AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಜನಸಾಮಾನ್ಯರಿಗೆ ಕೊಂಚ ರಿಲೀಫ್; ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ

LPG Gas Cylinder Rate: ಅಡುಗೆ ಅನಿಲ (LPG) ಬಳಕೆದಾರರಿಗೂ ಸಂತಸದ ವಿಚಾರ ನೀಡಿರುವ IOCL ಅಡುಗೆ ಅನಿಲ ಸಿಲಿಂಡರ್ ದರವನ್ನು 10 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಪ್ರತೀ ಸಿಲಿಂಡರ್ ದರ ದೆಹಲಿಯಲ್ಲಿ ₹ 809 ಆಗಿದೆ.

LPG Cylinder Price: ಜನಸಾಮಾನ್ಯರಿಗೆ ಕೊಂಚ ರಿಲೀಫ್; ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ
ಎಲ್​ಪಿಜಿ
TV9 Web
| Edited By: |

Updated on:Apr 05, 2022 | 12:59 PM

Share

ದೆಹಲಿ: ಅಡುಗೆ ಗ್ಯಾಸ್ ಸಿಲಿಂಡರ್ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿಯಮಿತ (IOCL) ಇಂದು (ಮಾರ್ಚ್ 31) ಘೋಷಿಸಿದೆ. ಏಪ್ರಿಲ್ 1ರ ಬಳಿಕ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ನವೆಂಬರ್ 2020ರಿಂದ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿತ್ತು. ಭಾರತವು ಕಚ್ಚಾ ತೈಲಗಳ ಆಮದನ್ನು ಅವಲಂಬಿಸಿಕೊಂಡಿತ್ತು. ಹಾಗೂ ತೈಲ ಬೆಲೆ ಅಥವಾ ಅಡುಗೆ ಅನಿಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತವನ್ನು ಅವಲಂಬಿಸಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾದ ಬೆಲೆ ಏರಿಕೆ ದೇಶಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೂ ಪರಿಣಾಮ ಬೀರಿತ್ತು.

ಆದರೆ, ಕೊವಿಡ್-19 ಹಾಗೂ ಯುರೋಪ್ ಮತ್ತು ಏಷ್ಯಾದ ಹಲವು ದೇಶಗಳಲ್ಲಿ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳು ಹೆಚ್ಚಾದಾಗ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಮಾರ್ಚ್ ದ್ವಿತೀಯಾರ್ಧದಲ್ಲಿ ಇಳಿಕೆಯಾಯಿತು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತೈಲ ಕಂಪೆನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಿತ್ತು. ಪೆಟ್ರೋಲ್ ದರವನ್ನು ದೆಹಲಿ ಮಾರುಕಟ್ಟೆಯಲ್ಲಿ 61 ಪೈಸೆ ಮತ್ತು ಡೀಸೆಲ್ ದರವನ್ನು 60 ಪೈಸೆ ಇಳಿಸಿತ್ತು. ಈ ಅವಧಿಯಲ್ಲಿ ದೇಶದ ಇತರ ನಗರಗಳಲ್ಲಿ ಕೂಡ ಇಂಧನ ದರ ಕೊಂಚ ಇಳಿಕೆ ಕಂಡಿತ್ತು. ಇದರಿಂದ ವಾಹನ ಸವಾರರಿಗೆ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆರ್ಥಿಕ ಸಂಕಷ್ಟದ ಬಿಗಿ ಹಿಡಿತದಿಂದ ಸ್ವಲ್ಪ ಸಡಿಲವಾದಂತಾಗಿತ್ತು.

ಇದೀಗ, ಅಡುಗೆ ಅನಿಲ (LPG) ಬಳಕೆದಾರರಿಗೂ ಸಂತಸದ ವಿಚಾರ ನೀಡಿರುವ IOCL ಅಡುಗೆ ಅನಿಲ ಸಿಲಿಂಡರ್ ದರವನ್ನು 10 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಪ್ರತೀ ಸಿಲಿಂಡರ್ ದರ ದೆಹಲಿಯಲ್ಲಿ ₹ 809 ಆಗಿದೆ. ದೇಶದ ಇತರ ಮಾರುಕಟ್ಟೆಯಲ್ಲಿ ಕೂಡ ಪ್ರತಿ ಸಿಲಿಂಡರ್ ಮೇಲೆ ₹ 10 ಇಳಿಕೆ ಕಂಡುಬರಲಿದೆ. ನೂತನ ದರ ನಾಳೆಯಿಂದ ಜಾರಿಯಾಗಲಿದೆ.

ಇದನ್ನೂ ಓದಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇನ್ನು 10 ವರ್ಷ ಆದರೂ ಇಳಿಯುವ ಸಾಧ್ಯತೆ ಇಲ್ಲ! ಯಾಕೆ ಗೊತ್ತಾ?

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ

Published On - 10:11 pm, Wed, 31 March 21

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ