AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, 28 ಮಂದಿ ಆಸ್ಪತ್ರೆಗೆ ದಾಖಲು

ರಾಸಾಯನಿಕ ಕಾರ್ಖಾನೆ(Chemical Factory) ಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28 ಮಂದಿ ಅಸ್ವಸ್ಥರಾಗಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಜರಾತ್​ನ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, 28 ಮಂದಿ ಆಸ್ಪತ್ರೆಗೆ ದಾಖಲು
ರಾಸಾಯನಿಕ ಕಾರ್ಖಾನೆImage Credit source: India Today
ನಯನಾ ರಾಜೀವ್
|

Updated on: Aug 24, 2023 | 8:37 AM

Share

ರಾಸಾಯನಿಕ ಕಾರ್ಖಾನೆ(Chemical Factory) ಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28 ಮಂದಿ ಅಸ್ವಸ್ಥರಾಗಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಸರೋದ್ ಗ್ರಾಮದ ಪಿಐ ಇಂಡಸ್ಟ್ರೀಸ್‌ನಲ್ಲಿನ ಟ್ಯಾಂಕ್‌ನಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಸೋರಿಕೆಯಾದ ಬ್ರೋಮಿನ್ ಅನಿಲವನ್ನು ಉಸಿರಾಡಿದ ನಂತರ ಸಂತ್ರಸ್ತ ಜನರು ಉಸಿರಾಟದ ತೊಂದರೆ ಅನುಭವಿಸಿದ್ದಾರೆ ಎಂದು ಭರೂಚ್ ನಿವಾಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌ಆರ್ ಧಾಂಧಲ್ ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನಿಲ ಸೋರಿಕೆಯಾದ ವರದಿಯಾದಾಗ ಕಾರ್ಖಾನೆಯಲ್ಲಿ ಸುಮಾರು 2,000 ಕಾರ್ಮಿಕರು ಇದ್ದರು. ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವೇದಾಚ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವೈಶಾಲಿ ಅಹಿರ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ

ಟ್ಯಾಂಕ್ ಬಳಿ ಇದ್ದ ಕಾರ್ಮಿಕರು ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋರಿಕೆಯನ್ನು ನಿಯಂತ್ರಿಸಲಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು