AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗೆಳೆಯರನ್ನು ಬಂಧಿಸಿದ್ದಾರೆ.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 03, 2021 | 8:45 PM

Share

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಕೃತ್ಯಕ್ಕೆ ಒಳಗಾಗಿರುವ ಸಂದೀಪ್ ಎಂಬ ಯುವಕ ನೋಯ್ಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಆತ ಗುಣಮುಖನಾಗಲು ಆರು ತಿಂಗಳೇ ಬೇಕಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಯುವಕನ ಸ್ನೇಹಿತರಾದ ಅಂಕಿತ್ ಮತ್ತು ಗೌತಮ್ ಎಂಬ ಈರ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ನೋಯ್ಡಾದಲ್ಲಿ ಹಾನಿಗೊಳಗಾದ ಯುವಕನೊಂದಿಗೆ ಲಘು ಆಹಾರಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಅಂಕಿತ್ ಮತ್ತು ಗೌತಮ್ ಏರ್ ಕಂಪ್ರೆಸರ್​ ಪೈಪ್​ಅನ್ನು ತಮಾಷೆಗೆಂದು ಸಂದೀಪ್ ಅವರ ಗುಪ್ತಾಂಗಕ್ಕೆ ಹಾಕಿ ಅದರಿಂದ ಪ್ರೆಶರ್ ರಿಲೀಸ್ ಮಾಡಿದ್ದಾರೆ. ಈ ನಡುವೆ ಸಂದೀಪ್ ಓಡಲು ಪ್ರಯತ್ನಿಸಿದರೂ ತಕ್ಷಣವೇ ರಕ್ತ ವಾಂತಿಯಾಗಲು ಪ್ರಾರಂಭವಾಗಿದೆ. ಸ್ಥಳದಲ್ಲಿದ್ದವರೆಲ್ಲರೂ ದೌಡಾಯಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂದೀಪ್​ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸಂದೀಪ್​ನನ್ನು ಆಸ್ಪತ್ರೆಗೆ ಕರೆತರುವಾಗ ಆತನ ಹೊಟ್ಟೆ ಊದಿಕೊಂಡಿತ್ತು. ಸಣ್ಣ ಕರುಳು ಹಾಗೂ ಗುಪ್ತಾಂಗವು ಛಿದ್ರಗೊಂಡಿತ್ತು ಎಂದು ಆತನಿಗೆ ಚಿಕಿತ್ಸೆ ನೀಡುತ್ತಿರುವ ಪ್ರಕಾಶ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಅರುಣಾ ರೆಡ್ಡಿ ತಿಳಿಸಿದ್ದಾರೆ. ಆತನ ಗೆಳೆಯರನ್ನು ಬಂಧಿಸಿರುವ ಪೊಲೀಸರು ಐಪಿಸಿ 307(ಕೊಲೆಗೆ ಯತ್ನ) ಮತ್ತು ಐಪಿಸಿ 323 (ಸ್ವಯಂಪ್ರೇರಣೆಯಿಂದ ಹಾನಿಗೆ ಯತ್ನ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹರಿಹರದಲ್ಲಿ 3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ

ಕೊವಿಡ್​ 19 ಮಾತ್ರೆಯೆಂದು ವಿಷದ ಮಾತ್ರೆ ಕೊಟ್ಟು ಮೂವರ ಹತ್ಯೆ; ಆರೋಗ್ಯ ಕಾರ್ಯಕರ್ತೆಯೂ ಕೊಲೆ ಸಂಚಿನಲ್ಲಿ ಭಾಗಿ

(Ghaziabad Man’s intestines burst when friends inserted air compressor)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ