6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ. ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. […]

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ
ಸಾಧು ಶ್ರೀನಾಥ್​

Updated on: Nov 30, 2019 | 7:41 AM

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ.

ಲಂಕಾಗೆ ₹3 ಸಾವಿರ ಕೋಟಿ ಘೋಷಣೆ:
ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ನಡೆಸಿ ಈ ಹಣ ಘೋಷಿಸಿದ್ದಾರೆ.

ಫಾಸ್ಟ್‌ಟ್ಯಾಗ್ ಅಳವಡಿಕೆಗೆ ಡಿ.15 ತನಕ ಟೈಮ್‌:
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಫಾಸ್ಟ್ ಟ್ಯಾಗ್‌ ಕಡ್ಡಾಯಗೊಳಿಸಿ ವಿಧಿಸಿದ್ದ ಗಡುವುನ್ನ ಡಿಸೆಂಬರ್ 15ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಫಾಸ್ಟ್‌ ಟ್ಯಾಗ್ ಅಳವಡಿಸುವಂತೆ ಡಿಸೆಂಬರ್‌ 1ರ ತನಕ ಗಡುವು ನೀಡಲಾಗಿತ್ತು. ಇದೀಗ ಈ ಗಡುವುನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಪರಿಸರ ಸ್ನೇಹಿ ರೈಲ್ವೆ ನಿಲ್ದಾಣ:
ಪರಿಸರ ಸ್ನೇಹಿ ವಸ್ತುಗಳಲ್ಲಿ ಟೀ ಮತ್ತು ಆಹಾರ ಪದಾರ್ಥಗಳು ವಿತರಿಸಲು 25ಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿನ ಎಲ್ಲಾ ನಿಲ್ದಾಣಗಳು ಉತ್ತರ ಭಾರತಕ್ಕೆ ಸೇರಿವೆ. ದಕ್ಷಿಣ ಭಾರತದ ನಿಲ್ದಾಣಗಳು ಯಾವುದೂ ಇಲ್ಲ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us