AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ  ರಾಹುಲ್ ಗಾಂಧಿ ವಾಗ್ದಾಳಿ

Rahul Gandhi: ಜಿಡಿಪಿ ಏರುತ್ತಿದೆ ಎಂದು ಮೋದಿ ಜೀ ಹೇಳುತ್ತಲೇ ಇದ್ದಾರೆ, ಜಿಡಿಪಿ ಮೇಲ್ಮುಖವಾಗಿದೆ ಎಂದು ಹಣಕಾಸು ಸಚಿವರು ಹೇಳುತ್ತಾರೆ. ಜಿಡಿಪಿ- ಇದರ ಅರ್ಥವೇನೆಂದು ನನಗೆ ಆಗ ಅರ್ಥವಾಯಿತು. ಇದರ ಅರ್ಥ 'ಗ್ಯಾಸ್-ಡೀಸೆಲ್-ಪೆಟ್ರೋಲ್'. ಅವರಿಗೆ ಈ ಗೊಂದಲವಿದೆ.

ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ  ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
TV9 Web
| Edited By: |

Updated on: Sep 01, 2021 | 7:59 PM

Share

ದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಿಡಿಪಿಯ ಹೊಸ ಪರಿಕಲ್ಪನೆ ಇದೆ. ಅಲ್ಲಿ ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ. “ಜಿಡಿಪಿ ಏರುತ್ತಿದೆ ಎಂದು ಮೋದಿ ಜೀ ಹೇಳುತ್ತಲೇ ಇದ್ದಾರೆ, ಜಿಡಿಪಿ ಮೇಲ್ಮುಖವಾಗಿದೆ ಎಂದು ಹಣಕಾಸು ಸಚಿವರು ಹೇಳುತ್ತಾರೆ. ಜಿಡಿಪಿ- ಇದರ ಅರ್ಥವೇನೆಂದು ನನಗೆ ಈಗ ಅರ್ಥವಾಯಿತು. ಇದರ ಅರ್ಥ ‘ಗ್ಯಾಸ್-ಡೀಸೆಲ್-ಪೆಟ್ರೋಲ್’. ಅವರಿಗೆ ಈ ಗೊಂದಲವಿದೆ “ಎಂದು ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ವ್ಯಂಗ್ಯವಾಡಿದರು.

2014 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರವನ್ನು ತೊರೆದಾಗ, ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಪ್ರತಿ ಸಿಲಿಂಡರ್‌ಗೆ 410 ರೂ ಆಗಿತ್ತು ಎಂದಿದ್ದಾರೆ ರಾಹುಲ್.

ರೈತರು, ಸಂಬಳ ಪಡೆಯುವ ವರ್ಗ ಮತ್ತು ಕಾರ್ಮಿಕರಿಗೆ ನೋಟು ರದ್ದತಿ ಮಾಡಲಾಗುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿಯ ಕೆಲವು ಕೈಗಾರಿಕೋದ್ಯಮಿ ಸ್ನೇಹಿತರಿಗೆ ಹಣಗಳಿಸುವಂತೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

“ಒಂದೆಡೆ ನೋಟು ರದ್ದತಿ ಮತ್ತು ಇನ್ನೊಂದೆಡೆ ಹಣಗಳಿಕೆ ಇದೆ. ಯಾರ ನೋಟು ರದ್ದತಿ ನಡೆಯುತ್ತಿದೆ – ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಅನೌಪಚಾರಿಕ ವಲಯ, MSME ಗಳು, ಗುತ್ತಿಗೆ ಕಾರ್ಮಿಕರು, ಸಂಬಳದ ವರ್ಗ ಮತ್ತು ಪ್ರಾಮಾಣಿಕ ಕೈಗಾರಿಕೋದ್ಯಮಿಗಳು. ಯಾರ ಹಣಗಳಿಕೆ ನಡೆಯುತ್ತಿದೆ-ಪ್ರಧಾನಿ ನರೇಂದ್ರ ಮೋದಿಯವರ ನಾಲ್ಕೈದು ಸ್ನೇಹಿತರದ್ದು ”ಅವರು ಹೇಳಿದರು.

ಹಿಂದಿನ ದಿನ ಹಿಂದಿಯಲ್ಲಿ ಟ್ವೀಟ್ ಮಾಡಿದ್ದ ರಾಹುಲ್ India against BJP loot ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ, “ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗಲು ಒತ್ತಾಯಿಸುವವನು ಸ್ವತಃ ಸ್ನೇಹಿತರ ನೆರಳಿನಲ್ಲಿ ಮಲಗುತ್ತಾನೆ. ಆದರೆ ದೇಶವು ಅನ್ಯಾಯದ ವಿರುದ್ಧ ಒಂದಾಗುತ್ತಿದೆ” ಎಂದಿದ್ದಾರೆ. ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು ಎಲ್​​ಪಿಜಿ ಬೆಲೆ ಏರಿಕೆಯ ಮೇಲೆ ಸರ್ಕಾರದ ಮೇಲೆ ದಾಳಿ ಮಾಡುತ್ತಿದ್ದು ಕೇಂದ್ರ ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದೆ.

ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‌ಪಿಜಿಗೆ ಈಗ ತೈಲ ಕಂಪನಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್‌ಗೆ 884.50 ರೂ. ಆಗಿದೆ. ಎರಡು ತಿಂಗಳಲ್ಲಿ ಇದು ಮೂರನೇ ಬಾರಿದರ ಹೆಚ್ಚಾಗಿರುವುದು, ಜುಲೈ 1 ರಂದು ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‌ಪಿಜಿ ದರಗಳನ್ನು ಪ್ರತಿ ಸಿಲಿಂಡರ್‌ಗೆ 25.50 ರೂ. ಏರಿಕೆ ಮಾಡಲಾಗಿತ್ತು.ಸಬ್ಸಿಡಿ ಎಲ್‌ಪಿಜಿ ಬೆಲೆಯಲ್ಲಿ ಇತ್ತೀಚಿನ ಹೆಚ್ಚಳವು ಜನವರಿ 1 ರಿಂದ ಸಿಲಿಂಡರ್‌ಗೆ 190 ರೂ. ಏರಿಕೆಯಾಗಿದೆ.

ಇದನ್ನೂ ಓದಿ: LPG Cylinder Price: ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 25 ರೂಪಾಯಿ ಏರಿಕೆ; ಗ್ಯಾಸ್​ ಬಲುಭಾರ

(GDP means rising prices of Gas, Diesel, Petrol Rahul Gandhi took a swipe at the central government )

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್