AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ

ಜಿಮ್​, ಹೋಟೆಲ್​, ಬಾರ್​, ಸ್ಪಾ, ಸಿನಿಮಾ ಥಿಯೇಟರ್​​ಗಳಲ್ಲಿ ಶೇ. 50 ಜನರಿಗೆ ಮಾತ್ರ ಅವಕಾಶ. ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲೂ ಕೂಡ ಶೇ.50ರಷ್ಟು ಜನ ಮಾತ್ರ ಪಾಲ್ಗೊಳ್ಳಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಲಾದ ಮಾರ್ಗಸೂಚಿಯಲ್ಲಿ ಮಹಾ ಸರ್ಕಾರ ಆದೇಶ ನೀಡಿದೆ.

ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Dec 25, 2021 | 12:11 PM

ಮುಂಬೈ: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ (Omicron Variant)​ ಸೋಂಕಿತರ ಸಂಖ್ಯೆ ಏರುತ್ತಿದ್ದಂತೆ, ನಿಯಂತ್ರಣಕ್ಕಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದಲ್ಲಿ ನೋಡನೋಡುತ್ತಿದ್ದಂತೆ ಒಮಿಕ್ರಾನ್​ ಸೋಂಕಿತರ ಸಂಖ್ಯೆ 400 ದಾಟಿದ್ದು,  ದೆಹಲಿ ಮತ್ತು ಮುಂಬೈನಲ್ಲಿಯೇ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಂಡಿವೆ. ಇದೀಗ ಒಮಿಕ್ರಾನ್​ ತಡೆಗೆ ಮಹಾರಾಷ್ಟ್ರ ಸರ್ಕಾರ ಕೆಲವು ನಿಯಮಗಳನ್ನು ಜಾರಿಗೊಳಿಸಿದ್ದು, ಇನ್ನು ಮುಂದೆ ಸಂಜೆ 9ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ, 5 ಅಥವಾ ಅದಕ್ಕಿಂತ ಹೆಚ್ಚಿನ ಜನರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಂತಿಲ್ಲ. ಹೊಸ ವರ್ಷ ಆಚರಣೆಗೆ ಇನ್ನು ಒಂದು ವಾರಗಳಷ್ಟೆ ಬಾಕಿ ಇರುವಾಗ ಮಹಾರಾಷ್ಟ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇನ್ನು ಮುಂದೆ ಒಳಾಂಗಣ ಮದುವೆಗಳಲ್ಲಿ 100 ಮಂದಿ ಮಾತ್ರ ಪಾಲ್ಗೊಳ್ಳಬಹುದು. ಹೊರಾಂಗಣದಲ್ಲಿ ನಡೆಯುವ ಮದುವೆಯಲ್ಲಿ ಗರಿಷ್ಠ 250 ಜನರು ಮಾತ್ರ ಭಾಗವಹಿಸಬಹುದು.  

ಜಿಮ್​, ಹೋಟೆಲ್​, ಬಾರ್​, ಸ್ಪಾ, ಸಿನಿಮಾ ಥಿಯೇಟರ್​​ಗಳಲ್ಲಿ ಶೇ. 50 ಜನರಿಗೆ ಮಾತ್ರ ಅವಕಾಶ. ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲೂ ಕೂಡ ಶೇ.50ರಷ್ಟು ಜನ ಮಾತ್ರ ಪಾಲ್ಗೊಳ್ಳಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಲಾದ ಮಾರ್ಗಸೂಚಿಯಲ್ಲಿ ಮಹಾ ಸರ್ಕಾರ ಆದೇಶ ನೀಡಿದೆ. ಮುಂಬೈನಲ್ಲಿ ಕೊರೊನಾ ಸೋಂಕುನ ಸಂಖ್ಯೆ ಹೆಚ್ಚಳವಾಗಿದೆ. ನಿನ್ನೆ ಮಹಾರಾಷ್ಟ್ರದಲ್ಲಿ 1410 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 683 ಕೊವಿಡ್​ 19 ಪ್ರಕರಣಗಳು ಮುಂಬೈದಲ್ಲೇ ಪತ್ತೆಯಾಗಿವೆ. ಇದು ಅಕ್ಟೋಬರ್​ ತಿಂಗಳ ನಂತರ ಪತ್ತೆಯಾದ ಅತಿಹೆಚ್ಚಿನ ಸಂಖ್ಯೆ.  ಹಾಗೇ, ಮಹಾರಾಷ್ಟ್ರದಲ್ಲಿ ಒಟ್ಟು ಒಮಿಕ್ರಾನ್​ ಸೋಂಕಿತರ ಸಂಖ್ಯೆ ಶುಕ್ರವಾರಕ್ಕೆ 108 ತಲುಪಿದೆ. ಶುಕ್ರವಾರ ಒಂದೇ ದಿನ 20 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. 108 ಜನರಲ್ಲಿ 54 ಮಂದಿ ಈಗಾಗಲೇ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ಹಾಗೇ, 108 ಪ್ರಕರಣಗಳಲ್ಲಿ ಮುಂಬೈನಲ್ಲಿ 46 ಒಮಿಕ್ರಾನ್​ ಸೋಂಕಿತರಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿವೆ. ಹೀಗೆ ಕೊವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಬಿಗಿ ಕ್ರಮಗಳಿಗೆ ಮುಂದಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಡಿಸೆಂಬರ್ 26, 27ಕ್ಕೆ ಕರೆಂಟ್ ಇರಲ್ಲ

ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ