AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗೆಳೆಯರನ್ನು ಬಂಧಿಸಿದ್ದಾರೆ.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 03, 2021 | 8:45 PM

Share

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಕೃತ್ಯಕ್ಕೆ ಒಳಗಾಗಿರುವ ಸಂದೀಪ್ ಎಂಬ ಯುವಕ ನೋಯ್ಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಆತ ಗುಣಮುಖನಾಗಲು ಆರು ತಿಂಗಳೇ ಬೇಕಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಯುವಕನ ಸ್ನೇಹಿತರಾದ ಅಂಕಿತ್ ಮತ್ತು ಗೌತಮ್ ಎಂಬ ಈರ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ನೋಯ್ಡಾದಲ್ಲಿ ಹಾನಿಗೊಳಗಾದ ಯುವಕನೊಂದಿಗೆ ಲಘು ಆಹಾರಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಅಂಕಿತ್ ಮತ್ತು ಗೌತಮ್ ಏರ್ ಕಂಪ್ರೆಸರ್​ ಪೈಪ್​ಅನ್ನು ತಮಾಷೆಗೆಂದು ಸಂದೀಪ್ ಅವರ ಗುಪ್ತಾಂಗಕ್ಕೆ ಹಾಕಿ ಅದರಿಂದ ಪ್ರೆಶರ್ ರಿಲೀಸ್ ಮಾಡಿದ್ದಾರೆ. ಈ ನಡುವೆ ಸಂದೀಪ್ ಓಡಲು ಪ್ರಯತ್ನಿಸಿದರೂ ತಕ್ಷಣವೇ ರಕ್ತ ವಾಂತಿಯಾಗಲು ಪ್ರಾರಂಭವಾಗಿದೆ. ಸ್ಥಳದಲ್ಲಿದ್ದವರೆಲ್ಲರೂ ದೌಡಾಯಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂದೀಪ್​ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸಂದೀಪ್​ನನ್ನು ಆಸ್ಪತ್ರೆಗೆ ಕರೆತರುವಾಗ ಆತನ ಹೊಟ್ಟೆ ಊದಿಕೊಂಡಿತ್ತು. ಸಣ್ಣ ಕರುಳು ಹಾಗೂ ಗುಪ್ತಾಂಗವು ಛಿದ್ರಗೊಂಡಿತ್ತು ಎಂದು ಆತನಿಗೆ ಚಿಕಿತ್ಸೆ ನೀಡುತ್ತಿರುವ ಪ್ರಕಾಶ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಅರುಣಾ ರೆಡ್ಡಿ ತಿಳಿಸಿದ್ದಾರೆ. ಆತನ ಗೆಳೆಯರನ್ನು ಬಂಧಿಸಿರುವ ಪೊಲೀಸರು ಐಪಿಸಿ 307(ಕೊಲೆಗೆ ಯತ್ನ) ಮತ್ತು ಐಪಿಸಿ 323 (ಸ್ವಯಂಪ್ರೇರಣೆಯಿಂದ ಹಾನಿಗೆ ಯತ್ನ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹರಿಹರದಲ್ಲಿ 3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ

ಕೊವಿಡ್​ 19 ಮಾತ್ರೆಯೆಂದು ವಿಷದ ಮಾತ್ರೆ ಕೊಟ್ಟು ಮೂವರ ಹತ್ಯೆ; ಆರೋಗ್ಯ ಕಾರ್ಯಕರ್ತೆಯೂ ಕೊಲೆ ಸಂಚಿನಲ್ಲಿ ಭಾಗಿ

(Ghaziabad Man’s intestines burst when friends inserted air compressor)

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ