AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ
ಬಿಪಿನ್​ ರಾವತ್​
TV9 Web
| Edited By: |

Updated on:Dec 08, 2021 | 6:32 PM

Share

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ.  ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿ ಇದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ. ಟ್ವೀಟ್ ಮಾಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11  ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ. 

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಂದರೆ ದೆಹಲಿಯಿಂದ ಕೊಯಂಬತ್ತೂರಿನ ಸೂಲೂರ್​ಗೆ ಬಂದು, ಅಲ್ಲಿಂದ ಮಧ್ಯಾಹ್ನ 12.20ಕ್ಕೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಚಾಪರ್ ಕೂನೂರು ಬಳಿ ಪತನವಾಗಿತ್ತು. ಇದರಲ್ಲಿದ್ದ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬಿಪಿನ್​ ರಾವತ್ ಪತ್ನಿ ಮೃತಪಟ್ಟಿದ್ದು ಆಗಲೇ ಅಧಿಕೃತವಾಗಿತ್ತು. ಆದರೆ ಬಿಪಿನ್​ ರಾವತ್ ಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ವಾಯುಸೇನೆ ಅವರ ಸಾವನ್ನು ದೃಢಪಡಿಸಿದೆ. ಬಿಪಿನ್​ ರಾವತ್​ ಮೃತದೇಹವನ್ನು ನಾಳೆ ದೆಹಲಿಗೆ ತರಲಾಗುವುದು ಎಂದು ಹೇಳಲಾಗಿದೆ.

ಯಾರು ಈ ಬಿಪಿನ್ ರಾವತ್​? ಬಿಪಿನ್ ರಾವತ್​ ಪೂರ್ತಿ ಹೆಸರು ಬಿಪಿನ್​ ಲಕ್ಷ್ಮಣ್​ ಸಿಂಗ್​ ರಾವತ್​. ಇವರಿಗೆ 63 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರಾಖಂಡ್​​ನವಾರಗಿದ್ದು, 2019ರಲ್ಲಿ ಈ ಸಿಡಿಎಸ್​ ಹುದ್ದೆಗೆ ಏರಿದ್ದರು. 2015ರಲ್ಲಿ ನಾಗಾಲ್ಯಾಂಡ್​ ಬಳಿ ನಡೆದಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬಿಪಿನ್ ರಾವತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಇಂದು ಬಿಪಿನ್​ ರಾವತ್ ಸಾವಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: CDS Bipin Rawat ಸಿಡಿಎಸ್ ಬಿಪಿನ್ ರಾವತ್ ವೃತ್ತಿಜೀವನ: ಸರ್ಜಿಕಲ್ ಸ್ಟ್ರೈಕ್ ಕಾರ್ಯಗತಗೊಳಿಸಿದ್ದ ಗುಡ್ಡಗಾಡು ಸಂಘರ್ಷ ಪರಿಣಿತ

Published On - 6:09 pm, Wed, 8 December 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್