AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿದ್ದೇನೆ: ವ್ಯಕ್ತಿ ಸತ್ತಿದ್ದಾರೆ ಅಂದುಕೊಂಡ 6 ತಿಂಗಳ ಬಳಿಕ ಪೊಲೀಸ್​ ಠಾಣೆಗೆ ಬಂತೊಂದು ಪತ್ರ

ನಾನು ಬದುಕಿದ್ದೇನೆ ಸರ್ ಸತ್ತಿಲ್ಲ, ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಘೋಷಿಸಿದ 6 ತಿಂಗಳ ಬಳಿಕ ಪೊಲೀಸ್​ ಠಾಣೆಗೆ ಒಂದು ಪತ್ರ ಬಂದಿತ್ತು.

ನಾನು ಬದುಕಿದ್ದೇನೆ: ವ್ಯಕ್ತಿ ಸತ್ತಿದ್ದಾರೆ ಅಂದುಕೊಂಡ 6 ತಿಂಗಳ ಬಳಿಕ ಪೊಲೀಸ್​ ಠಾಣೆಗೆ ಬಂತೊಂದು ಪತ್ರ
ಪೊಲೀಸ್​ Image Credit source: India.com
ನಯನಾ ರಾಜೀವ್
|

Updated on:May 02, 2023 | 8:19 AM

Share

ನಾನು ಬದುಕಿದ್ದೇನೆ ಸರ್ ಸತ್ತಿಲ್ಲ, ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಘೋಷಿಸಿದ 6 ತಿಂಗಳ ಬಳಿಕ ಪೊಲೀಸ್​ ಠಾಣೆಗೆ ಒಂದು ಪತ್ರ ಬಂದಿತ್ತು. ಆರು ತಿಂಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಬಿಹಾರದ ವ್ಯಕ್ತಿ ಗಾಜಿಯಾಬಾದ್​ನಲ್ಲಿ ಪತ್ತೆಯಾಗಿದ್ದಾರೆ. ಸೋನು ಕುಮಾರ್ ಶ್ರೀವಾಸ್ತವ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಜಿಪಿ, ಗೋಪಾಲ್​ಗಂಜ್ ಹಾಗೂ ಎಸ್​ಎಚ್​ಒ ಡಿಯೋರಿಯಾ ಪೊಲೀಸ್​ ಠಾಣೆಗೆ ಪತ್ರ ಬಂದಿತ್ತು. ನಾನು ಜೀವಂತವಾಗಿದ್ದೇನೆ ಮತ್ತು ಗಾಜಿಯಾಬಾದ್​ನಲ್ಲಿ ಪತ್ನಿಯೊಂದಿಗೆ ವಾಸವಿದ್ದೇನೆ ಎಂದು ಬರೆದಿದ್ದಾರೆ, ಫೋಟೊವನ್ನು ಕೂಡ ಕಳುಹಿಸಿದ್ದಾರೆ.

ಪಕ್ಕದ ಹಳ್ಳಿಯ ನೀಲಂ ಕುಮಾರಿ ಎಂಬಾಕೆ ಜತೆಗೆ ಓಡಿ ಹೋಗಿ ಗಾಜಿಯಾಬಾದ್​ನಲ್ಲಿ ಇರುವುದಾಗಿ ತಿಳಿಸಿದ್ದಾರೆ. ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಅಪಹರಣ ಹಾಗೂ ಕೊಲೆ ಪ್ರಕರಣ ಸುಳ್ಳು ಎಂದು ಹೇಳಿದ್ದಾರೆ. 5 ತಿಂಗಳ ಹಿಂದೆ ಸೋನು ನಾಪತ್ತೆಯಾಗಿದ್ದರು, ಕೆಲವು ವಸ್ತುಗಳನ್ನು ಖರೀದಿಸಲು ಪಾಟ್ನಾಗೆ ಹೋಗಿದ್ದರು, ಆದರೆ ಮನೆಗೆ ಹಿಂದಿರುಗಿರಲಿಲ್ಲ, ಎರಡು ದಿನಗಳ ನಂತರ ಡಿಯೋರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೃತದೇಹವೊಂದು ಕತ್ತು ಸೀಳಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಮತ್ತಷ್ಟು ಓದಿ: Bihar: 3 ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಆತನ ತಂದೆ ಹಾಗೂ ಕುಟುಂಬ ಸದಸ್ಯರು ಶವವನ್ನು ಗುರುತಿಸಿ ಅಪಹರಣ ಹಾಗೂ ಕೊಲೆಯ ಎಫ್​ಐಆರ್​ ದಾಖಲಿಸಿದ್ದರು. ಸೋನು ಅವರು ಪೊಲೀಸರಿಗೆ ಬರೆದ ಪತ್ರದ ಪ್ರಕಾರ, ಪಾಟ್ನಾದಿಂದ ಕೆಲವು ಸರಕುಗಳನ್ನು ಖರೀದಿಸಲು 50 ಸಾವಿರ ರೂ, ತೆಗೆದುಕೊಂಡು ಬಸ್ ಹತ್ತಿದ್ದರು, ಡಿಯೋರಿಯಾ ಚೌಕ್​ ತಲುಪಿದಾಗ ಯಾರೋ ಕರೆ ಮಾಡಿದ್ದಕ್ಕೆ ಅವರು ಬಸ್​ ಇಂದ ಇಳಿದಿದ್ದರು.

ಕೆಲ ಮೀಟರ್​ಗಳಷ್ಟು ನಡೆದ ನಂತರ ಕಣ್ಮರೆಯಾದರು, ಕೊನೆಯ ಮೊಬೈಲ್ ಕರೆ ಲೊಕೇಷನ್​ ಆಧಾರದ ಮೇಲೆ ಶೋಧ ನಡೆಸಲಾಯಿತು, ಮೃತ ದೇಹವನ್ನು ಶ್ರೀವಾಸ್ತವ್​ದು ಎಂದು ಪೋಷಕರು ಹೇಳಿದ್ದರು. ಬಳಿಕ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು. ಈಗ ಅವರ ಸಂದೇಶವನ್ನು ಕುಟುಂಬಕ್ಕೆ ರವಾನಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Tue, 2 May 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ