AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗೆಳೆಯರನ್ನು ಬಂಧಿಸಿದ್ದಾರೆ.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 03, 2021 | 8:45 PM

Share

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಕೃತ್ಯಕ್ಕೆ ಒಳಗಾಗಿರುವ ಸಂದೀಪ್ ಎಂಬ ಯುವಕ ನೋಯ್ಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಆತ ಗುಣಮುಖನಾಗಲು ಆರು ತಿಂಗಳೇ ಬೇಕಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಯುವಕನ ಸ್ನೇಹಿತರಾದ ಅಂಕಿತ್ ಮತ್ತು ಗೌತಮ್ ಎಂಬ ಈರ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ನೋಯ್ಡಾದಲ್ಲಿ ಹಾನಿಗೊಳಗಾದ ಯುವಕನೊಂದಿಗೆ ಲಘು ಆಹಾರಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಅಂಕಿತ್ ಮತ್ತು ಗೌತಮ್ ಏರ್ ಕಂಪ್ರೆಸರ್​ ಪೈಪ್​ಅನ್ನು ತಮಾಷೆಗೆಂದು ಸಂದೀಪ್ ಅವರ ಗುಪ್ತಾಂಗಕ್ಕೆ ಹಾಕಿ ಅದರಿಂದ ಪ್ರೆಶರ್ ರಿಲೀಸ್ ಮಾಡಿದ್ದಾರೆ. ಈ ನಡುವೆ ಸಂದೀಪ್ ಓಡಲು ಪ್ರಯತ್ನಿಸಿದರೂ ತಕ್ಷಣವೇ ರಕ್ತ ವಾಂತಿಯಾಗಲು ಪ್ರಾರಂಭವಾಗಿದೆ. ಸ್ಥಳದಲ್ಲಿದ್ದವರೆಲ್ಲರೂ ದೌಡಾಯಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂದೀಪ್​ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸಂದೀಪ್​ನನ್ನು ಆಸ್ಪತ್ರೆಗೆ ಕರೆತರುವಾಗ ಆತನ ಹೊಟ್ಟೆ ಊದಿಕೊಂಡಿತ್ತು. ಸಣ್ಣ ಕರುಳು ಹಾಗೂ ಗುಪ್ತಾಂಗವು ಛಿದ್ರಗೊಂಡಿತ್ತು ಎಂದು ಆತನಿಗೆ ಚಿಕಿತ್ಸೆ ನೀಡುತ್ತಿರುವ ಪ್ರಕಾಶ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಅರುಣಾ ರೆಡ್ಡಿ ತಿಳಿಸಿದ್ದಾರೆ. ಆತನ ಗೆಳೆಯರನ್ನು ಬಂಧಿಸಿರುವ ಪೊಲೀಸರು ಐಪಿಸಿ 307(ಕೊಲೆಗೆ ಯತ್ನ) ಮತ್ತು ಐಪಿಸಿ 323 (ಸ್ವಯಂಪ್ರೇರಣೆಯಿಂದ ಹಾನಿಗೆ ಯತ್ನ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹರಿಹರದಲ್ಲಿ 3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ

ಕೊವಿಡ್​ 19 ಮಾತ್ರೆಯೆಂದು ವಿಷದ ಮಾತ್ರೆ ಕೊಟ್ಟು ಮೂವರ ಹತ್ಯೆ; ಆರೋಗ್ಯ ಕಾರ್ಯಕರ್ತೆಯೂ ಕೊಲೆ ಸಂಚಿನಲ್ಲಿ ಭಾಗಿ

(Ghaziabad Man’s intestines burst when friends inserted air compressor)

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?