AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಜಿಯಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ; ಗೋಶಾಲೆಗೆ ಬೆಂಕಿ ತಗುಲಿ 50 ಹಸುಗಳು ಸಜೀವ ದಹನ

ಯಾವುದೇ ಮನುಷ್ಯರಿಗೆ ಅಪಾಯವಾಗಿಲ್ಲವಾದರೂ 50ಕ್ಕೂ ಹೆಚ್ಚು ದನಗಳು ಸಜೀವ ದಹನವಾಗಿವೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.

ಘಜಿಯಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ; ಗೋಶಾಲೆಗೆ ಬೆಂಕಿ ತಗುಲಿ 50 ಹಸುಗಳು ಸಜೀವ ದಹನ
ಬೆಂಕಿ ಅವಘಡ
TV9 Web
| Updated By: ಸುಷ್ಮಾ ಚಕ್ರೆ|

Updated on: Apr 11, 2022 | 9:34 PM

Share

ಘಜಿಯಾಬಾದ್: ಘಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಕೊಳೆಗೇರಿಯಲ್ಲಿ ಇಂದು ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಸಮೀಪದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿದ್ದರಿಂದ 50 ಹಸು ಹಾಗೂ ಕರುಗಳು ಬೆಂಕಿಗೆ ಆಹುತಿಯಾಗಿವೆ. ವರದಿಗಳ ಪ್ರಕಾರ, ಬೆಂಕಿ ಹೊತ್ತಿಕೊಂಡ ಸ್ಥಳದ ಸಮೀಪದಲ್ಲಿಯೇ ಇಂಡಿಯನ್ ಆಯಿಲ್ ಗೋಡೌನ್ ಇದೆ. ಹೀಗಾಗಿ, ಕೆಲವು ಎಲ್‌ಪಿಜಿ ಸಿಲಿಂಡರ್ (LPG Cylinder) ಸ್ಫೋಟಗೊಂಡಿದ್ದು, ಆ ಶಬ್ದಕ್ಕೆ ಸ್ಥಳೀಯರು ಓಡಿಬಂದು ನೋಡಿದಾಗ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿರುವ ವಿಷಯ ಗೊತ್ತಾಗಿದೆ.

ವಿಷಯ ತಿಳಿದ ಕೂಡಲೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿ ಪಶುವೈದ್ಯರನ್ನೂ ನಿಯೋಜಿಸಲಾಗಿತ್ತು. ಯಾವುದೇ ಮನುಷ್ಯರಿಗೆ ಅಪಾಯವಾಗಿಲ್ಲವಾದರೂ 50ಕ್ಕೂ ಹೆಚ್ಚು ದನಗಳು ಸಜೀವ ದಹನವಾಗಿವೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಶ್ರೀ ಕೃಷ್ಣ ಗೋಶಾಲಾ ಟ್ರಸ್ಟ್‌ನ ಅಧ್ಯಕ್ಷ ಸೂರಜ್ ಪಂಡಿತ್ ಎಂಬ ವ್ಯಕ್ತಿಯೊಬ್ಬರು 100ಕ್ಕೂ ಹೆಚ್ಚು ಹಸುಗಳು ವಾಸಿಸುವ ಗೋಶಾಲೆಯನ್ನು ನಡೆಸುತ್ತಿದ್ದರು. ಅವರ ಗೋಶಾಲೆಗೆ ಬೆಂಕಿ ಹೊತ್ತಿಕೊಂಡಿದೆ.

ಸ್ಲಂಗಳಲ್ಲಿ ಭೀಕರ ಬೆಂಕಿಯಿಂದಾಗಿ, ಕಾಲ್ತುಳಿತ ಕೂಡ ಸಂಭವಿಸಿದೆ. ಅಷ್ಟೇ ಅಲ್ಲ, ಪಕ್ಕದ ಗೋಡೌನ್ ಮತ್ತು ಮನೆಗಳಲ್ಲಿ ಇಟ್ಟಿದ್ದ ಸಣ್ಣ ಸಿಲಿಂಡರ್‌ಗಳೂ ಬೆಂಕಿಗೆ ತಗುಲಿ ಸ್ಫೋಟಗೊಂಡಿವೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೆಚ್ಚು ಭೀಕರ ಸ್ವರೂಪ ಪಡೆದುಕೊಂಡಿದೆ. ಗೋಶಾಲೆಯಲ್ಲಿ ನೂರಾರು ಹಸುಗಳು ಇದ್ದವು. ಆ ಎಲ್ಲ ಹಸುಗಳು ಸ್ಥಳದಲ್ಲೇ ಸುಟ್ಟು ಕರಕಲಾಗಿವೆ. ಹಲವಾರು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂತ್ರಸ್ತರಿಗೆ 24 ಗಂಟೆಗಳಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸೂಚನೆಗಳನ್ನು ನೀಡಿದ್ದಾರೆ. ಇದರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಿ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವಂತೆ ಸಿಎಂ ಯೋಗಿ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ಬೈಕ್​​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಸ್ ಬೆಂಕಿಗಾಹುತಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?