AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಡ ಎದುರಾದಾಗ ಪೈಲಟ್​ ತೆಗೆದುಕೊಂಡ ತಪ್ಪು ನಿರ್ಧಾರವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ; ಅಂತಿಮ ವರದಿ ಬಹಿರಂಗ

Army Chopper Crash: ಅಂದು ಸಿಡಿಎಸ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳು ಪ್ರಯಾಣ ಮಾಡುತ್ತಿದ್ದ ಎಂಐ-17ವಿ5 ವಿಮಾನ ರೈಲ್ವೆ ಹಳಿಯೊಂದರ ಮೇಲೆ ಅದೇ ಮಾರ್ಗದಲ್ಲಿ ಹಾರಾಟ ನಡೆಸುತ್ತಿತ್ತು.

ಮೋಡ ಎದುರಾದಾಗ ಪೈಲಟ್​ ತೆಗೆದುಕೊಂಡ ತಪ್ಪು ನಿರ್ಧಾರವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ; ಅಂತಿಮ ವರದಿ ಬಹಿರಂಗ
ಹೆಲಿಕಾಪ್ಟರ್​ ಪತನದ ಚಿತ್ರ
TV9 Web
| Edited By: |

Updated on:Jan 15, 2022 | 2:28 PM

Share

2021ರ ಡಿಸೆಂಬರ್​ 8ರಂದು ತಮಿಳುನಾಡಿನ ಕೂನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್​ ಪತನಕ್ಕೆ ಪೈಲಟ್​ನ ಅಜಾಗರೂಕತೆಯೇ ಕಾರಣ ಎಂದು, ತನಿಖಾ ಸಮಿತಿಯ ಪ್ರಾಥಮಿಕ ಫಲಿತಾಂಶದಲ್ಲಿ ಉಲ್ಲೇಖವಾಗಿದೆ. ಅಂದು ನೀಲಗಿರಿ ಕಾಡುಗಳ ಬಳಿ ಹವಾಮಾನದಲ್ಲಿ ಒಮ್ಮೆಲೇ ಬದಲಾವಣೆ ಉಂಟಾಯಿತು. ಮೋಡ ಅಡ್ಡಬಂದಿದ್ದರಿಂದ ಪೈಲೆಟ್​​ಗೆ ದಿಗ್ಭ್ರಮೆಯಾಗಿದೆ.  ಅವರಿಗೆ ಮುಂದೆ ಏನು ಮಾಡಬೇಕು ಎಂದು ತಿಳಿಯದ ಕಾರಣ ಹೆಲಿಕಾಪ್ಟರ್​ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ. ಹೀಗಾಗಿ ಅದು ಕಲ್ಲುಬಂಡೆಗೆ ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಂಡ ವರದಿ ನೀಡಿದೆ.  ಅಪಘಾತದ ನಂತರ ಹೆಲಿಕಾಪ್ಟರ್​​ನಲ್ಲಿದ್ದ ಡಾಟಾ ರಿಕಾರ್ಡರ್ ಮತ್ತು ಕಾಕ್​ಪಿಟ್​ ವೈಸ್ ರಿಕಾರ್ಡರ್​​ಗಳನ್ನು ವಿಶ್ಲೇಷಿಸಿದ ನಂತರ, ಲಭ್ಯವಿರುವ ಸಾಕ್ಷಿಗಳನ್ನು ಪ್ರಶ್ನಿಸಿ, ಉತ್ತರ ಪಡೆದ ಬಳಿಕ ತನಿಖಾ ತಂಡ ಈ ವರದಿ ನೀಡಿದೆ. 

ಸದ್ಯ ತನಿಖೆ ಮುಕ್ತಾಯಗೊಂಡು ವರದಿ ಇನ್ನೇನು ಶೀಘ್ರದಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಕೈಸೇರಲಿದೆ. ಅಂದು ಸಿಡಿಎಸ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳು ಪ್ರಯಾಣ ಮಾಡುತ್ತಿದ್ದ ಎಂಐ-17ವಿ5 ವಿಮಾನ ರೈಲ್ವೆ ಹಳಿಯೊಂದರ ಮೇಲೆ ಅದೇ ಮಾರ್ಗದಲ್ಲಿ ಹಾರಾಟ ನಡೆಸುತ್ತಿತ್ತು. ಆದರೆ ಅದೇ ಮಾರ್ಗದಲ್ಲಿ ದೊಡ್ಡದಾದ ಮೋಡ ಅಡ್ಡಬಂದು ಹೆಲಿಕಾಪ್ಟರ್​ ಆ ಮೋಡದೊಳಗೆ ಸಿಕ್ಕಿತು. ಆ ಸಮಯದಲ್ಲಿ ಸೇನಾ ಹೆಲಿಕಾಪ್ಟರ್​ ಅತ್ಯಂತ ಕೆಳಗೆ ಹಾರುತ್ತಿದ್ದುದರಿಂದ ಭೂಪ್ರದೇಶ ಪೈಲೆಟ್​ ಗಮನದಲ್ಲಿ ಇತ್ತು. ಮೋಡದಿಂದ ಪಾರಾಗಲು ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಪ್ರಯತ್ನಿಸಿದಾಗ ಬಂಡೆಗೆ ಅಪ್ಪಳಿಸಿದೆ ಎಂದು ವರದಿಯಲ್ಲಿ ಸವಿಸ್ತಾರವಾಗಿ ಉಲ್ಲೇಖ ಮಾಡಲಾಗಿದೆ. ಹೆಲಿಕಾಪ್ಟರ್​​ನಲ್ಲಿ ಇದ್ದವರೆಲ್ಲ ಮಾಸ್ಟರ್​ ಗ್ರೀನ್​ ವರ್ಗದವರೇ ಆಗಿದ್ದರು. ಅಂದರೆ ತಮ್ಮ ತಮ್ಮ ಕ್ಷೇತ್ರದಲ್ಲಿ ನುರಿತ ಅನುಭವಿಗಳಾಗಿದ್ದರು. ಈ ಸಂದರ್ಭವನ್ನು ಎದುರಿಸಲು ಸಾಧ್ಯ ಎಂದು ಭಾವಿಸಿದ್ದರು. ಹೀಗಾಗಿ ಸಮೀಪದ ಏರ್​ ಕಂಟ್ರೋಲ್​ರೂಂಗೆ ತುರ್ತು ಕರೆ ಕೂಡ ಮಾಡಲಿಲ್ಲ ಎಂದೂ ಹೇಳಲಾಗಿದೆ.

ಡಿಸೆಂಬರ್ 8ರಂದು ಸಿಡಿಎಸ್​ ಬಿಪಿನ್ ರಾವತ್​, ಅವರ ಪತ್ನಿ ಮಧುಲಿಕಾ ರಾವತ್​ ಮತ್ತು ಇತರ 12 ಸೇನಾಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್​ ತಮಿಳುನಾಡಿನ ವೆಲ್ಲಿಂಗ್ಟನ್​​ಗೆ ಹೋಗುತ್ತಿತ್ತು.  ಈ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್ ಸೇರಿ ಎಲ್ಲರೂ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರು. ಅದರಲ್ಲಿ ಬದುಕಿದ್ದ ವಾಯುಪಡೆ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಡಿಸೆಂಬರ್​ 15ರಂದು ನಿಧನರಾಗಿದ್ದರು. ಎಲ್ಲವೂ ಸರಿಯಾಗಿದ್ದರೂ ಪತನಗೊಂಡ ಹೆಲಿಕಾಪ್ಟರ್​ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಅದರ ಸೂಕ್ತ ತನಿಖೆ ನಡೆಸಲು ದೇಶದ ಉನ್ನತ ಮಟ್ಟದ ಹೆಲಿಕಾಪ್ಟರ್ ಪೈಲಟ್​ ಏರ್​ ಮಾರ್ಶಲ್​ ಮನ್ವೇಂದ್ರ್​ ಸಿಂಗ್​ ನೇತೃತ್ವದಲ್ಲಿ, ಮೂರೂ ಸೇನೆಗಳ ಅಧಿಕಾರಿಗಳನ್ನೊಳಗೊಂಡ ಕೋರ್ಟ್ ಆಫ್​ ಎನ್​ಕ್ವೈರಿ ಎಂಬ ತನಿಖಾ ಸಮಿತಿ ರಚನೆ ಮಾಡಲಾಗಿತ್ತು.

ಇದನ್ನೂ ಓದಿ: ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು

Published On - 12:56 pm, Sat, 15 January 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ