AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gati Shakti Express Cargo: ಭಾರತೀಯ ರೈಲ್ವೆ, ಅಂಚೆ ಇಲಾಖೆ ಸಹಯೋಗದಲ್ಲಿ ಗತಿ ಶಕ್ತಿ ಎಕ್ಸ್ಪ್ರೆಸ್ ಕಾರ್ಗೋ ಸೇವೆ ಆರಂಭ

ಫೆಬ್ರವರಿ 16ರಂದು ನಾಲ್ಕು ವಲಯಗಳಲ್ಲಿ ಕಾರ್ಗೋ ಸೇವೆಯನ್ನು ಪ್ರಾರಂಭಿಸಲಾಯಿತು. ಯೋಜನೆಯ ಮೊದಲ ಹಂತದಲ್ಲಿ ಈ ಸೇವೆಯು 15 ವಯಲಗಳನ್ನು ಒಳಗೊಂಡಿದೆ. ಈ ವಾರದ ಆರಂಭದಲ್ಲಿ ಭಾರತೀಯ ರೈಲ್ವೆ ಮತ್ತು ಭಾರತೀಯ ಅಂಚೆ ಘಟಕದ ಜಂಟಿ ಸಹಯೋಗದಲ್ಲಿ ಗತಿಶಕ್ತಿ ಎಕ್ಸ್ಪ್ರೆಸ್ ಕಾರ್ಗೋ ಸೇವೆಯನ್ನು ಪ್ರಾರಂಭಿಸಲಾಯಿತು.

Gati Shakti Express Cargo: ಭಾರತೀಯ ರೈಲ್ವೆ, ಅಂಚೆ ಇಲಾಖೆ ಸಹಯೋಗದಲ್ಲಿ ಗತಿ ಶಕ್ತಿ ಎಕ್ಸ್ಪ್ರೆಸ್ ಕಾರ್ಗೋ ಸೇವೆ ಆರಂಭ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 20, 2023 | 3:32 PM

Share

ಫೆಬ್ರವರಿ 16ರಂದು ನಾಲ್ಕು ವಲಯಗಳಲ್ಲಿ ಕಾರ್ಗೋ ಸೇವೆಯನ್ನು ಪ್ರಾರಂಭಿಸಲಾಯಿತು. ಯೋಜನೆಯ ಮೊದಲ ಹಂತದಲ್ಲಿ ಈ ಸೇವೆಯು 15 ವಯಲಗಳನ್ನು ಒಳಗೊಂಡಿದೆ. ಈ ವಾರದ ಆರಂಭದಲ್ಲಿ ಭಾರತೀಯ ರೈಲ್ವೆ ಮತ್ತು ಭಾರತೀಯ ಅಂಚೆ ಘಟಕದ ಜಂಟಿ ಸಹಯೋಗದಲ್ಲಿ ಗತಿಶಕ್ತಿ ಎಕ್ಸ್ಪ್ರೆಸ್ ಕಾರ್ಗೋ (Gati Shakti Express Cargo) ಸೇವೆಯನ್ನು ಪ್ರಾರಂಭಿಸಲಾಯಿತು. ಫೆಬ್ರವರಿ 16 ರಂದು ನಾಲ್ಕು ವಲಯಗಳಲ್ಲಿ ಏಕಕಾಲದಲ್ಲಿ ಪ್ರಾರಂಭಿಸಲಾದ ಈ ಸೇವೆಯು ಕಳೆದ ವರ್ಷದ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಮಾಡಿರುವ ಘೋಷಣೆಗಳಲ್ಲಿ ಒಂದಾಗಿದೆ. ಸಂಪೂರ್ಣ ಸೇವೆಗಳ ಪ್ರಾರಂಭವು ಮಾರ್ಚ್ 31ರಂದು ಸೂರತ್ ಮತ್ತು ವಾರಣಾಸಿಯ ನಡುವೆ ಪ್ರಾಯೋಗಿಕ ಸಾಪ್ತಾಹಿಕ ಸೇವೆಯನ್ನು ಆರಂಭಿಸಿದ ಬಳಿಕ ಇದರ ಸಂಪೂರ್ಣ ಸೇವೆ ಆರಂಭವಾಗಲಿದೆ.

ರೈಲು ಪೋಸ್ಟ್ ಗತಿ ಶಕ್ತಿ ಎಕ್ಸ್ಪ್ರೆಸ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕೆಲವು ಮಾಹಿತಿಗಳು ಇಲ್ಲಿವೆ:

ಪ್ರೆಸ್ ರಿಲೀಸ್‌ನಲ್ಲಿ, ರೈಲ್ವೆ ಸಚಿವಾಲಯವು ರೈಲು ಪೋಸ್ಟ್ ಗತಿ ಶಕ್ತಿ ಎಕ್ಸ್ಪ್ರೆಸ್ ಇದು ದೇಶದ ಸೇವಾ ವಲಯಕ್ಕೆ ತಡೆರಹಿತ ಲಾಜಿಸ್ಟಿಕ್ ಒದಗಿಸಲು ಭಾರತೀಯ ರೈಲ್ವೆ ಮತ್ತು ಭಾರತೀಯ ಅಂಚೆಯ ಸಹಯೋಗದ ಉಪಕ್ರಮವಾಗಿ ವಿವರಿಸಲಾಗಿದೆ. ದೆಹಲಿ-ಕೋಲ್ಕತ್ತಾ, ಬೆಂಗಳೂರು-ಗುವಾಹಟಿ, ಸೂರತ್-ಮುಜಾಫರ್‌ಪುರ ಮತ್ತು ಹೈದರಬಾದ್-ಹಜರ್ ನಿಜಾಮುದ್ದೀನ್ ಈ ವಲಯಗಳಲ್ಲಿ ಸೇವಾ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ.

ಭಾರತೀಯ ಅಂಚೆಯು ಗ್ರಾಹಕರ ಮನೆ ಬಾಗಿಲಿನಿಂದ ಭಾರದ ಪಾರ್ಸೆಲ್‌ಗಳ ರವಾನೆಯನ್ನು ತೆಗೆದುಕೊಂಡು ಅದನ್ನು ರೈಲು ನಿಲ್ದಾಣಕ್ಕೆ ಕೊಂಡೊಯ್ಯುತ್ತದೆ. ಮತ್ತು ಆ ಪಾರ್ಸೆಲ್‌ನ್ನು ರೈಲಿನ ಮೂಲಕ ವಿಳಾಸದಾದರರ ಮನೆ ಬಾಗಿಲಿಗೆ ತಲುಪಿಸುತ್ತದೆ. ಪಾರ್ಸೆಲ್ ಲೋಡ್ ತೂಕದ ಮೇಲೆ ಯಾವುದೇ ಮಿತಿಯಿಲ್ಲ, ಸುರಕ್ಷತೆಯ ದೃಷ್ಟಿಯಿಂದ ಇವುಗಳನ್ನು ಪೆಟ್ಟಿಗೆಯಿಂದ ಮುಚ್ಚಲಾಗುತ್ತದೆ.

ಇದನ್ನೂ ಓದಿ:ಭಾರತೀಯ ರೈಲ್ವೆ ಟಿಕೆಟ್ ದರದಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ಏಕಿಲ್ಲ? ಸಚಿವ ಅಶ್ವಿನಿ ವೃಷ್ಣವ್ ಹೇಳಿದ್ದೇನು?

ಈ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ರೈಲುಗಳು ಮೂಲ ನಿಲ್ದಾಣದಿಂದ ನಿಗದಿತ ನಿರ್ಗಮನವನ್ನು ಹೊಂದಿರುತ್ತದೆ ಮತ್ತು ಮಧ್ಯಂತರ ಮತ್ತು ಗಮ್ಯಸ್ಥಾನದ ನಿಲ್ದಾಣಗಳಿಗೆ ನಿಗದಿತ ಪ್ರವೇಶವನ್ನು ಹೊಂದಿರುತ್ತದೆ. ಈ ಪಾರ್ಸೆಲ್ ಸೌಲಭ್ಯವನ್ನು ಪಡೆಯುವ ಗ್ರಾಹಕರಿಗೆ ಅಂಚೆ ಇಲಾಖೆಯಿಂದ ಮೂರನೇ ವ್ಯಕ್ತಿಯ ವಿಮೆಯನ್ನು ನೀಡಲಾಗುತ್ತದೆ. ಇದನ್ನು ಸರಕು ಮೌಲ್ಯದ 0.03%ನಲ್ಲಿ ನೀಡಲಾಗುತ್ತದೆ.

ಸರಕುಗಳ ರವಾನೆಯ ಪ್ರಯಾಣದುದ್ದಕ್ಕೂ, ಭಾರತೀಯ ಅಂಚೆ ಮಾತ್ರ ಗ್ರಾಹಕರಿಗೆ ಏಕೈಕ ಸಂಪಕ್ ಮಾರ್ಗವಾಗಿರುತ್ತದೆ. ಗ್ರಾಹಕರು ತಮ್ಮ ಸರಕುಗಳನ್ನು ಕಾಯ್ದಿರಿಸಲು, ಮತ್ತು ಪಾರ್ಸೆಲ್‌ಗಳ ಸ್ಥಿತಿಯನ್ನು ಟ್ಯ್ರಾಯಕ್ ಮಾಡಲು ಹಾಗೂ ಇತರ ಸೇವೆಗಳನ್ನು ಒದಗಿಸಲು ಮೊಬೈಲ್ ಅಪ್ಲಿಕೇಶನ್‌ನನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ