೋತ್ಪಾದಕ ಜಾಲಗಳನ್ನು ಸಂಘಟಿಸುವುದು , ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆಯನ್ನು ಸಂಘಟಿಸುವುದು ಮತ್ತು ಪಂಜಾಬ್‌ನಲ್ಲಿ ಉದ್ದೇಶಿತ ಹತ್ಯೆಗಳನ್ನು ಮಾಡುವುದು ಇದರ ಮುಖ್ಯ ಕೆಲಸವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2022 ಆಗಸ್ಟ್​​ ಮೂವರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಇದರಿಂದ ದುಬೈ, ಪಾಕಿಸ್ತಾನ, ನೇಪಾಳ ಮತ್ತು ಭಾರತದಾದ್ಯಂತ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಲು ಸಹಕಾರಿಯಾಗಿತ್ತು.

ಎನ್​​​ಐಎ ದಿನದಿಂದ ದಿನಕ್ಕೆ ಒಂದೊಂದೇ ಸತ್ಯಗಳು ತನ್ನ ಚಾರ್ಜ್ ಶೀಟ್​​ನಲ್ಲಿ ತಿಳಿಸುತ್ತಿದೆ. ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾದ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಜಾಲವನ್ನು ಬಳಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಇನ್ನು ಕೆನಡಾದಲ್ಲಿ ಕುಳಿತು ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ ಈ ಎಲ್ಲ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:03 pm, Tue, 3 October 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!