Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Train: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನೊಳಗೆ ಕಸದ ರಾಶಿ; ವೈರಲ್ ಫೋಟೋಗೆ ಜನರ ಪ್ರತಿಕ್ರಿಯೆ ನೋಡಿ

IAS officer Awanish Sharan Tweet: ಐಎಎಸ್ ಅಧಿಕಾರಿ ಅವನೀಶ್ ಶರಣ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ರೈಲಿನ ಬೋಗಿಗಳಲ್ಲಿ ಬಾಟಲಿಗಳು, ಪ್ಲಾಸ್ಟಿಕ್ ಬ್ಯಾಗು ಇತ್ಯಾದಿ ತ್ಯಾಜ್ಯಗಳು ಬಿದ್ದಿರುವುದು ಮತ್ತು ಕಾರ್ಮಿಕರೊಬ್ಬರು ಪೊರಕೆ ಹಿಡಿದು ಇವುಗಳನ್ನು ಗುಡಿಸಲು ನಿಂತಿರುವುದನ್ನು ಈ ಫೋಟೋದಲ್ಲಿ ಕಾಣಬಹುದು.

Vande Bharat Train: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನೊಳಗೆ ಕಸದ ರಾಶಿ; ವೈರಲ್ ಫೋಟೋಗೆ ಜನರ ಪ್ರತಿಕ್ರಿಯೆ ನೋಡಿ
ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನೊಳಗೆ ಕಸದ ರಾಶಿ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 28, 2023 | 2:42 PM

ನವದೆಹಲಿ: ಜನರ ಗಮನ ಸೆಳೆದಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನ (Vande Bharat Express Train) ಬೋಗಿಯೊಂದರಲ್ಲಿ ತುಂಬಿದ್ದ ಕಸದ ರಾಶಿಯ ಫೋಟೋವೊಂದು (Garbage photo) ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿದೆ. ವಂದೇ ಭಾರತ್ ರೈಲನ್ನು ಭಾರತದ ಪ್ರಗತಿಯ ಸಂಕೇತವೆಂದೇ ಗುರುತಿಸುವ ಜನರಿಗೆ ಈ ಫೋಟೋ ಇರಿಸುಮುರಿಸು ತಂದಿದೆ.

ಐಎಎಸ್ ಅಧಿಕಾರಿ ಅವನೀಶ್ ಶರಣ್ (Awanish Sharan) ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ರೈಲಿನ ಬೋಗಿಗಳಲ್ಲಿ ಬಾಟಲಿಗಳು, ಪ್ಲಾಸ್ಟಿಕ್ ಬ್ಯಾಗು ಇತ್ಯಾದಿ ತ್ಯಾಜ್ಯಗಳು ಬಿದ್ದಿರುವುದು ಮತ್ತು ಕಾರ್ಮಿಕರೊಬ್ಬರು ಪೊರಕೆ ಹಿಡಿದು ಇವುಗಳನ್ನು ಗುಡಿಸಲು ನಿಂತಿರುವುದನ್ನು ಈ ಫೋಟೋದಲ್ಲಿ ಕಾಣಬಹುದು. ಐಎಎಸ್ ಅಧಿಕಾರಿ ಈ ಫೋಟೋ ಹಾಕಿ ವೀ ದಿ ಪೀಪಲ್ (ನಾವು ಜನರು) ಎಂದು ಕ್ಯಾಪ್ಚನ್ ಕೊಟ್ಟು ಮಾರ್ಮಿಕವಾಗಿ ಜನರ ಬೇಜಾವ್ದಾರಿತನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವನೀಶ್ ಶರಣ್ ಅವರ ಈ ಪೋಸ್ಟ್​ಗೆ ಹಲವು ಟ್ವೀಟಿಗರು ಸ್ಪಂದಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಜನರ ನಡವಳಿಕೆಯನ್ನು ಬಹಳ ಮಂದಿ ಖಂಡಿಸಿದ್ದಾರೆ. ಅಂಥ ಕೆಲ ಪ್ರತಿಕ್ರಿಯೆಗಳು ಇಲ್ಲಿವೆ.

ಸರ್, ಜನರಿಗೆ ತಮ್ಮ ಹಕ್ಕು ಏನೆಂದು ಗೊತ್ತಿದೆಯೇ ಹೊರತು ತಮ್ಮ ಕರ್ತವ್ಯ ಏನೆಂದು ತಿಳಿದಿಲ್ಲ ಎಂದು ಒಬ್ಬರು ಬರೆದರೆ, ನಾವು ಉತ್ತಮ ಸೌಲಭ್ಯ, ಸೌಕರ್ಯ ಬೇಕೆಂದು ಕೇಳುತ್ತೇವೆ. ಆದರೆ, ಅದನ್ನು ಹೇಗೆ ಪಾಲಿಸಬೇಕು, ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಗೊತ್ತಿಲ್ಲ ಎಂದು ಮಗದೊಬ್ಬರು ಹತಾಶೆ ಪಟ್ಟಿದ್ದಾರೆ.

ಯಾವುದೇ ರೈಲಿನಲ್ಲೂ ಇದು ಸಾಮಾನ್ಯ ಎಂದು ಇನ್ನೊಬ್ಬರು ಇನ್ನಷ್ಟು ಹತಾಶೆಯಿಂದ ಬರೆದಿದ್ದಾರೆ. ನಮ್ಮ ಜವಾಬ್ದಾರಿ ಅರಿಕೊಳ್ಳದಿದ್ದರೆ ಏನೂ ಬದಲಾಗದು. ದೇಶವನ್ನು ಆರೋಗ್ಯಯುತವಾಗಿ ಹೇಗೆ ಇಟ್ಟುಕೊಳ್ಳಬೇಕೆಂಬುದು ಜನರಿಗೆ ಗೊತ್ತಿರಬೇಕು ಎಂದೊಬ್ಬರು ಕಾಮೆಂಟಿಸಿದ್ದಾರೆ.

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನಲ್ಲಿ ಕಸದ ರಾಶಿ ಕಾಣಿಸುವ ವಿಚಾರ ಈಗ ಹೊಸದಾಗಿ ಉಳಿದಿಲ್ಲ. ಕೆಲ ದಿನಗಳ ಹಿಂದೆ ಸಿಕಂದರಾಬಾದ್ ವಿಶಾಖಪಟ್ಟಣಂ ಮಾರ್ಗದ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನ ಬೋಗಿಗಳಲ್ಲಿ ಕಸಗಳ ರಾಶಿಯೇ ತುಂಬಿರುವುದು ಬೆಳಕಿಗೆ ಬಂದಿತ್ತು. ಸಿಬ್ಬಂದಿ ದಿನವೂ ಬೋಗಿಗಳನ್ನು ಸ್ವಚ್ಛಗೊಳಿಸುತ್ತಿದ್ದರೂ ಕಸ ತುಂಬುತ್ತಲೇ ಹೋಗುತ್ತಿದೆ. ರೈಲ್ವೆ ಇಲಾಖೆ ನಿರಂತರವಾಗಿ ಸ್ವಚ್ಛತಾ ಜಾಗೃತಿ ಮೂಡಿಸುವ ಕೆಲಸವನ್ನಂತೂ ಮಾಡುತ್ತಿದೆ. ಆದರೆ, ಎಲ್ಲೆಂದರಲ್ಲಿ ಕಸ ಬಿಸಾಡುವ ಕೆಲ ಜನರ ಚಾಳಿ ಮಾತ್ರ ಬದಲಾದಂತೆ ಕಾಣುತ್ತಿಲ್ಲ.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !