AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olaf Scholz: ಜರ್ಮನಿ ಚಾನ್ಸಲರ್ ಓಲಾಫ್ ಶೋಲ್ಸ್ ಇಂದು ಭಾರತಕ್ಕೆ, ನಾಳೆ ಬೆಂಗಳೂರಿಗೆ ಭೇಟಿ

ದ್ವಿಪಕ್ಷೀಯ ಮಾತುಕತೆ ವೇಳೆ ಉಕ್ರೇನ್ ಯುದ್ಧ, ಚೀನಾ ವಿಚಾರಗಳ ಬಗ್ಗೆ ಹೆಚ್ಚಿನ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಜರ್ಮನಿಯ ರಾಯಭಾರಿ ಫಿಲಿಪ್ ಆಕರ್ಮನ್ ತಿಳಿಸಿದ್ದಾರೆ. ಓಲಾಫ್ ಶೋಲ್ಸ್ ಜತೆ ಉನ್ನತ ಮಟ್ಟದ ಅಧಿಕಾರಿಗಳು, ವಿವಿಧ ಕಂಪನಿಗಳ 12 ಮಂದಿ ಸಿಇಒಗಳನ್ನೊಳಗಂಡ ಉದ್ಯಮಿಗಳ ನಿಯೋಗ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Olaf Scholz: ಜರ್ಮನಿ ಚಾನ್ಸಲರ್ ಓಲಾಫ್ ಶೋಲ್ಸ್ ಇಂದು ಭಾರತಕ್ಕೆ, ನಾಳೆ ಬೆಂಗಳೂರಿಗೆ ಭೇಟಿ
ಜರ್ಮನಿ ಚಾನ್ಸಲರ್ ಓಲಾಫ್ ಸ್ಕೋಲ್ಜ್
ಗಣಪತಿ ಶರ್ಮಾ
|

Updated on: Feb 25, 2023 | 7:06 AM

Share

ನವದೆಹಲಿ: ಜರ್ಮನಿಯ ಚಾನ್ಸಲರ್ ಓಲಾಫ್ ಶೋಲ್ಸ್ (German Chancellor Olaf Scholz) ಇಂದು (ಫೆಬ್ರವರಿ 25) ಭಾರತಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಚಾನ್ಸಲರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿರುವ ಅವರು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಶೋಲ್ಸ್ ಮತ್ತು ಮೋದಿ ಅವರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಬಳಿಕ ಭಾರತ ಮತ್ತು ಜರ್ಮನ್ ಸಿಇಒಗಳು ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ದ್ವಿಪಕ್ಷೀಯ ಮಾತುಕತೆ ವೇಳೆ ಉಕ್ರೇನ್ ಯುದ್ಧ, ಚೀನಾ ವಿಚಾರಗಳ ಬಗ್ಗೆ ಹೆಚ್ಚಿನ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಜರ್ಮನಿಯ ರಾಯಭಾರಿ ಫಿಲಿಪ್ ಆಕರ್ಮನ್ ತಿಳಿಸಿದ್ದಾರೆ. ಓಲಾಫ್ ಶೋಲ್ಸ್ ಜತೆ ಉನ್ನತ ಮಟ್ಟದ ಅಧಿಕಾರಿಗಳು, ವಿವಿಧ ಕಂಪನಿಗಳ 12 ಮಂದಿ ಸಿಇಒಗಳನ್ನೊಳಗಂಡ ಉದ್ಯಮಿಗಳ ನಿಯೋಗ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನ ಮತ್ತು ಭದ್ರತಾ ಮಂಡಳಿಯಂತಹ ಸಂಸ್ಥೆಗಳಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ವಿರುದ್ಧ ಮತ ಚಲಾಯಿಸಬೇಕೆಂದು ಜರ್ಮನಿಯು ಭಾರತಕ್ಕೆ ಹೇಳಿದ್ದರೂ, ಅಂತಹ ವಿಷಯಗಳಲ್ಲಿ ಮತ ಚಲಾಯಿಸುವುದು ಅಥವಾ ದೂರವಿರುವುದು ಯಾವುದೇ ದೇಶದ ಸಾರ್ವಭೌಮ ನಿರ್ಧಾರವಾಗಿದೆ. ಇಂಥ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಭಾರತ ಮತ್ತು ಜರ್ಮನಿ ಜತೆಯಾಗಿ ಮುಂದೆ ಸಾಗಲಿವೆ ಎಂದು ಅವರು ಹೇಳಿದ್ದಾರೆ.

ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿದ್ಯಮಾನಗಳು ಮೋದಿ ಮತ್ತು ಶೋಲ್ಸ್ ಮಾತುಕತೆಯ ಪ್ರಮುಖ ವಿಚಾರಗಳಾಗಿರಲಿವೆ. ಉಳಿದಂತೆ ಉದ್ಯಮ, ಹವಾಮಾಣ ಬದಲಾವಣೆ, ಕೌಶಲಯುಕ್ತ ಭಾರತದ ಕಾರ್ಮಿಕರ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!