AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಜಿಯಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ; ಗೋಶಾಲೆಗೆ ಬೆಂಕಿ ತಗುಲಿ 50 ಹಸುಗಳು ಸಜೀವ ದಹನ

ಯಾವುದೇ ಮನುಷ್ಯರಿಗೆ ಅಪಾಯವಾಗಿಲ್ಲವಾದರೂ 50ಕ್ಕೂ ಹೆಚ್ಚು ದನಗಳು ಸಜೀವ ದಹನವಾಗಿವೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.

ಘಜಿಯಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ; ಗೋಶಾಲೆಗೆ ಬೆಂಕಿ ತಗುಲಿ 50 ಹಸುಗಳು ಸಜೀವ ದಹನ
ಬೆಂಕಿ ಅವಘಡ
TV9 Web
| Edited By: |

Updated on: Apr 11, 2022 | 9:34 PM

Share

ಘಜಿಯಾಬಾದ್: ಘಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಕೊಳೆಗೇರಿಯಲ್ಲಿ ಇಂದು ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಸಮೀಪದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿದ್ದರಿಂದ 50 ಹಸು ಹಾಗೂ ಕರುಗಳು ಬೆಂಕಿಗೆ ಆಹುತಿಯಾಗಿವೆ. ವರದಿಗಳ ಪ್ರಕಾರ, ಬೆಂಕಿ ಹೊತ್ತಿಕೊಂಡ ಸ್ಥಳದ ಸಮೀಪದಲ್ಲಿಯೇ ಇಂಡಿಯನ್ ಆಯಿಲ್ ಗೋಡೌನ್ ಇದೆ. ಹೀಗಾಗಿ, ಕೆಲವು ಎಲ್‌ಪಿಜಿ ಸಿಲಿಂಡರ್ (LPG Cylinder) ಸ್ಫೋಟಗೊಂಡಿದ್ದು, ಆ ಶಬ್ದಕ್ಕೆ ಸ್ಥಳೀಯರು ಓಡಿಬಂದು ನೋಡಿದಾಗ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿರುವ ವಿಷಯ ಗೊತ್ತಾಗಿದೆ.

ವಿಷಯ ತಿಳಿದ ಕೂಡಲೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿ ಪಶುವೈದ್ಯರನ್ನೂ ನಿಯೋಜಿಸಲಾಗಿತ್ತು. ಯಾವುದೇ ಮನುಷ್ಯರಿಗೆ ಅಪಾಯವಾಗಿಲ್ಲವಾದರೂ 50ಕ್ಕೂ ಹೆಚ್ಚು ದನಗಳು ಸಜೀವ ದಹನವಾಗಿವೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಶ್ರೀ ಕೃಷ್ಣ ಗೋಶಾಲಾ ಟ್ರಸ್ಟ್‌ನ ಅಧ್ಯಕ್ಷ ಸೂರಜ್ ಪಂಡಿತ್ ಎಂಬ ವ್ಯಕ್ತಿಯೊಬ್ಬರು 100ಕ್ಕೂ ಹೆಚ್ಚು ಹಸುಗಳು ವಾಸಿಸುವ ಗೋಶಾಲೆಯನ್ನು ನಡೆಸುತ್ತಿದ್ದರು. ಅವರ ಗೋಶಾಲೆಗೆ ಬೆಂಕಿ ಹೊತ್ತಿಕೊಂಡಿದೆ.

ಸ್ಲಂಗಳಲ್ಲಿ ಭೀಕರ ಬೆಂಕಿಯಿಂದಾಗಿ, ಕಾಲ್ತುಳಿತ ಕೂಡ ಸಂಭವಿಸಿದೆ. ಅಷ್ಟೇ ಅಲ್ಲ, ಪಕ್ಕದ ಗೋಡೌನ್ ಮತ್ತು ಮನೆಗಳಲ್ಲಿ ಇಟ್ಟಿದ್ದ ಸಣ್ಣ ಸಿಲಿಂಡರ್‌ಗಳೂ ಬೆಂಕಿಗೆ ತಗುಲಿ ಸ್ಫೋಟಗೊಂಡಿವೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೆಚ್ಚು ಭೀಕರ ಸ್ವರೂಪ ಪಡೆದುಕೊಂಡಿದೆ. ಗೋಶಾಲೆಯಲ್ಲಿ ನೂರಾರು ಹಸುಗಳು ಇದ್ದವು. ಆ ಎಲ್ಲ ಹಸುಗಳು ಸ್ಥಳದಲ್ಲೇ ಸುಟ್ಟು ಕರಕಲಾಗಿವೆ. ಹಲವಾರು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂತ್ರಸ್ತರಿಗೆ 24 ಗಂಟೆಗಳಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸೂಚನೆಗಳನ್ನು ನೀಡಿದ್ದಾರೆ. ಇದರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಿ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವಂತೆ ಸಿಎಂ ಯೋಗಿ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ಬೈಕ್​​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಸ್ ಬೆಂಕಿಗಾಹುತಿ

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ