AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garib Kalyan Sammelan: ಶಿಮ್ಲಾದಲ್ಲಿ ಮೇ 31ರಂದು ಗರೀಬ್ ಕಲ್ಯಾಣ ಸಮ್ಮೇಳನ; ಪ್ರಧಾನಿ ನರೇಂದ್ರ ಮೋದಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಿಮ್ಲಾದಲ್ಲಿ 'ಗರೀಬ್ ಕಲ್ಯಾಣ್ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದು, ತಮ್ಮ ಸರ್ಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.

Garib Kalyan Sammelan: ಶಿಮ್ಲಾದಲ್ಲಿ ಮೇ 31ರಂದು ಗರೀಬ್ ಕಲ್ಯಾಣ ಸಮ್ಮೇಳನ; ಪ್ರಧಾನಿ ನರೇಂದ್ರ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:May 30, 2022 | 5:05 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್​ಡಿಎ ಸರ್ಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೇ 31ರಂದು ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ ಸಮ್ಮೇಳನ’ದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ (Garib Kalyan Sammelan) ಭಾಗವಹಿಸಲಿದ್ದು, ತಮ್ಮ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.

ಈ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ರಾಜ್ಯ ರಾಜಧಾನಿಗಳು, ಜಿಲ್ಲಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಈ ಗರೀಬ್ ಕಲ್ಯಾಣ ಸಮ್ಮೇಳನವು ದೇಶಾದ್ಯಂತ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ನೇರವಾಗಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಪರಿಕಲ್ಪನೆಯನ್ನು ರೂಪಿಸುತ್ತದೆ ಮತ್ತು ಸರ್ಕಾರವು ನಡೆಸುತ್ತಿರುವ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರತಿಕ್ರಿಯೆಯನ್ನು ಪಡೆಯುವ ಪ್ರಯತ್ನದಲ್ಲಿದೆ.

ಇದನ್ನೂ ಓದಿ: PM Cares: ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಹಲವು ಸೌಲಭ್ಯ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ
Image
ಸಿಂಧೂ ಜಲ ಒಪ್ಪಂದದ ಕುರಿತು ಭಾರತ-ಪಾಕಿಸ್ತಾನ ನಡುವಿನ 118ನೇ ದ್ವಿಪಕ್ಷೀಯ ಸಭೆ ಇಂದು ಆರಂಭ
Image
ತಿರುಮಲದಲ್ಲಿ ಜನವೋ ಜನ; ದೇವರ ದರ್ಶನ ಸಿಗಲು 2 ದಿನ ಕಾಯಬೇಕು: ಟಿಟಿಡಿ
Image
PM Cares: ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಹಲವು ಸೌಲಭ್ಯ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ವಿಧಾನಸಭೆಯ ಸದಸ್ಯರು ಮತ್ತು ಇತರ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ದೇಶಾದ್ಯಂತ ತಮ್ಮ ತಮ್ಮ ಸ್ಥಳಗಳಲ್ಲಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸುವ ಮೂಲಕ ‘ಗರೀಬ್ ಕಲ್ಯಾಣ್ ಸಮ್ಮೇಳನ’ ಬೆಳಗ್ಗೆ 9:45ಕ್ಕೆ ಪ್ರಾರಂಭವಾಗಲಿದೆ. ನಾಳೆ ಬೆಳಗ್ಗೆ ಸುಮಾರು 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮ್ಮೇಳನದ ಸಮಯದಲ್ಲಿ ಪ್ರಧಾನಮಂತ್ರಿ ಮೋದಿ ಭಾರತ ಸರ್ಕಾರದ 9 ಇಲಾಖೆಗಳ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 30 May 22

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​