AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ನೆಲೆಯೂರಿದ್ದ ಜರ್ಮನ್ ಪಾದರಕ್ಷೆ ಕಂಪನಿ ಆಗ್ರಾಗೆ ಶಿಫ್ಟ್

ಲಕ್ನೋ: ಕೊರೊನಾ ನಂತರ ರಾಜ್ಯ ಸರ್ಕಾರ ಮತ್ತು ಪ್ರಧಾನಿ ಮೋದಿ ಕೈಗೊಂಡಿದ್ದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಪ್ರಯತ್ನಕ್ಕೆ ಹೊಸ ತಿರುವು ಸಿಕ್ಕಿದೆ. ಚೀನಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜರ್ಮನ್‌ ಮೂಲದ ಪ್ರಸಿದ್ಧ ಪಾದರಕ್ಷೆ ಕಂಪನಿ ಚೀನಾವನ್ನು ತೊರೆಯಲಿದೆ. ತನ್ನ ಸಂಪೂರ್ಣ ಉತ್ಪಾದನೆಯನ್ನು ಉತ್ತರ ಪ್ರದೇಶದ ಹೊರವಲಯದ ಆಗ್ರಾಗೆ ವರ್ಗಾಯಿಸಲು ಮುಂದಾಗಿದೆ. ಜರ್ಮನ್​ನ ಪ್ರಸಿದ್ಧ ಫೂಟ್‌ವೇರ್‌ ಕಂಪನಿ ವನ್ ವೆಲ್ಕ್ಸ್ ಭಾರತದಲ್ಲಿ ಕಾರ್ಯನಿರ್ವಹಿಸಲಿದೆ. ಕಾಸಾ ಎವರ್ಜ್ ಗಂಬ್ ಒಡೆತನದ ವನ್ ವೆಲ್ಕ್ಸ್ ಚೀನಾದಲ್ಲಿ ತನ್ನ ಸಂಪೂರ್ಣ ಶೂ ಉತ್ಪಾದನಾ ವ್ಯವಹಾರವನ್ನು ವಾರ್ಷಿಕವಾಗಿ ಮೂರು […]

ಚೀನಾದಲ್ಲಿ ನೆಲೆಯೂರಿದ್ದ ಜರ್ಮನ್ ಪಾದರಕ್ಷೆ ಕಂಪನಿ ಆಗ್ರಾಗೆ ಶಿಫ್ಟ್
ಆಯೇಷಾ ಬಾನು
|

Updated on:May 21, 2020 | 4:17 PM

Share

ಲಕ್ನೋ: ಕೊರೊನಾ ನಂತರ ರಾಜ್ಯ ಸರ್ಕಾರ ಮತ್ತು ಪ್ರಧಾನಿ ಮೋದಿ ಕೈಗೊಂಡಿದ್ದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಪ್ರಯತ್ನಕ್ಕೆ ಹೊಸ ತಿರುವು ಸಿಕ್ಕಿದೆ. ಚೀನಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜರ್ಮನ್‌ ಮೂಲದ ಪ್ರಸಿದ್ಧ ಪಾದರಕ್ಷೆ ಕಂಪನಿ ಚೀನಾವನ್ನು ತೊರೆಯಲಿದೆ.

ತನ್ನ ಸಂಪೂರ್ಣ ಉತ್ಪಾದನೆಯನ್ನು ಉತ್ತರ ಪ್ರದೇಶದ ಹೊರವಲಯದ ಆಗ್ರಾಗೆ ವರ್ಗಾಯಿಸಲು ಮುಂದಾಗಿದೆ. ಜರ್ಮನ್​ನ ಪ್ರಸಿದ್ಧ ಫೂಟ್‌ವೇರ್‌ ಕಂಪನಿ ವನ್ ವೆಲ್ಕ್ಸ್ ಭಾರತದಲ್ಲಿ ಕಾರ್ಯನಿರ್ವಹಿಸಲಿದೆ. ಕಾಸಾ ಎವರ್ಜ್ ಗಂಬ್ ಒಡೆತನದ ವನ್ ವೆಲ್ಕ್ಸ್ ಚೀನಾದಲ್ಲಿ ತನ್ನ ಸಂಪೂರ್ಣ ಶೂ ಉತ್ಪಾದನಾ ವ್ಯವಹಾರವನ್ನು ವಾರ್ಷಿಕವಾಗಿ ಮೂರು ಮಿಲಿಯನ್ ಜೋಡಿ ಸಾಮರ್ಥ್ಯದೊಂದಿಗೆ, 110 ಕೋಟಿ ರೂ.ಗಳ ಆರಂಭಿಕ ಹೂಡಿಕೆಯೊಂದಿಗೆ ಭಾರತಕ್ಕೆ ಸ್ಥಳಾಂತರಿಸುವುದಾಗಿ ಘೋಷಿಸಿದೆ.

ವನ್ ವೆಲ್ಕ್ಸ್ ಆಗ್ರಾದಲ್ಲಿ ಲಾಟ್ರಿಕ್‌ ಇಂಡಸ್ಟ್ರೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯೊಂದಿಗೆ ಜಂಟಿಯಾಗಿ ಇದೇ ರೀತಿಯ ಸಾಮರ್ಥ್ಯದ ಹೊಸ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರ್ಷಕ್ಕೆ ಕೋಟಿಗೂ ಮೀರಿ ಪಾದರಕ್ಷೆಗಳನ್ನು ಈ ಸಂಸ್ಥೆ ತಯಾರಿಸುತ್ತಿದ್ದು, ಸಂಸ್ಥೆಯ ಈ ನಿರ್ಧಾರದಿಂದ ಉತ್ತರ ಪ್ರದೇಶ ಸೇರಿ ಭಾರತದಲ್ಲಿ ಒಟ್ಟು 10,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.

Published On - 12:28 pm, Thu, 21 May 20

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!