AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ
ಬಿಪಿನ್​ ರಾವತ್​
TV9 Web
| Edited By: |

Updated on:Dec 08, 2021 | 6:32 PM

Share

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ.  ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿ ಇದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ. ಟ್ವೀಟ್ ಮಾಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11  ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ. 

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಂದರೆ ದೆಹಲಿಯಿಂದ ಕೊಯಂಬತ್ತೂರಿನ ಸೂಲೂರ್​ಗೆ ಬಂದು, ಅಲ್ಲಿಂದ ಮಧ್ಯಾಹ್ನ 12.20ಕ್ಕೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಚಾಪರ್ ಕೂನೂರು ಬಳಿ ಪತನವಾಗಿತ್ತು. ಇದರಲ್ಲಿದ್ದ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬಿಪಿನ್​ ರಾವತ್ ಪತ್ನಿ ಮೃತಪಟ್ಟಿದ್ದು ಆಗಲೇ ಅಧಿಕೃತವಾಗಿತ್ತು. ಆದರೆ ಬಿಪಿನ್​ ರಾವತ್ ಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ವಾಯುಸೇನೆ ಅವರ ಸಾವನ್ನು ದೃಢಪಡಿಸಿದೆ. ಬಿಪಿನ್​ ರಾವತ್​ ಮೃತದೇಹವನ್ನು ನಾಳೆ ದೆಹಲಿಗೆ ತರಲಾಗುವುದು ಎಂದು ಹೇಳಲಾಗಿದೆ.

ಯಾರು ಈ ಬಿಪಿನ್ ರಾವತ್​? ಬಿಪಿನ್ ರಾವತ್​ ಪೂರ್ತಿ ಹೆಸರು ಬಿಪಿನ್​ ಲಕ್ಷ್ಮಣ್​ ಸಿಂಗ್​ ರಾವತ್​. ಇವರಿಗೆ 63 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರಾಖಂಡ್​​ನವಾರಗಿದ್ದು, 2019ರಲ್ಲಿ ಈ ಸಿಡಿಎಸ್​ ಹುದ್ದೆಗೆ ಏರಿದ್ದರು. 2015ರಲ್ಲಿ ನಾಗಾಲ್ಯಾಂಡ್​ ಬಳಿ ನಡೆದಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬಿಪಿನ್ ರಾವತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಇಂದು ಬಿಪಿನ್​ ರಾವತ್ ಸಾವಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: CDS Bipin Rawat ಸಿಡಿಎಸ್ ಬಿಪಿನ್ ರಾವತ್ ವೃತ್ತಿಜೀವನ: ಸರ್ಜಿಕಲ್ ಸ್ಟ್ರೈಕ್ ಕಾರ್ಯಗತಗೊಳಿಸಿದ್ದ ಗುಡ್ಡಗಾಡು ಸಂಘರ್ಷ ಪರಿಣಿತ

Published On - 6:09 pm, Wed, 8 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ