AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!

ಭಾರತದ ಅತ್ಯಂತ ಶ್ರೀಮಂತರಲ್ಲೊಬ್ಬರಾಗಿರುವ ಗೌತಮ್ ಅದಾನಿಯ ಕಿರಿಯ ಮಗ ಜೀತ್ ಅದಾನಿ ವಜ್ರದ ವ್ಯಾಪಾರಿಯ ಮಗಳು ದಿವಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರ ವಿವಾಹ ಫೆಬ್ರವರಿ 7ರಂದು ನಡೆಯಲಿದೆ. ಅಂಬಾನಿಯಂತೆ ಅದಾನಿ ಭಾರೀ ಅದ್ದೂರಿಯಾಗಿ ಈ ಮದುವೆ ಮಾಡದೆ ಸರಳವಾಗಿ ಮಾಡಲು ನಿರ್ಧರಿಸಿದ್ದಾರೆ. ಈ ಮದುವೆಗೆ ಯಾವುದೇ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ.

ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!
Jeet Adani
ಸುಷ್ಮಾ ಚಕ್ರೆ
|

Updated on: Jan 21, 2025 | 10:54 PM

Share

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ಇಂದು ಪ್ರಯಾಗ್‌ರಾಜ್‌ನಲ್ಲಿ ತಮ್ಮ ಪತ್ನಿ ಪ್ರೀತಿ ಅದಾನಿ ಮತ್ತು ಹಿರಿಯ ಪುತ್ರ ಕರಣ್ ಅದಾನಿ ಅವರೊಂದಿಗೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಗೌತಮ್ ಅದಾನಿ ಅವರು ತಮ್ಮ ಕಿರಿಯ ಪುತ್ರ ಜೀತ್ ಅದಾನಿ ಫೆಬ್ರವರಿ 7ರಂದು ವಿವಾಹವಾಗಲಿದ್ದಾರೆ ಎಂದು ಘೋಷಿಸಿದ್ದಾರೆ.

“ನನ್ನ ಮಗ ಜೀತ್ ಮದುವೆ ಫೆಬ್ರವರಿ 7ರಂದು ನಡೆಯಲಿದೆ. ನಮ್ಮ ಆಚರಣೆಗಳು ಸಾಮಾನ್ಯ ಜನರಂತೆಯೇ ಇರುತ್ತವೆ. ಆತನ ವಿವಾಹವು ತುಂಬಾ ಸರಳ ಮತ್ತು ಸಂಪೂರ್ಣವಾಗಿ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ” ಎಂದು ಗೌತಮ್ ಅದಾನಿ ತಮ್ಮ ಮಗನ ವಿವಾಹದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ಮಹಾ ಕುಂಭದಲ್ಲಿ ಅದಾನಿ ಗ್ರೂಪ್ ಮತ್ತು ಇಸ್ಕಾನ್​ನಿಂದ ಮಹಾಪ್ರಸಾದ ಸೇವೆ ಆರಂಭ

ಈ ಮೂಲಕ ಬಿಲಿಯನೇರ್ ಗೌತಮ್ ಅದಾನಿಯವರ ಕಿರಿಯ ಪುತ್ರ ಜೀತ್ ಮುಂದಿನ ತಿಂಗಳು ಯಾವುದೇ ಆಡಂಬರ ಮತ್ತು ಪ್ರದರ್ಶನ ಮತ್ತು ಸೆಲೆಬ್ರಿಟಿ ತಾರೆಯರಿಲ್ಲದೆ ಸರಳ ಮತ್ತು ಸಾಂಪ್ರದಾಯಿಕ ಸಮಾರಂಭದಲ್ಲಿ ವಿವಾಹವಾಗಲಿದ್ದಾರೆ. ಅದಾನಿ ಮಗನ ಮದುವೆ ಕೂಡ ಅವರ ಪ್ರತಿಸ್ಪರ್ಧಿ ಬಿಲಿಯನೇರ್ ಆಗಿರುವ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅವರ ವಿವಾಹದಂತೆ ಮತ್ತೊಂದು ಅದ್ದೂರಿ ವಿವಾಹವಾಗಿರಲಿದೆ ಎಂದು ಊಹಿಸಲಾಗಿತ್ತು.

ನಿಮ್ಮ ಮಗನ ವಿವಾಹವು “ಸೆಲೆಬ್ರಿಟಿಗಳ ಮಹಾ ಕುಂಭ”ವಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಲಿಯನೇರ್ ಅದಾನಿ, “ಖಂಡಿತವಾಗಿಯೂ ಇಲ್ಲ!” ಎಂದು ಹೇಳಿದ್ದಾರೆ. 28 ವರ್ಷದ ಜೀತ್ ಮಾರ್ಚ್ 2023ರಲ್ಲಿ ಅಹಮದಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಜ್ರದ ವ್ಯಾಪಾರಿಯ ಮಗಳು ದಿವಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರಿಬ್ಬರ ವಿವಾಹ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ