AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GATE 2021 Result Date: ಗೇಟ್ ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ; ಹೆಚ್ಚಿನ ವಿವರಗಳು ಇಲ್ಲಿವೆ

Bombay IIT GATE Exam Results: ಈ ಬಾರಿಯ ಗೇಟ್ ಪರೀಕ್ಷೆ ಒಟ್ಟು 27 ವಿಷಯಗಳಿಗೆ ನಡೆದಿದ್ದು, ಫೆಬ್ರವರಿ 6,7,13 ಮತ್ತು 14ರಂದು ಪರೀಕ್ಷೆಗಳು ಜರುಗಿದ್ದವು. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

GATE 2021 Result Date: ಗೇಟ್ ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ; ಹೆಚ್ಚಿನ ವಿವರಗಳು ಇಲ್ಲಿವೆ
ಗೇಟ್ ಪರೀಕ್ಷೆಯ ಫಲಿತಾಂಶ ಮಾರ್ಚ್ 22ರಂದು ಬಿಡುಗಡೆಯಾಗಲಿದೆ.
guruganesh bhat
| Edited By: |

Updated on:Mar 18, 2021 | 6:56 PM

Share

ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (IIT Bombay) 2021ನೇ ಸಾಲಿನ ಗೇಟ್ ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 22 ರಂದು ಪ್ರಕಟಿಸುವುದಾಗಿ ತಿಳಿಸಿದೆ. ಗೇಟ್ ಪರೀಕ್ಷೆಯ ಫಲಿತಾಂಶವನ್ನು ಐಐಟಿ ಬಾಂಬೆಯ ಅಧಿಕೃತ ಜಾಲತಾಣ gate.iitb.ac.in ಅಲ್ಲಿ ವೀಕ್ಷಿಸಬಹುದಾಗಿದ್ದು, ಫೆಬ್ರವರಿ 26 ರಂದೇ ಈ ಬಾರಿಯ ಗೇಟ್ ಪರೀಕ್ಷೆಯ ಅಧಿಕೃತ ಉತ್ತರಗಳ ಪ್ರತಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಉತ್ತರ ಪತ್ರಿಕೆಯಲ್ಲಿನ ಉತ್ತರಗಳನ್ನು ಪ್ರಶ್ನಿಸಲು ಮಾರ್ಚ್ 4ರವರೆಗೆ ಕಾಲಾವಕಾಶವನ್ನು ಸಹ ನೀಡಲಾಗಿದೆ. (GATE exam results will be announced soon, check on the official website)

ಫಲಿತಾಂಶ ವೀಕ್ಷಣೆ ಹೇಗೆ? ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಧಿಕೃತ ಜಾಲತಾಣದ ವಿಳಾಸ ಇಂತಿದೆ: gate.iitb.ac.in

  • ಅಧಿಕೃತ ಜಾಲತಾಣದ ಹೋಮ್ ಪೇಜ್​ನಲ್ಲಿ GATE 2021 RESULTS ಮೇಲೆ ಕ್ಲಿಕ್ಕಿಸಿ
  • ನೀವು ಫಲಿತಾಂಶದ ಪುಟಕ್ಕೆ ರಿ ಡೈರೆಕ್ಟ್ ಆಗುತ್ತೀರಿ
  • ನಿಮ್ಮ ಅಪ್ಲಿಕೇಶನ್ ಐಡಿ ಮತ್ತು ಪಾಸ್​ವರ್ಡ್​ನ್ನು ನಮೂದಿಸಿ
  • ಇಷ್ಟು ಮಾಡಿದರೆ ನಿಮಗೆ ನಿಮ್ಮ ಗೆಟ್ ಪರೀಕ್ಷೆಯ ಫಲಿತಾಂಶ ತೆರೆದುಕೊಳ್ಳುತ್ತದೆ.
  • ಭವಿಷ್ಯದ ಉಪಯೋಗಳಿಗಾಗಿ ನಿಮ್ಮ ಫಲಿತಾಂಶದ ಪೇಜ್​ನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ

ನೀವು ನೆನಪಿಡಲೇಬೇಕಾದ ಒಂದು ವಿಷಯವೆಂದರೆ, ಗೇಟ್ ಪರೀಕ್ಷೆಯ ಫಲಿತಾಂಶವು ಮೂರು ವರ್ಷಗಳಿಗೆ ಮಾತ್ರ ಸೀಮಿತವಿರುತ್ತದೆ. ಈ ಬಾರಿಯ ಗೇಟ್ ಪರೀಕ್ಷೆ ಒಟ್ಟು 27 ವಿಷಯಗಳಿಗೆ ನಡೆದಿದ್ದು, ಫೆಬ್ರವರಿ 6,7,13 ಮತ್ತು 14ರಂದು ಪರೀಕ್ಷೆಗಳು ಜರುಗಿದ್ದವು. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Tv9 Digital Live: 10 ಸಾವಿರ ಇ-ಮೇಲ್​ಗೂ ಕಿವಿಗೊಡದ ವಿಟಿಯು; ಒಂದೇ ದಿನದ ಅಂತರದಲ್ಲಿ ಕಠಿಣ ವಿಷಯಗಳ ಪರೀಕ್ಷೆ ನಡೆಸಲು ಸಿದ್ಧತೆ

Tv9 Facebook Live | ನಮ್ಮ ಭವಿಷ್ಯದೊಂದಿಗೆ ಚೆಲ್ಲಾಟ ಬೇಡ; ಎಂಜಿನಿಯರಿಂಗ್​ ಪರೀಕ್ಷೆ ದಿನಾಂಕ ಬದಲಿಸಿ

Published On - 6:42 pm, Thu, 18 March 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?