AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಡ ಎದುರಾದಾಗ ಪೈಲಟ್​ ತೆಗೆದುಕೊಂಡ ತಪ್ಪು ನಿರ್ಧಾರವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ; ಅಂತಿಮ ವರದಿ ಬಹಿರಂಗ

Army Chopper Crash: ಅಂದು ಸಿಡಿಎಸ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳು ಪ್ರಯಾಣ ಮಾಡುತ್ತಿದ್ದ ಎಂಐ-17ವಿ5 ವಿಮಾನ ರೈಲ್ವೆ ಹಳಿಯೊಂದರ ಮೇಲೆ ಅದೇ ಮಾರ್ಗದಲ್ಲಿ ಹಾರಾಟ ನಡೆಸುತ್ತಿತ್ತು.

ಮೋಡ ಎದುರಾದಾಗ ಪೈಲಟ್​ ತೆಗೆದುಕೊಂಡ ತಪ್ಪು ನಿರ್ಧಾರವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ; ಅಂತಿಮ ವರದಿ ಬಹಿರಂಗ
ಹೆಲಿಕಾಪ್ಟರ್​ ಪತನದ ಚಿತ್ರ
Follow us
TV9 Web
| Updated By: Lakshmi Hegde

Updated on:Jan 15, 2022 | 2:28 PM

2021ರ ಡಿಸೆಂಬರ್​ 8ರಂದು ತಮಿಳುನಾಡಿನ ಕೂನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್​ ಪತನಕ್ಕೆ ಪೈಲಟ್​ನ ಅಜಾಗರೂಕತೆಯೇ ಕಾರಣ ಎಂದು, ತನಿಖಾ ಸಮಿತಿಯ ಪ್ರಾಥಮಿಕ ಫಲಿತಾಂಶದಲ್ಲಿ ಉಲ್ಲೇಖವಾಗಿದೆ. ಅಂದು ನೀಲಗಿರಿ ಕಾಡುಗಳ ಬಳಿ ಹವಾಮಾನದಲ್ಲಿ ಒಮ್ಮೆಲೇ ಬದಲಾವಣೆ ಉಂಟಾಯಿತು. ಮೋಡ ಅಡ್ಡಬಂದಿದ್ದರಿಂದ ಪೈಲೆಟ್​​ಗೆ ದಿಗ್ಭ್ರಮೆಯಾಗಿದೆ.  ಅವರಿಗೆ ಮುಂದೆ ಏನು ಮಾಡಬೇಕು ಎಂದು ತಿಳಿಯದ ಕಾರಣ ಹೆಲಿಕಾಪ್ಟರ್​ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ. ಹೀಗಾಗಿ ಅದು ಕಲ್ಲುಬಂಡೆಗೆ ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಂಡ ವರದಿ ನೀಡಿದೆ.  ಅಪಘಾತದ ನಂತರ ಹೆಲಿಕಾಪ್ಟರ್​​ನಲ್ಲಿದ್ದ ಡಾಟಾ ರಿಕಾರ್ಡರ್ ಮತ್ತು ಕಾಕ್​ಪಿಟ್​ ವೈಸ್ ರಿಕಾರ್ಡರ್​​ಗಳನ್ನು ವಿಶ್ಲೇಷಿಸಿದ ನಂತರ, ಲಭ್ಯವಿರುವ ಸಾಕ್ಷಿಗಳನ್ನು ಪ್ರಶ್ನಿಸಿ, ಉತ್ತರ ಪಡೆದ ಬಳಿಕ ತನಿಖಾ ತಂಡ ಈ ವರದಿ ನೀಡಿದೆ. 

ಸದ್ಯ ತನಿಖೆ ಮುಕ್ತಾಯಗೊಂಡು ವರದಿ ಇನ್ನೇನು ಶೀಘ್ರದಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಕೈಸೇರಲಿದೆ. ಅಂದು ಸಿಡಿಎಸ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳು ಪ್ರಯಾಣ ಮಾಡುತ್ತಿದ್ದ ಎಂಐ-17ವಿ5 ವಿಮಾನ ರೈಲ್ವೆ ಹಳಿಯೊಂದರ ಮೇಲೆ ಅದೇ ಮಾರ್ಗದಲ್ಲಿ ಹಾರಾಟ ನಡೆಸುತ್ತಿತ್ತು. ಆದರೆ ಅದೇ ಮಾರ್ಗದಲ್ಲಿ ದೊಡ್ಡದಾದ ಮೋಡ ಅಡ್ಡಬಂದು ಹೆಲಿಕಾಪ್ಟರ್​ ಆ ಮೋಡದೊಳಗೆ ಸಿಕ್ಕಿತು. ಆ ಸಮಯದಲ್ಲಿ ಸೇನಾ ಹೆಲಿಕಾಪ್ಟರ್​ ಅತ್ಯಂತ ಕೆಳಗೆ ಹಾರುತ್ತಿದ್ದುದರಿಂದ ಭೂಪ್ರದೇಶ ಪೈಲೆಟ್​ ಗಮನದಲ್ಲಿ ಇತ್ತು. ಮೋಡದಿಂದ ಪಾರಾಗಲು ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಪ್ರಯತ್ನಿಸಿದಾಗ ಬಂಡೆಗೆ ಅಪ್ಪಳಿಸಿದೆ ಎಂದು ವರದಿಯಲ್ಲಿ ಸವಿಸ್ತಾರವಾಗಿ ಉಲ್ಲೇಖ ಮಾಡಲಾಗಿದೆ. ಹೆಲಿಕಾಪ್ಟರ್​​ನಲ್ಲಿ ಇದ್ದವರೆಲ್ಲ ಮಾಸ್ಟರ್​ ಗ್ರೀನ್​ ವರ್ಗದವರೇ ಆಗಿದ್ದರು. ಅಂದರೆ ತಮ್ಮ ತಮ್ಮ ಕ್ಷೇತ್ರದಲ್ಲಿ ನುರಿತ ಅನುಭವಿಗಳಾಗಿದ್ದರು. ಈ ಸಂದರ್ಭವನ್ನು ಎದುರಿಸಲು ಸಾಧ್ಯ ಎಂದು ಭಾವಿಸಿದ್ದರು. ಹೀಗಾಗಿ ಸಮೀಪದ ಏರ್​ ಕಂಟ್ರೋಲ್​ರೂಂಗೆ ತುರ್ತು ಕರೆ ಕೂಡ ಮಾಡಲಿಲ್ಲ ಎಂದೂ ಹೇಳಲಾಗಿದೆ.

ಡಿಸೆಂಬರ್ 8ರಂದು ಸಿಡಿಎಸ್​ ಬಿಪಿನ್ ರಾವತ್​, ಅವರ ಪತ್ನಿ ಮಧುಲಿಕಾ ರಾವತ್​ ಮತ್ತು ಇತರ 12 ಸೇನಾಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್​ ತಮಿಳುನಾಡಿನ ವೆಲ್ಲಿಂಗ್ಟನ್​​ಗೆ ಹೋಗುತ್ತಿತ್ತು.  ಈ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್ ಸೇರಿ ಎಲ್ಲರೂ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರು. ಅದರಲ್ಲಿ ಬದುಕಿದ್ದ ವಾಯುಪಡೆ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಡಿಸೆಂಬರ್​ 15ರಂದು ನಿಧನರಾಗಿದ್ದರು. ಎಲ್ಲವೂ ಸರಿಯಾಗಿದ್ದರೂ ಪತನಗೊಂಡ ಹೆಲಿಕಾಪ್ಟರ್​ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಅದರ ಸೂಕ್ತ ತನಿಖೆ ನಡೆಸಲು ದೇಶದ ಉನ್ನತ ಮಟ್ಟದ ಹೆಲಿಕಾಪ್ಟರ್ ಪೈಲಟ್​ ಏರ್​ ಮಾರ್ಶಲ್​ ಮನ್ವೇಂದ್ರ್​ ಸಿಂಗ್​ ನೇತೃತ್ವದಲ್ಲಿ, ಮೂರೂ ಸೇನೆಗಳ ಅಧಿಕಾರಿಗಳನ್ನೊಳಗೊಂಡ ಕೋರ್ಟ್ ಆಫ್​ ಎನ್​ಕ್ವೈರಿ ಎಂಬ ತನಿಖಾ ಸಮಿತಿ ರಚನೆ ಮಾಡಲಾಗಿತ್ತು.

ಇದನ್ನೂ ಓದಿ: ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು

Published On - 12:56 pm, Sat, 15 January 22

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ