AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA

ಪಂಜಾಬ್​​​ನಲ್ಲಿ ದರೋಡೆಕೋರರು ವ್ಯಾಪರಿಗಳಿಂದ ಮತ್ತು ಜನರಿಂದ ಸುಲಿಗೆ ಮಾಡಿದ ಹಣವನ್ನು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ( NIA) ಚಾರ್ಜ್ ಶೀಟ್​​ನಲ್ಲಿ ಈ ಅಂಶ ಹೊರಬಿದ್ದಿದೆ. ಇತ್ತೀಚೆಗೆ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಖಲಿಸ್ತಾನ್ ಬೆಂಬಲಿಗರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಹಾಯದಿಂದ ಪಂಜಾಬ್​​​ನಲ್ಲಿರುವ ದರೋಡೆಕೋರರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದಾರೆ.

ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ನ ದರೋಡೆಕೋರರು: ಭಯಾನಕ ಸತ್ಯ ಬಿಚ್ಚಿಟ್ಟ NIA
ಸಾಂದರ್ಭಿಕ ಚಿತ್ರ Image Credit source: tv9punjabi
ಅಕ್ಷಯ್​ ಪಲ್ಲಮಜಲು​​
|

Updated on:Oct 03, 2023 | 4:07 PM

Share

ಪಂಜಾಬ್​​​ನಲ್ಲಿ ದರೋಡೆಕೋರರು ವ್ಯಾಪರಿಗಳಿಂದ ಮತ್ತು ಜನರಿಂದ ಸುಲಿಗೆ ಮಾಡಿದ ಹಣವನ್ನು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ( NIA) ಚಾರ್ಜ್ ಶೀಟ್​​ನಲ್ಲಿ ಈ ಅಂಶ ಹೊರಬಿದ್ದಿದೆ. ಇತ್ತೀಚೆಗೆ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಖಲಿಸ್ತಾನ್ ಬೆಂಬಲಿಗರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಹಾಯದಿಂದ ಪಂಜಾಬ್​​​ನಲ್ಲಿರುವ ದರೋಡೆಕೋರರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಇನ್ನು ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಬಿಗಿಭದ್ರತೆ ಇರುವ ಕಾರಣ ನೇಪಾಳದ ಮೂಲಕ ಈ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂದು ಎನ್​​ಐಎ ವರದಿಯಲ್ಲಿ ತಿಳಿಸಿದೆ.

ಈ ಶಸ್ತ್ರಾಸ್ತ್ರಗಳನ್ನು ಪಂಜಾಬ್​​​​ ದರೋಡೆಕೋರರಿಗೆ ಕಳುಹಿಸಲು ವಿದೇಶದಲ್ಲಿ ಕುಳಿತಿರುವ ಖಲಿಸ್ತಾನಿ ಉಗ್ರರು ಆದೇಶ ನೀಡುತ್ತಿದ್ದಾರೆ. ಇನ್ನು ಈ ಕೃತ್ಯಕ್ಕಾಗಿ ಇಂಟರ್ನೆಟ್ ಮಾಧ್ಯಮ, ಸಿಗ್ನಲ್ ಅಪ್ಲಿಕೇಶನ್ ಮತ್ತು ವಾಟ್ಸಾಪ್​​ಗಳನ್ನು ಬಳಸಲಾಗುತ್ತದೆ. ಈ ದರೋಡೆಕೋರರು ವಿದೇಶದಲ್ಲಿ ಕುಳಿತಿರುವ ಖಲಿಸ್ತಾನಿ ಉಗ್ರರು ಆದೇಶದಂತೆ ಕೆಲಸ ಮಾಡುತ್ತಾರೆ. ಜತೆಗೆ ಭಾರತದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಖಲಿಸ್ತಾನಿ ಉಗ್ರರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು NIA ವರದಿಯಲ್ಲಿ ಹೇಳಿದೆ.

ಈ ಕೃತ್ಯಕ್ಕೆ ಖಲಿಸ್ತಾನಿನ ಭಯೋತ್ಪಾದಕರು ಜೈಲಿನಲ್ಲಿರುವ ದರೋಡೆಕೋರರು ಹಾಗೂ ಗೂಂಡಾಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಭಯೋತ್ಪಾದಕ ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ, ದರೋಡೆಕೋರ ಗೋಲ್ಡಿ ಬ್ರಾರ್, ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಅನೇಕ ಗುಂಪುಗಳು ಇವರ ಜತೆಗೆ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: NIA ಪೊಲೀಸರ ಕಾರ್ಯಚರಣೆ; ಕರ್ನಾಟಕದ ಭಯೋತ್ಪಾದನಾ ಚಟುವಟಿಕೆಯ ಕಿಂಗ್ ಪಿನ್ ಅರಾಫತ್ ಅಲಿ ಬಂಧನ

ಎನ್​​ಐಎ 2020ರಲ್ಲಿ ಸಲ್ಲಿಸಿದ ಚಾರ್ಜ್ ಶೀಟ್​​ನಲ್ಲಿ ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ ಇಂತಹ ಕೃತ್ಯಗಳಲ್ಲಿ ತೋಡಗಿಕೊಂಡಿದ್ದಾನೆ ಎಂದು ಹೇಳಲಾಗಿತ್ತು. ಈ ದರೋಡೆಕೋರರ ಗುಂಪುಗಳು ಭಯೋತ್ಪಾದಕ ನಿಧಿ, ಭಯೋತ್ಪಾದಕ ಜಾಲಗಳನ್ನು ಸಂಘಟಿಸುವುದು , ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆಯನ್ನು ಸಂಘಟಿಸುವುದು ಮತ್ತು ಪಂಜಾಬ್‌ನಲ್ಲಿ ಉದ್ದೇಶಿತ ಹತ್ಯೆಗಳನ್ನು ಮಾಡುವುದು ಇದರ ಮುಖ್ಯ ಕೆಲಸವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2022 ಆಗಸ್ಟ್​​ ಮೂವರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಇದರಿಂದ ದುಬೈ, ಪಾಕಿಸ್ತಾನ, ನೇಪಾಳ ಮತ್ತು ಭಾರತದಾದ್ಯಂತ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಲು ಸಹಕಾರಿಯಾಗಿತ್ತು.

ಎನ್​​​ಐಎ ದಿನದಿಂದ ದಿನಕ್ಕೆ ಒಂದೊಂದೇ ಸತ್ಯಗಳು ತನ್ನ ಚಾರ್ಜ್ ಶೀಟ್​​ನಲ್ಲಿ ತಿಳಿಸುತ್ತಿದೆ. ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾದ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಜಾಲವನ್ನು ಬಳಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಇನ್ನು ಕೆನಡಾದಲ್ಲಿ ಕುಳಿತು ಅರ್ಷ್‌ದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾ ಈ ಎಲ್ಲ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:03 pm, Tue, 3 October 23

Follow Us
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್