AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಟ್ರೇನುಗಳ 2ಎಸ್ ಕೋಚ್​ಗಳು ಇನ್ನುಮುಂದೆ ಅನ್​ರಿಸರ್ವ್ಡ್​ ಕ್ಲಾಸ್ ಕೋಚ್​ಗಳಾಗಿ ಪರಿಗಣಿಸಲಾಗುತ್ತದೆ: ಇಂಡಿಯನ್ ರೇಲ್ವೇಸ್

2ಎಸ್-ಸಾಮಾನ್ಯ ವರ್ಗದ ಕೋಚ್ ಆಗಿರುತ್ತವಾದರೂ ಸೀಟುಗಳನ್ನು (ಕೂರಲು) ಮುಂಗಡವಾಗಿ ಬುಕ್ ಮಾಡಬೇಕಾಗುತಿತ್ತು. ಈಗ ಆ ಪದ್ಧತಿಯನ್ನು ರದ್ದುಮಾಡಿ ಈ ಕೋಚ್ಗಳನ್ನು ಅನ್​ರಿಸರ್ವ್ಡ್​ (ಸಾಮಾನ್ಯ) ಆಗಿ ಪರಿವರ್ತಿಸಲಾಗಿದೆ.

ಎಲ್ಲ ಟ್ರೇನುಗಳ 2ಎಸ್ ಕೋಚ್​ಗಳು ಇನ್ನುಮುಂದೆ ಅನ್​ರಿಸರ್ವ್ಡ್​ ಕ್ಲಾಸ್ ಕೋಚ್​ಗಳಾಗಿ ಪರಿಗಣಿಸಲಾಗುತ್ತದೆ: ಇಂಡಿಯನ್ ರೇಲ್ವೇಸ್
ಇಂಡಿಯನ್ ರೇಲ್ವೇಸ್
TV9 Web
| Edited By: |

Updated on: Mar 01, 2022 | 12:10 AM

Share

ನಿಮಗೆ ಗೊತ್ತಿದೆ, ಕೋವಿಡ್-19 ಪಿಡುಗು ರೈಲು ಸಂಚಾರ, ಸೀಟು ಆಥವಾ ಬರ್ತ್​ಗಳ ಬುಕಿಂಗ್ ಮೇಲೂ ಪ್ರಭಾವ ಬೀರಿತ್ತು. ಕೋವಿಡ್ ಸೋಂಕಿನ ಪ್ರಭಾವ ಈಗ ತಗ್ಗಿರುವ ಕಾರಣ ಇಂಡಿಯನ್ ರೇಲ್ವೇಸ್ (Indian Railways) ಎಲ್ಲ ಟ್ರೇನುಗಳು ಮೊದಲು ಅಂಕಿತಗೊಂಡಿದ್ದ ರೈಲುಗಾಡಿಯ ನಂಬರ್ ಅನುಸಾರವಾಗಿಯೇ ಸಂಚಾರ ಆರಂಭಿಸಿವೆ. ಸಾಮಾನ್ಯ ಟ್ರೇನ್​ಗಳಲ್ಲಿ ಮೊದಲಿನ ಹಾಗೆ ಅಂದರೆ, ಪಿಡುಗು ತಲೆದೋರುವ ಮುಂಚಿನ ಸಮಯದಲ್ಲಿ ಇರುತ್ತಿದ್ದ ಹಾಗೆ ಸಾಮಾನ್ಯ ಕೋಚ್ಗಳನ್ನು (general coaches), ರಿಸರ್ವ್ಡ್ (reserved) (ಕಾಯ್ದಿಟ್ಟ) ಮತ್ತು ಅನ್​ರಿಸರ್ವ್ಡ್​(ಸಾಮಾನ್ಯ) (unreserved) ಎಂದು ಗುರುತಿಲಸಲಾಗಿದೆ. ಇದನ್ನು ಮತ್ತಷ್ಟು ಸರಳ ಭಾಷೆಯಲ್ಲಿ ಹೇಳುವುದಾದರೆ, ಕೋವಿಡ್ ಪಿಡುಗುಗಿಂತ ಮುಂಚೆ ಒಂದು ನಿರ್ದಿಷ್ಟ ಟ್ರೇನು 4 ಅನ್ರಿಸರ್ವ್ಡ್ ಜನರಲ್ ಸೀಟಿಂಗ್ ಕೋಚ್ಗಳನ್ನು ಹೊಂದಿದ್ದರೆ ಅವನ್ನು ಈಗ 2ಎಸ್ (ಸೆಕೆಂಡ್ ಸೀಟಿಂಗ್) ಅನ್​ರಿಸರ್ವ್ಡ್​ ವರ್ಗ (ಕ್ಲಾಸ್) ಕೋಚ್​ಗಳಾಗಿ ಪರಿಗಣಿಸಲಾಗುತ್ತದೆ ಅಂತ ರೇಲ್ವೆ ಇಲಾಖೆ ಪ್ರಕಟಣೆಯೊಂದು ತಿಳಿಸುತ್ತದೆ.

2ಎಸ್-ಸಾಮಾನ್ಯ ವರ್ಗದ ಕೋಚ್ ಆಗಿರುತ್ತವಾದರೂ ಸೀಟುಗಳನ್ನು (ಕೂರಲು) ಮುಂಗಡವಾಗಿ ಬುಕ್ ಮಾಡಬೇಕಾಗುತಿತ್ತು. ಈಗ ಆ ಪದ್ಧತಿಯನ್ನು ರದ್ದುಮಾಡಿ ಈ ಕೋಚ್ಗಳನ್ನು ಅನ್​ರಿಸರ್ವ್ಡ್​ (ಸಾಮಾನ್ಯ) ಆಗಿ ಪರಿವರ್ತಿಸಲಾಗಿದೆ. ನೀವು ಸೀಟನ್ನು 120 ದಿನಗಳಷ್ಟು ಮೊದಲು ಮುಂಗಡ ಬುಕಿಂಗ್ ಮಾಡಬಹುದಿತ್ತು. ಅಂದರೆ ಈಗಾಗಲೇ ಬುಕಿಂಗ್ ಆಗಿರುವುದು ಕೊನೆಗೊಂಡ ಕೂಡಲೇ ಈ ಕೋಚ್ ಗಳು ಅನ್​ರಿಸರ್ವ್ಡ್​ (ಸಾಮಾನ್ಯ) ಆಗಿಬಿಡುತ್ತವೆ.

Railways circular

ರೇಲ್ವೇಸ್ ಪ್ರಕಟಣೆ

ಅಷ್ಟಾಗಿಯೂ ಒಂದು ರೈಲು ಕೆಲ ಜಿಎಸ್​ಸಿಜೆಡ್ ಅಥವಾ ಅದೇ ರೀತಿಯ ಕೋಚ್‌ಗಳನ್ನು ಕಾಯ್ದಿರಿಸಿದ ಎರಡನೇ ಸಿಟ್ಟಿಂಗ್ ಕೋಚ್‌ಗಳಾಗಿ (2S ವರ್ಗ) ಕೋವಿಡ್ ಪಿಡುಗು ತಲೆದೋರುವ ಮುಂಚಿನ ಸಮಯದಲ್ಲಿ ಓಡುತ್ತಿದ್ದರೆ, ಅವುಗಳು ಈಗಲೂ ಆ ರೈಲುಗಳಲ್ಲಿ ಕಾಯ್ದಿರಿಸಿದ ಸಿಟ್ಟಿಂಗ್ ಕೋಚ್‌ಗಳಾಗಿ ಮುಂದುವರಿಯುತ್ತವೆ.

ರಜಾದಿನ ವಿಶೇಷ (Holiday Special) ಅಥವಾ ಇತರ ವಿಶೇಷ ರೈಲುಗಳಲ್ಲಿ, ಸಾಂಕ್ರಾಮಿಕ ರೋಗದ ಮುಂಚಿನ ಅವಧಿಯಲ್ಲಿ ಚಾಲ್ತಿಯಲ್ಲಿರುವಂತೆ ಸಾಮಾನ್ಯ ಕೋಚ್‌ಗಳನ್ನು ಕಾಯ್ದಿರಿಸಲಾಗಿದೆ ಅಥವಾ ಕಾಯ್ದಿರಿಸಲಾಗಿಲ್ಲ ಅಂತಲೇ ಪರಿಗಣಿಸಲಾಗುವುದು.

ಇದನ್ನೂ ಓದಿ:   ಯಶವಂತಪುರ ರೇಲ್ವೇ ಸ್ಟೇಶನ್​ನ ಎಎಸ್ಐಪಿಎಫ್ ಚಂದ್ರಪ್ಪ ಅವರ ಸಮಯ ಪ್ರಜ್ಞೆ ಮತ್ತು ಮಾನವೀಯ ಕಳಕಳಿ ವ್ಯಕ್ತಿಯ ಪ್ರಾಣ ಉಳಿಸಿತು!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?