AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗೆಳೆಯರನ್ನು ಬಂಧಿಸಿದ್ದಾರೆ.

ಘಾಜಿಯಾಬಾದ್: ಗೆಳೆಯರ ಹುಡುಗಾಟಕ್ಕೆ ಯುವಕನ ಕರುಳು ಛಿದ್ರ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on: Jul 03, 2021 | 8:45 PM

Share

ಘಾಜಿಯಾಬಾದ್​ನಲ್ಲಿ ತಮಾಷೆಗೆಂದು ಈರ್ವರು ಗೆಳೆಯರು 28 ವರ್ಷದ ಯುವಕನ ಗುಪ್ತಾಂಗಕ್ಕೆ ಏರ್ ಕಂಪ್ರೆಸರ್​ ಅನ್ನು ಹಾಕಿದ್ದರಿಂದ ಆತನ ಕರುಳಿನ ಭಾಗವು ಗಂಭೀರವಾಗಿ ಹಾನಿಗೊಳಗಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಕೃತ್ಯಕ್ಕೆ ಒಳಗಾಗಿರುವ ಸಂದೀಪ್ ಎಂಬ ಯುವಕ ನೋಯ್ಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಆತ ಗುಣಮುಖನಾಗಲು ಆರು ತಿಂಗಳೇ ಬೇಕಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಯುವಕನ ಸ್ನೇಹಿತರಾದ ಅಂಕಿತ್ ಮತ್ತು ಗೌತಮ್ ಎಂಬ ಈರ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ನೋಯ್ಡಾದಲ್ಲಿ ಹಾನಿಗೊಳಗಾದ ಯುವಕನೊಂದಿಗೆ ಲಘು ಆಹಾರಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಅಂಕಿತ್ ಮತ್ತು ಗೌತಮ್ ಏರ್ ಕಂಪ್ರೆಸರ್​ ಪೈಪ್​ಅನ್ನು ತಮಾಷೆಗೆಂದು ಸಂದೀಪ್ ಅವರ ಗುಪ್ತಾಂಗಕ್ಕೆ ಹಾಕಿ ಅದರಿಂದ ಪ್ರೆಶರ್ ರಿಲೀಸ್ ಮಾಡಿದ್ದಾರೆ. ಈ ನಡುವೆ ಸಂದೀಪ್ ಓಡಲು ಪ್ರಯತ್ನಿಸಿದರೂ ತಕ್ಷಣವೇ ರಕ್ತ ವಾಂತಿಯಾಗಲು ಪ್ರಾರಂಭವಾಗಿದೆ. ಸ್ಥಳದಲ್ಲಿದ್ದವರೆಲ್ಲರೂ ದೌಡಾಯಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂದೀಪ್​ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸಂದೀಪ್​ನನ್ನು ಆಸ್ಪತ್ರೆಗೆ ಕರೆತರುವಾಗ ಆತನ ಹೊಟ್ಟೆ ಊದಿಕೊಂಡಿತ್ತು. ಸಣ್ಣ ಕರುಳು ಹಾಗೂ ಗುಪ್ತಾಂಗವು ಛಿದ್ರಗೊಂಡಿತ್ತು ಎಂದು ಆತನಿಗೆ ಚಿಕಿತ್ಸೆ ನೀಡುತ್ತಿರುವ ಪ್ರಕಾಶ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಅರುಣಾ ರೆಡ್ಡಿ ತಿಳಿಸಿದ್ದಾರೆ. ಆತನ ಗೆಳೆಯರನ್ನು ಬಂಧಿಸಿರುವ ಪೊಲೀಸರು ಐಪಿಸಿ 307(ಕೊಲೆಗೆ ಯತ್ನ) ಮತ್ತು ಐಪಿಸಿ 323 (ಸ್ವಯಂಪ್ರೇರಣೆಯಿಂದ ಹಾನಿಗೆ ಯತ್ನ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹರಿಹರದಲ್ಲಿ 3 ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ

ಕೊವಿಡ್​ 19 ಮಾತ್ರೆಯೆಂದು ವಿಷದ ಮಾತ್ರೆ ಕೊಟ್ಟು ಮೂವರ ಹತ್ಯೆ; ಆರೋಗ್ಯ ಕಾರ್ಯಕರ್ತೆಯೂ ಕೊಲೆ ಸಂಚಿನಲ್ಲಿ ಭಾಗಿ

(Ghaziabad Man’s intestines burst when friends inserted air compressor)

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್