AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!

ಭಾರತದ ಅತ್ಯಂತ ಶ್ರೀಮಂತರಲ್ಲೊಬ್ಬರಾಗಿರುವ ಗೌತಮ್ ಅದಾನಿಯ ಕಿರಿಯ ಮಗ ಜೀತ್ ಅದಾನಿ ವಜ್ರದ ವ್ಯಾಪಾರಿಯ ಮಗಳು ದಿವಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರ ವಿವಾಹ ಫೆಬ್ರವರಿ 7ರಂದು ನಡೆಯಲಿದೆ. ಅಂಬಾನಿಯಂತೆ ಅದಾನಿ ಭಾರೀ ಅದ್ದೂರಿಯಾಗಿ ಈ ಮದುವೆ ಮಾಡದೆ ಸರಳವಾಗಿ ಮಾಡಲು ನಿರ್ಧರಿಸಿದ್ದಾರೆ. ಈ ಮದುವೆಗೆ ಯಾವುದೇ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ.

ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!
Jeet Adani
ಸುಷ್ಮಾ ಚಕ್ರೆ
|

Updated on: Jan 21, 2025 | 10:54 PM

Share

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ಇಂದು ಪ್ರಯಾಗ್‌ರಾಜ್‌ನಲ್ಲಿ ತಮ್ಮ ಪತ್ನಿ ಪ್ರೀತಿ ಅದಾನಿ ಮತ್ತು ಹಿರಿಯ ಪುತ್ರ ಕರಣ್ ಅದಾನಿ ಅವರೊಂದಿಗೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಗೌತಮ್ ಅದಾನಿ ಅವರು ತಮ್ಮ ಕಿರಿಯ ಪುತ್ರ ಜೀತ್ ಅದಾನಿ ಫೆಬ್ರವರಿ 7ರಂದು ವಿವಾಹವಾಗಲಿದ್ದಾರೆ ಎಂದು ಘೋಷಿಸಿದ್ದಾರೆ.

“ನನ್ನ ಮಗ ಜೀತ್ ಮದುವೆ ಫೆಬ್ರವರಿ 7ರಂದು ನಡೆಯಲಿದೆ. ನಮ್ಮ ಆಚರಣೆಗಳು ಸಾಮಾನ್ಯ ಜನರಂತೆಯೇ ಇರುತ್ತವೆ. ಆತನ ವಿವಾಹವು ತುಂಬಾ ಸರಳ ಮತ್ತು ಸಂಪೂರ್ಣವಾಗಿ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ” ಎಂದು ಗೌತಮ್ ಅದಾನಿ ತಮ್ಮ ಮಗನ ವಿವಾಹದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ಮಹಾ ಕುಂಭದಲ್ಲಿ ಅದಾನಿ ಗ್ರೂಪ್ ಮತ್ತು ಇಸ್ಕಾನ್​ನಿಂದ ಮಹಾಪ್ರಸಾದ ಸೇವೆ ಆರಂಭ

ಈ ಮೂಲಕ ಬಿಲಿಯನೇರ್ ಗೌತಮ್ ಅದಾನಿಯವರ ಕಿರಿಯ ಪುತ್ರ ಜೀತ್ ಮುಂದಿನ ತಿಂಗಳು ಯಾವುದೇ ಆಡಂಬರ ಮತ್ತು ಪ್ರದರ್ಶನ ಮತ್ತು ಸೆಲೆಬ್ರಿಟಿ ತಾರೆಯರಿಲ್ಲದೆ ಸರಳ ಮತ್ತು ಸಾಂಪ್ರದಾಯಿಕ ಸಮಾರಂಭದಲ್ಲಿ ವಿವಾಹವಾಗಲಿದ್ದಾರೆ. ಅದಾನಿ ಮಗನ ಮದುವೆ ಕೂಡ ಅವರ ಪ್ರತಿಸ್ಪರ್ಧಿ ಬಿಲಿಯನೇರ್ ಆಗಿರುವ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅವರ ವಿವಾಹದಂತೆ ಮತ್ತೊಂದು ಅದ್ದೂರಿ ವಿವಾಹವಾಗಿರಲಿದೆ ಎಂದು ಊಹಿಸಲಾಗಿತ್ತು.

ನಿಮ್ಮ ಮಗನ ವಿವಾಹವು “ಸೆಲೆಬ್ರಿಟಿಗಳ ಮಹಾ ಕುಂಭ”ವಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಲಿಯನೇರ್ ಅದಾನಿ, “ಖಂಡಿತವಾಗಿಯೂ ಇಲ್ಲ!” ಎಂದು ಹೇಳಿದ್ದಾರೆ. 28 ವರ್ಷದ ಜೀತ್ ಮಾರ್ಚ್ 2023ರಲ್ಲಿ ಅಹಮದಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಜ್ರದ ವ್ಯಾಪಾರಿಯ ಮಗಳು ದಿವಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರಿಬ್ಬರ ವಿವಾಹ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!