AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garbha Sanskar: ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ ಅಭಿಯಾನ, ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ

ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆಯು ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ

Garbha Sanskar: ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ ಅಭಿಯಾನ, ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ
ಗರ್ಭಿಣಿImage Credit source: Hindustan Times
ನಯನಾ ರಾಜೀವ್
|

Updated on: Jun 11, 2023 | 10:48 AM

Share

ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆಯು ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ. ಭಗವದ್ಗೀತೆ ಮತ್ತು ರಾಮಾಯಣದಂತಹ ಧಾರ್ಮಿಕ ಗ್ರಂಥಗಳನ್ನು ಓದಲು, ಸಂಸ್ಕೃತ ಮಂತ್ರಗಳನ್ನು ಪಠಿಸಲು ಮತ್ತು ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸಲಾಗುತ್ತದೆ, ಇದರಿಂದ ಸುಸಂಸ್ಕೃತ ಮತ್ತು ದೇಶಭಕ್ತ ಶಿಶುಗಳು ಹುಟ್ಟುತ್ತವೆ ಎಂದು ಹೇಳಿದೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಶಿಶುಗಳು ಗರ್ಭದಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಯುವುದನ್ನು ಖಚಿತಪಡಿಸಿಕೊಳ್ಳಲು, ಎರಡು ವರ್ಷವನ್ನು ತಲುಪುವವರೆಗೆ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.

ಯೋಗಾಭ್ಯಾಸವು ಸಹಜ ಹೆರಿಗೆಯಾಗಲು ಗರ್ಭಿಣಿಯರಿಗೆ ಸಹಾಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಇಂಥ ಅಭ್ಯಾಸಗಳು ಶಿಶುಗಳ ಮೆದುಳಿನ ಮೇಲೆ ಆಳವಾದ ಧನಾತ್ಮಕ ಪರಿಣಾಮ ಬೀರುತ್ತವೆ. ನಾಲ್ಕು ತಿಂಗಳ ಗರ್ಭದಲ್ಲಿರುವ ಮಗು ಕೇಳಲು ಪ್ರಾರಂಭಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಮತ್ತಷ್ಟು ಓದಿ: Al Pacino: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

ಇದಕ್ಕಾಗಿ, ದೇಶದಲ್ಲಿ ಐದು ಪ್ರದೇಶಗಳಾಗಿ ವಿಂಗಡಿಸಿದ್ದೇವೆ ಮತ್ತು ಪ್ರತಿಯೊಂದೂ 10 ವೈದ್ಯರ ತಂಡವನ್ನು ಹೊಂದಿದ್ದು, ಅವರು ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತಾರೆ. ಈ ಪ್ರತಿಯೊಬ್ಬ ವೈದ್ಯರು ತಮ್ಮ ತಮ್ಮ ಪ್ರದೇಶಗಳಲ್ಲಿ 20 ಮಂದಿ ಗರ್ಭಿಣಿಯರಿಗೆ ಮಾರ್ಗದರ್ಶನ ನೀಡುವ ಮೂಲಕ ಕಾರ್ಯಕ್ರಮ ಪ್ರಾರಂಭಿಸುತ್ತಾರೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿ ಪಿಟಿಐಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ