AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ
ಬಿಪಿನ್​ ರಾವತ್​
TV9 Web
| Updated By: Lakshmi Hegde|

Updated on:Dec 08, 2021 | 6:32 PM

Share

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ.  ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿ ಇದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ. ಟ್ವೀಟ್ ಮಾಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11  ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ. 

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಂದರೆ ದೆಹಲಿಯಿಂದ ಕೊಯಂಬತ್ತೂರಿನ ಸೂಲೂರ್​ಗೆ ಬಂದು, ಅಲ್ಲಿಂದ ಮಧ್ಯಾಹ್ನ 12.20ಕ್ಕೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಚಾಪರ್ ಕೂನೂರು ಬಳಿ ಪತನವಾಗಿತ್ತು. ಇದರಲ್ಲಿದ್ದ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬಿಪಿನ್​ ರಾವತ್ ಪತ್ನಿ ಮೃತಪಟ್ಟಿದ್ದು ಆಗಲೇ ಅಧಿಕೃತವಾಗಿತ್ತು. ಆದರೆ ಬಿಪಿನ್​ ರಾವತ್ ಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ವಾಯುಸೇನೆ ಅವರ ಸಾವನ್ನು ದೃಢಪಡಿಸಿದೆ. ಬಿಪಿನ್​ ರಾವತ್​ ಮೃತದೇಹವನ್ನು ನಾಳೆ ದೆಹಲಿಗೆ ತರಲಾಗುವುದು ಎಂದು ಹೇಳಲಾಗಿದೆ.

ಯಾರು ಈ ಬಿಪಿನ್ ರಾವತ್​? ಬಿಪಿನ್ ರಾವತ್​ ಪೂರ್ತಿ ಹೆಸರು ಬಿಪಿನ್​ ಲಕ್ಷ್ಮಣ್​ ಸಿಂಗ್​ ರಾವತ್​. ಇವರಿಗೆ 63 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರಾಖಂಡ್​​ನವಾರಗಿದ್ದು, 2019ರಲ್ಲಿ ಈ ಸಿಡಿಎಸ್​ ಹುದ್ದೆಗೆ ಏರಿದ್ದರು. 2015ರಲ್ಲಿ ನಾಗಾಲ್ಯಾಂಡ್​ ಬಳಿ ನಡೆದಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬಿಪಿನ್ ರಾವತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಇಂದು ಬಿಪಿನ್​ ರಾವತ್ ಸಾವಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: CDS Bipin Rawat ಸಿಡಿಎಸ್ ಬಿಪಿನ್ ರಾವತ್ ವೃತ್ತಿಜೀವನ: ಸರ್ಜಿಕಲ್ ಸ್ಟ್ರೈಕ್ ಕಾರ್ಯಗತಗೊಳಿಸಿದ್ದ ಗುಡ್ಡಗಾಡು ಸಂಘರ್ಷ ಪರಿಣಿತ

Published On - 6:09 pm, Wed, 8 December 21

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ