AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ವಾರಸುದಾರರಿಲ್ಲದ 8,000 ಜಿಲೆಟಿನ್ ಕಡ್ಡಿಗಳು ಪತ್ತೆ, ಬೆಚ್ಚಿ ಬಿದ್ದಿರುವ ಜನರಿಗೆ ತನಿಖೆಗೆ ಆಗ್ರಹ

ಜಿಲೆಟಿನ್ ಕಡ್ಡಿಗಳು ಗಣಿಯ ಆವರಣದಿಂದ ಹೊರಗೆ ಹೇಗೆ ಬಂದವು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.

ಕೇರಳದಲ್ಲಿ ವಾರಸುದಾರರಿಲ್ಲದ 8,000 ಜಿಲೆಟಿನ್ ಕಡ್ಡಿಗಳು ಪತ್ತೆ, ಬೆಚ್ಚಿ ಬಿದ್ದಿರುವ ಜನರಿಗೆ ತನಿಖೆಗೆ ಆಗ್ರಹ
ಕೇರಳದ ಶೋರನೂರು ಸಮೀಪ ಪತ್ತೆಯಾದ ಜಿಲೆಟಿನ್ ಕಡ್ಡಿಗಳ ಪೆಟ್ಟಿಗೆ
TV9 Web
| Edited By: |

Updated on:Aug 04, 2022 | 10:14 AM

Share

ಕೊಚ್ಚಿ: ಕೇರಳದ ಶೊರನೂರು ಜಿಲ್ಲೆಯ ವದರಕುರಿಸಿ ಎಂಬಲ್ಲಿ ಕಲ್ಲುಗಣಿಯ ಹತ್ತಿರದಲ್ಲಿ ಭಾರೀ ಪ್ರಮಾಣದ ಜಿಲೆಟಿನ್ ಸ್ಫೋಟಕಗಳು (Gelatine Sticks) ಪತ್ತೆಯಾಗಿವೆ. 40 ಪೆಟ್ಟಿಗೆಗಳಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಕಾಣಿಸಿಕೊಂಡಿವೆ. ಇವು ಗಣಿಯ ಆವರಣದಿಂದ ಹೊರಗೆ ಹೇಗೆ ಬಂದವು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಪ್ರತಿ ಪೆಟ್ಟಿಗೆಯಲ್ಲಿ ಸುಮಾರು ಜಿಲೆಟಿನ್ ಕಡ್ಡಿಗಳಿವೆ. ಜಿಲೆಟಿನ್ ಕಡ್ಡಿಗಳನ್ನು ಗಣಿಯನ್ನು ಕಲ್ಲು ಒಡೆಯಲು ಬಳಸಲಾಗುತ್ತದೆ.

ಕಲ್ಲು ಕ್ವಾರಿಯ ಮಾರ್ಗದಲ್ಲಿ ಈ ಪೆಟ್ಟಿಗೆಗಳು ಅನಾಥವಾಗಿ ಬಿದ್ದಿದ್ದವು. ಸ್ಥಳೀಯರು ಪೆಟ್ಟಿಗಳನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಜಿಲಿಟಿನ್ ಕಡ್ಡಿಗಳು ಹೀಗೆ ಕ್ವಾರಿಯಿಂದ ಹೊರಗೆ ಬಂದಿರುವುದರ ಬಗ್ಗೆ ಆತಂಕ ವ್ಯಕ್ತವಾಗಿದೆ. ಶೊರನೂರ್​ನಿಂದ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳಿದ್ದ ತಂಡವೊಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪತ್ತಂಬಿ ತಹಶೀಲ್ದಾರ್ ಸಹ ಸ್ಥಳಕ್ಕೆ ಭೇಟಿ ಬಂದಿದ್ದು, ಸ್ಫೋಟಕಗಳು ಹೇಗೆ ಸಾರ್ವಜನಿಕ ಸ್ಥಳಕ್ಕೆ ಬಂದು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಯತ್ನಿಸುತ್ತಿದ್ದಾರೆ.

ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ಸ್ಫೋಟಕಗಳನ್ನು ಹೀಗೆ ರಸ್ತೆಯ ಮೇಲೆ ಬಿಟ್ಟು ಹೋದವರ ಬಗ್ಗೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಬಲ ಸ್ಫೋಟಕ

ಗಣಿಗಳಲ್ಲಿ ಬಂಡೆ ಸೀಳಲು ಬಳಸುವ ಜೆಲಿಟಿನ್ ಕಡ್ಡಿಗಳು ಪ್ರಬಲ ಸ್ಫೋಟಕಗಳಾಗಿವೆ. ಕರ್ನಾಟಕದಲ್ಲಿ 2021ರ ಫೆಬ್ರುವರಿಯಲ್ಲಿ ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಿಸಿ 11 ಮಂದಿ ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 10:13 am, Thu, 4 August 22

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್