AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್

ಪಂಜಾಬ್ ವಿಧಾನಸಭಾ ಅಧಿವೇಶನದಲ್ಲಿ ಇಂದು ಹೈಡ್ರಾಮಾ ನಡೆದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸದನದೊಳಗೆ ಕುಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದ ನಂತರ, ವಿಧಾನಸಭೆಯಲ್ಲಿರುವ ಎಲ್ಲಾ ಶಾಸಕರಿಗೆ ಆಲ್ಕೋಹಾಲ್ ಪರೀಕ್ಷೆ ನಡೆಸಬೇಕೆಂದು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಒತ್ತಾಯಿಸಿದ್ದಾರೆ. ಈ ನಡುವೆ ಇಂದಿನ ಸದನದ ವೇಳೆ ಕಾಂಗ್ರೆಸ್ ವಿಧಾನಸಭೆಯಿಂದ ಹೊರನಡೆದಿದೆ.

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್
Bhagwant MannImage Credit source: TV9
ಸುಷ್ಮಾ ಚಕ್ರೆ
|

Updated on: May 01, 2026 | 3:43 PM

Share

ಪಂಜಾಬ್, ಮೇ 1: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಪಂಜಾಬ್​ನ ಸಿಎಂ ಭಗವಂತ್ ಮಾನ್ ಸದನದ ಕಲಾಪಗಳ ಸಮಯದಲ್ಲಿ ಕುಡಿದಿದ್ದರು ಎಂದು ಆರೋಪಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇಂದು ಪಂಜಾಬ್​​ನಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು. ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಸ್ಥಿತಿಯಲ್ಲಿ ಸದನಕ್ಕೆ ಬಂದಿದ್ದಾರೆ. ಹೀಗಾಗಿ ಸದನದಲ್ಲಿರುವ ಎಲ್ಲಾ ಶಾಸಕರಿಗೆ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು.

ಕಾರ್ಮಿಕ ದಿನದ ಸಂದರ್ಭದಲ್ಲಿ ನಿರ್ಣಯವನ್ನು ಅಂಗೀಕರಿಸಲು ಕರೆಯಲಾದ ದಿನವಿಡೀ ವಿಶೇಷ ಅಧಿವೇಶನವು ಸೌಹಾರ್ದಯುತ ರೀತಿಯಲ್ಲೇ ಪ್ರಾರಂಭವಾಯಿತು. ಆದರೆ ಸದನ ನಡೆಯುತ್ತಿರುವಾಗ ಕಾಂಗ್ರೆಸ್ ಶಾಸಕ ಸುಖ್‌ಪಾಲ್ ಸಿಂಗ್ ಖೈರಾ ಮೊಬೈಲ್ ಫೋನ್ ಬಳಸುವುದಕ್ಕೆ ಸಿಎಂ ಭಗವಂತ್ ಮಾನ್ ಆಕ್ಷೇಪಿಸಿದಾಗ ಚರ್ಚೆಗಳು ಬೇರೆ ದಿಕ್ಕಿನೆಡೆ ಸಾಗಿದವು.

ಇದನ್ನೂ ಓದಿ: Video:ಪಂಜಾಬ್​ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ

ಸದನದಲ್ಲಿ ಅನುಸರಿಸಬೇಕಾದ ಒಂದು ಶಿಷ್ಟಾಚಾರವಿದೆ. ಅಲ್ಲಿ ಯಾರೂ ಕಾಲುಗಳನ್ನು ಚಾಚಿ ಕುಳಿತುಕೊಳ್ಳಬಾರದು ಎಂದು ಸಿಎಂ ಭಗವಂತ್ ಮಾನ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಖೈರಾ, ಹಿಂದಿನ ಅಧಿವೇಶನದಲ್ಲಿ ಸಂದರ್ಶಕರ ಗ್ಯಾಲರಿಯಲ್ಲಿ ಭಗವಂತ್ ಮಾನ್ ಅವರ ಪತ್ನಿ ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದರು ಎಂದು ಹೇಳಿದರು.

ಅದಕ್ಕೆ ಉತ್ತರಿಸಿದ ಸಿಎಂ, “ಅವರು ಕೂಡಲೆ ತಮ್ಮನ್ನು ತಾವು ಸರಿಪಡಿಸಿಕೊಂಡರು. ಅವರು ಸದನದ ಸದಸ್ಯರಲ್ಲ. ನೀವು ನನ್ನ ಮಗಳನ್ನು ಸಹ ಟಾರ್ಗೆಟ್ ಮಾಡಿದ್ದೀರಿ. ಇವರೆಲ್ಲ ಮನಸಿಗೆ ಬಂದಂತೆ ಮಾತಾಡುತ್ತಿದ್ದಾರೆ ಸ್ಪೀಕರ್ ಸಆಹೇಬ್. ವಿಧಾನಸಭೆಯ ಖರ್ಚಿನಲ್ಲಿ ಇವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕು” ಎಂದು ಟೀಕಿಸಿದರು.

ಇದಾದ ಸ್ವಲ್ಪ ಸಮಯದ ನಂತರ, ಅಧಿಕೃತ ನಿರ್ಣಯದ ಮೇಲಿನ ಚರ್ಚೆ ಇನ್ನೂ ನಡೆಯುತ್ತಿರುವಾಗ, ಸಿಎಂ ಭಗವಂತ್ ಮಾನ್ ಸದನದಕ್ಕೆ ಕುಡಿದು ಬಂದಿದ್ದಾರೆ ಎಂದು ಖೈರಾ ಆರೋಪಿಸಿದರು. ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು ಈ ಆರೋಪವನ್ನು ಬೆಂಬಲಿಸಿದರು. ಅಲ್ಲದೆ ಸದನದಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಮೇಲೆ ಮದ್ಯ ಪರೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿದರು, ಇದು ಭಾರೀ ವಾದ-ವಿವಾದಕ್ಕೆ ಕಾರಣವಾಯಿತು.

ಇದನ್ನೂ ಓದಿ: ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ

ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿ ಸ್ಪೀಕರ್ ಅವರಲ್ಲಿ ಈ ಭಗವಂತ್ ಮಾನ್ ವಿರುದ್ದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಕಾಂಗ್ರೆಸ್ ನಾಯಕ ಸುಖ್‌ಪಾಲ್ ಸಿಂಗ್ ಖೈರಾ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಪ್ರತಾಪ್ ಸಿಂಗ್ ಬಜ್ವಾ, “ಮುಖ್ಯಮಂತ್ರಿಗಳೇ ಕುಡಿದ ಮತ್ತಿನಲ್ಲಿ ಇರುವ ವಿಧಾನಸಭೆಗೆ ಬಂದು ನಾವು ಏನು ಮಾಡಬೇಕು? ರಾಜ್ಯದ ಮುಖ್ಯಸ್ಥರೇ ಸಂಪೂರ್ಣವಾಗಿ ನಿದ್ದೆಗೆಟ್ಟಿರುವಾಗ ಅಧಿವೇಶನ ನಡೆಸುವ ಉದ್ದೇಶವೇನು? ಎಲ್ಲರ ಆಲ್ಕೋಹಾಲ್ ಪರೀಕ್ಷೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್