AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಸೆಬಿ ಅಧ್ಯಕ್ಷೆ ಮಾಧಬಿ ಬುಚ್ ಮತ್ತು ಅವರ ಪತಿ ಕುರಿತ ಇತ್ತೀಚಿನ ಹಿಂಡೆನ್‌ಬರ್ಗ್ ವರದಿಯ ಕುರಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ, ವಿಷಕಾರಿ ಮನುಷ್ಯ ಎಂದು ಅವರು ಟೀಕಿಸಿದ್ದಾರೆ.

ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ
ಕಂಗನಾ ರಣಾವತ್
ಸುಷ್ಮಾ ಚಕ್ರೆ
|

Updated on: Aug 12, 2024 | 7:09 PM

Share

ನವದೆಹಲಿ: ಹೊಸ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ಅನುಮೋದಿಸಿದ್ದಕ್ಕಾಗಿ ಮತ್ತು ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಬುಚ್ ಅವರ ಮೇಲಿನ ಆರೋಪಗಳನ್ನು ಅನುಮೋದಿಸಿದ ಕಾರಣಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ವಿರುದ್ಧ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕಂಗನಾ ರಣಾವತ್ “ರಾಹುಲ್ ಗಾಂಧಿ ರಾಷ್ಟ್ರವನ್ನು ಅಸ್ಥಿರಗೊಳಿಸಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಕಹಿ ಮನಸಿನ, ವಿಷಕಾರಿ ಮತ್ತು ವಿನಾಶಕಾರಿ ವ್ಯಕ್ತಿಯಾಗಿದ್ದಾರೆ. ತಾವು ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ರಾಷ್ಟ್ರವನ್ನು ನಾಶಪಡಿಸಬೇಕೆಂಬುದೇ ಅವರ ಅಜೆಂಡಾ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು

“ಜೀವನ ಪೂರ್ತಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿರಿ” ಎಂದು ಬಿಜೆಪಿ ನಾಯಕಿ ಕಂಗನಾ ರಣಾವತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಟೀಕೆ ಮಾಡಿದ್ದಾರೆ.

ಭಾನುವಾರದಂದು ರಾಹುಲ್ ಗಾಂಧಿ ಅವರು ಸೆಬಿಯ ಕಾರ್ಯಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅದರ ಅಧ್ಯಕ್ಷೆ ಮಾಧಬಿ ಬುಚ್ ವಿರುದ್ಧ ಯುಎಸ್ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಇತ್ತೀಚೆಗೆ ಮಾಡಿದ ಆರೋಪಗಳ ನಂತರ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದರು. ಅದಾನಿ ಮನಿ-ಸೈಫನಿಂಗ್ ಹಗರಣದಲ್ಲಿ ಬಳಸಲಾದ ಕಡಲಾಚೆಯ ನಿಧಿಯಲ್ಲಿ ಬುಚ್ ಮತ್ತು ಅವರ ಪತಿ ಪಾಲುಗಳನ್ನು ಹೊಂದಿದ್ದಾರೆ ಎಂದು ಆರೋಪಗಳು ಕೇಳಿಬಂದಿತ್ತು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಆಸಕ್ತಿ ವಹಿಸುತ್ತದೆಯೇ ಎಂದು ರಾಹುಲ್ ಗಾಂಧಿ ಕೇಳಿದ್ದರು.

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ಆರೋಪಗಳನ್ನು ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ತಿರಸ್ಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್