AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olaf Scholz: ಜರ್ಮನಿ ಚಾನ್ಸಲರ್ ಓಲಾಫ್ ಶೋಲ್ಸ್ ಇಂದು ಭಾರತಕ್ಕೆ, ನಾಳೆ ಬೆಂಗಳೂರಿಗೆ ಭೇಟಿ

ದ್ವಿಪಕ್ಷೀಯ ಮಾತುಕತೆ ವೇಳೆ ಉಕ್ರೇನ್ ಯುದ್ಧ, ಚೀನಾ ವಿಚಾರಗಳ ಬಗ್ಗೆ ಹೆಚ್ಚಿನ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಜರ್ಮನಿಯ ರಾಯಭಾರಿ ಫಿಲಿಪ್ ಆಕರ್ಮನ್ ತಿಳಿಸಿದ್ದಾರೆ. ಓಲಾಫ್ ಶೋಲ್ಸ್ ಜತೆ ಉನ್ನತ ಮಟ್ಟದ ಅಧಿಕಾರಿಗಳು, ವಿವಿಧ ಕಂಪನಿಗಳ 12 ಮಂದಿ ಸಿಇಒಗಳನ್ನೊಳಗಂಡ ಉದ್ಯಮಿಗಳ ನಿಯೋಗ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Olaf Scholz: ಜರ್ಮನಿ ಚಾನ್ಸಲರ್ ಓಲಾಫ್ ಶೋಲ್ಸ್ ಇಂದು ಭಾರತಕ್ಕೆ, ನಾಳೆ ಬೆಂಗಳೂರಿಗೆ ಭೇಟಿ
ಜರ್ಮನಿ ಚಾನ್ಸಲರ್ ಓಲಾಫ್ ಸ್ಕೋಲ್ಜ್
ಗಣಪತಿ ಶರ್ಮಾ
|

Updated on: Feb 25, 2023 | 7:06 AM

Share

ನವದೆಹಲಿ: ಜರ್ಮನಿಯ ಚಾನ್ಸಲರ್ ಓಲಾಫ್ ಶೋಲ್ಸ್ (German Chancellor Olaf Scholz) ಇಂದು (ಫೆಬ್ರವರಿ 25) ಭಾರತಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಚಾನ್ಸಲರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿರುವ ಅವರು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಶೋಲ್ಸ್ ಮತ್ತು ಮೋದಿ ಅವರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಬಳಿಕ ಭಾರತ ಮತ್ತು ಜರ್ಮನ್ ಸಿಇಒಗಳು ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ದ್ವಿಪಕ್ಷೀಯ ಮಾತುಕತೆ ವೇಳೆ ಉಕ್ರೇನ್ ಯುದ್ಧ, ಚೀನಾ ವಿಚಾರಗಳ ಬಗ್ಗೆ ಹೆಚ್ಚಿನ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಜರ್ಮನಿಯ ರಾಯಭಾರಿ ಫಿಲಿಪ್ ಆಕರ್ಮನ್ ತಿಳಿಸಿದ್ದಾರೆ. ಓಲಾಫ್ ಶೋಲ್ಸ್ ಜತೆ ಉನ್ನತ ಮಟ್ಟದ ಅಧಿಕಾರಿಗಳು, ವಿವಿಧ ಕಂಪನಿಗಳ 12 ಮಂದಿ ಸಿಇಒಗಳನ್ನೊಳಗಂಡ ಉದ್ಯಮಿಗಳ ನಿಯೋಗ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನ ಮತ್ತು ಭದ್ರತಾ ಮಂಡಳಿಯಂತಹ ಸಂಸ್ಥೆಗಳಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ವಿರುದ್ಧ ಮತ ಚಲಾಯಿಸಬೇಕೆಂದು ಜರ್ಮನಿಯು ಭಾರತಕ್ಕೆ ಹೇಳಿದ್ದರೂ, ಅಂತಹ ವಿಷಯಗಳಲ್ಲಿ ಮತ ಚಲಾಯಿಸುವುದು ಅಥವಾ ದೂರವಿರುವುದು ಯಾವುದೇ ದೇಶದ ಸಾರ್ವಭೌಮ ನಿರ್ಧಾರವಾಗಿದೆ. ಇಂಥ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಭಾರತ ಮತ್ತು ಜರ್ಮನಿ ಜತೆಯಾಗಿ ಮುಂದೆ ಸಾಗಲಿವೆ ಎಂದು ಅವರು ಹೇಳಿದ್ದಾರೆ.

ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿದ್ಯಮಾನಗಳು ಮೋದಿ ಮತ್ತು ಶೋಲ್ಸ್ ಮಾತುಕತೆಯ ಪ್ರಮುಖ ವಿಚಾರಗಳಾಗಿರಲಿವೆ. ಉಳಿದಂತೆ ಉದ್ಯಮ, ಹವಾಮಾಣ ಬದಲಾವಣೆ, ಕೌಶಲಯುಕ್ತ ಭಾರತದ ಕಾರ್ಮಿಕರ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ